ಬೆಂಗಳೂರು: ಆಸ್ತಿ ತೆರಿಗೆ ಸುಸ್ತಿದಾರರ ವಿರುದ್ಧ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಂಡಿದ್ದು, ರಾಜ್ಯ ರಾಜಧಾನಿಯ ಎರಡು ಪ್ರಧಾನ ಕಟ್ಟಡಗಳು ಇನ್ನೂ ಸೇವಾ ಶುಲ್ಕದ ಬಾಕಿ ಪಾವತಿಸಿಲ್ಲ. ಇಲ್ಲಿಯೇ ಮಂತ್ರಿಗಳು ಮತ್ತು ಅಧಿಕಾರಿಗಳು ಕುಳಿತು ಎಲ್ಲಾ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ. ಇದು ಪರಿಸ್ಥಿತಿಯನ್ನು ಮತ್ತಷ್ಟು ವ್ಯಂಗ್ಯವನ್ನಾಗಿಸಿದೆ.
ಹೌದು… ಮಂತ್ರಿಗಳು, ಅಧಿಕಾರಿಗಳು ರಾಜ್ಯದ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ವಿಧಾನಸೌಧ ಮತ್ತು ವಿಕಾಸ ಸೌಧಗಳೇ ಈಗ ಸುದ್ದಿಯಲ್ಲಿವೆ. ಎರಡು ಕಟ್ಟಡಗಳ ಸೇವಾ ಶುಲ್ಕ ಕಟ್ಟಿಲ್ಲ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) 15 ವರ್ಷಗಳಿಂದ ಸೇವಾ ಶುಲ್ಕ ಕಟ್ಟಿಲ್ಲ ಅದು 7 ಕೋಟಿ ರೂಪಾಯಿಯಾಗಿದೆ. ವಿಧಾನಸೌಧಕ್ಕೆ 2.29 ಕೋಟಿ ಹಾಗೂ ವಿಕಾಸ ಸೌಧದಿಂದ 5.32 ಕೋಟಿ ಸೇವಾ ಶುಲ್ಕ ಬಾಕಿ ಇದೆ.
2008-09 ರಿಂದ 2015-16 ರವರೆಗೆ ವಿಧಾನಸೌಧ ವಾರ್ಷಿಕವಾಗಿ 11,10,876 ರೂ.ಗಳನ್ನು ಪಾವತಿಸಬೇಕಾಗಿತ್ತು, ನಂತರ 2016-17 ರಿಂದ 2020-21 ರವರೆಗೆ ದಂಡದೊಂದಿಗೆ 13,88,595 ರೂಪಾಯಿ ನೀಡಬೇಕಿತ್ತು. ನಂತರ 2021-22 ರಿಂದ 2023-24 ರವರೆಗೆ 19,9,704 ರೂಪಾಯಿ ನೀಡಬೇಕು.
ವಿಧಾನಸೌಧದ ವಿಷಯಕ್ಕೆ ಬಂದರೆ, 2008-09 ರಿಂದ 2015-16 ರವರೆಗೆ 27,74,984 ರೂ.ಗಳ ಬಾಕಿಯನ್ನು ಸರ್ಕಾರ ಪಾವತಿಸಬೇಕಾಗಿತ್ತು, ಇದು ನಂತರ 2020-21 ರವರೆಗೆ 34,68,730 ರೂ.ಗಳಿಗೆ ಮತ್ತು ನಂತರ 2021-22 ರಿಂದ 2023-24ಕ್ಕೆ 34,96,480 ರೂಪಾಯಿಗೆ ಏರಿದೆ.
”ವಿಕಾಸ ಸೌಧಕ್ಕೆ ಸರ್ಕಾರದಿಂದ ಬಾಕಿ ಉಳಿದಿರುವ ಮೊತ್ತ 5,00,32,962 ಮತ್ತು ವಿಧಾನಸೌಧಕ್ಕೆ 2,00,29,095 ರೂಪಾಯಿಗಳನ್ನು ಪಾವತಿಸಬೇಕು. ವಿಶೇಷ ನಿಬಂಧನೆಗಳ ಅಡಿಯಲ್ಲಿ, ಎಲ್ಲಾ ಸರ್ಕಾರಿ (ಕೇಂದ್ರ ಮತ್ತು ರಾಜ್ಯ) ಕಟ್ಟಡಗಳಿಗೆ ಆಸ್ತಿ ತೆರಿಗೆ ಪಾವತಿಯಿಂದ ವಿನಾಯಿತಿ ನೀಡಲು ನಿರ್ಧರಿಸಲಾಯಿತು. ಆದರೆ ಅವರು ಸೇವಾ ಶುಲ್ಕವನ್ನು ಪಾವತಿಸಬೇಕಾಗುತ್ತದೆ”.
ಇನ್ನು, ಪ್ರಕರಣದ ಬಗ್ಗೆ ಮಾತನಾಡಿರುವ ಅಧಿಕಾರಿಯೊಬ್ಬರು, “ಎಲ್ಲಾ ಸರ್ಕಾರಿ ಕಚೇರಿಗಳು ಪಾವತಿಸುತ್ತಿರುವಾಗ, ನಾವು ಯಾವುದೇ ಸರ್ಕಾರಿ ಏಜೆನ್ಸಿಗೆ ವಿನಾಯಿತಿ ನೀಡಲು ಸಾಧ್ಯವಿಲ್ಲ. ಜುಲೈ 31 ಕೊನೆಯ ದಿನವಾಗಿದ್ದು, ನಂತರ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಹೆಸರು ಹೇಳಲಿಚ್ಛಿಸದ ಬಿಬಿಎಂಪಿ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಿಬಿಎಂಪಿ ಈ ಬಗ್ಗೆ ಸರ್ಕಾರಕ್ಕೆ ಹಲವು ಬಾರಿ ನೋಟಿಸ್ಗಳನ್ನು ಕಳುಹಿಸಿದೆ.
ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ: ಹೆಸರು ಬದಲಾವಣೆಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ


