BBMP
Loading ...

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಳಿಬಂದಿರುವ ಮುಡಾ ಹಾಗೂ ವಾಲ್ಮೀಕಿ ಹಗರಣದ ವಿರುದ್ಧ ಹೋರಾಟಕ್ಕಿಳಿದಿರುವ ಬಿಜೆಪಿ ಮತ್ತು ಜೆಡಿಎಸ್​ ಬೆಂಗಳೂರು ಟು ಮೈಸೂರು ಪಾದಯಾತ್ರೆ ಕೈಗೊಂಡಿವೆ. ಇದೇ ಆಗಸ್ಟ್​ 3ರಿಂದ ಪಾದಯಾತ್ರೆ ಶುರುವಾಗಲಿದ್ದು, ಇದಕ್ಕೆ ಟಕ್ಕರ್​ ಕೊಡಲು ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮೆಗಾ ಪ್ಲ್ಯಾನ್ ರೆಡಿ ಮಾಡಿದ್ದಾರೆ. ದೋಸ್ತಿ ಪಕ್ಷಗಳು ಯಾವೆಲ್ಲಾ ಮಾರ್ಗದಲ್ಲಿ ಪಾದಯಾತ್ರೆ ನಡೆಯುತ್ತೋ ಅದೇ ಮಾರ್ಗದಲ್ಲಿ ಕಾಂಗ್ರೆಸ್​​ ಜನಾಂದೋಲನ ಕಾರ್ಯಕ್ರಮ ನಡೆಸುವುದಾಗಿ ಡಿಕೆ ಶಿವಕುಮಾರ್​ ಘೋಷಣೆ ಮಾಡಿದ್ದಾರೆ.

ದೆಹಲಿಯಲ್ಲಿ ಹೆಚ್​ಡಿ ಕುಮಾರಸ್ವಾಮಿ ಜೊತೆ ಬಿಜೆಪಿ ನಾಯಕರು ಮಾತನಾಡಿ ಪಾದಯಾತ್ರೆ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡುತ್ತಿದ್ದಂತೆ ಇತ್ತ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತುರ್ತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ಬಿಜೆಪಿ, ಜೆಡಿಎಸ್‌ ಪಾದಯಾತ್ರೆ ಬಗ್ಗೆ ಬಹಳ ಗೊಂದಲ ಇತ್ತು. ಈಗ ಗೊಂದಲ ಬಗೆಹರಿಸಿಕೊಂಡು ಪಾದಯಾತ್ರೆ ನಡೆಸುವುದಾಗಿ ಹೇಳಿದ್ದಾರೆ ಎಂದರು.

ಬಿಜೆಪಿ, ಜೆಡಿಎಸ್‌ ಪಾದಯಾತ್ರೆ ಬಗ್ಗೆ ನಮ್ಮದು ಯಾವುದೇ ಅಭ್ಯಂತರವಿಲ್ಲ. ಬೆಂಗಳೂರು ನಗರದಲ್ಲಿ ಮಾತ್ರ ಪಾದಯಾತ್ರೆ ಬಗ್ಗೆ ಕೆಲ ನಿರ್ಬಂಧವಿದೆ. ಬೆಂಗಳೂರು ನಗರ ಹೊರತುಪಡಿಸಿ ಪಾದಯಾತ್ರೆಗೆ ನಮ್ಮ ಅಭ್ಯಂತರವಿಲ್ಲ ಎಂದು ಹೇಳಿದ್ದಾರೆ.

ಬಿಜೆಪಿ, ಜೆಡಿಎಸ್‌ ಪಾದಯಾತ್ರೆ ತೆರಳುವ ಕಡೆ ಸಭೆ ನಡೆಸಲಾಗುವುದು. ಸಭೆಯಲ್ಲಿ ಎಲ್ಲರೂ ಭಾಗಿಯಾಗುವಂತೆ ಡಿಕೆ ಶಿವಕುಮಾರ ಮನವಿ ಮಾಡಿದ್ದಾರೆ. ಪಾದಯಾತ್ರೆ ಮುನ್ನವೇ ಬಿಡದಿಯಲ್ಲಿ ಸಭೆ ನಡೆಸಿ ಬಿಜೆಪಿ ಅವಧಿಯಲ್ಲಿ ನಡೆದ ಭ್ರಷ್ಟಾಚಾರಗಳ ಬಗ್ಗೆ ಪ್ರಶ್ನೆ ಮಾಡಲಿದ್ದೇವೆ. ಕೇಂದ್ರ ಸರ್ಕಾರದ ಅನ್ಯಾಯದ ವಿಚಾರಕ್ಕೆ ಉತ್ತರ ಕೊಡಬೇಕಿದೆ ಎಂದು ಕಿಡಿಕಾರಿದ್ದಾರೆ.

ಆಗಸ್ಟ್ ರಂದು 2 ಬಿಡದಿ, ಆಗಸ್ಟ್ 3ರಂದು ರಾಮನಗರದಲ್ಲಿ ಸಭೆ, ಆಗಸ್ಟ್ 4 ಚನ್ನಪಟ್ಟಣ, ಆಗಸ್ಟ್ 5 ಮದ್ದೂರು, ಆಗಸ್ಟ್ 6 ಮಂಡ್ಯ, ಆಗಸ್ಟ್ 9ರಂದು ಮೈಸೂರಿನಲ್ಲಿ ಬಹಿರಂಗ ಸಭೆ ನಡೆಸಲಿದ್ದೇವೆ. ಬಿಜೆಪಿ, ಜೆಡಿಎಸ್‌ ವಿರುದ್ಧ ನಾವು ಯಾವುದೇ ಪಾದಯಾತ್ರೆ ನಡೆಸಲ್ಲ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅನ್ಯಾಯ ಖಂಡಿಸಿ ಸಭೆ ನಡೆಸುತ್ತೇವೆ. ನಾಳೆ ಬಿಡದಿಯಲ್ಲಿ ಸಭೆ ನಡೆಸಿ ಕೆಲ ಪ್ರಶ್ನೆಗಳನ್ನು ಕೇಳುತ್ತೇವೆ ಎಂದಿದ್ದಾರೆ.

ಮೆಜೆಸ್ಟಿಕ್​ನಲ್ಲಿ ಪತ್ತೆಯಾಗಿದ್ದು ಕುರಿ ಮಾಂಸವೋ, ನಾಯಿ ಮಾಂಸವೋ!?: ಲ್ಯಾಬ್ ರಿಪೋರ್ಟ್‌ನಲ್ಲಿ ಬಯಲಾಯ್ತು ಅಸಲಿಯತ್ತು!

Leave a Reply

Your email address will not be published. Required fields are marked *