ನೆಲಮಂಗಲ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದಂತ ಹೆಚ್.ಡಿ ಕುಮಾರಸ್ವಾಮಿ ಸಂಸದರಾದ ಬಳಿಕ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದೆ. ಈ ವೇಳೆಯಲ್ಲೇ ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ನಾನೇ ಅಭ್ಯರ್ಥಿ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಘೋಷಣೆ ಮಾಡಿದ್ದಾರೆ.
ಬೆಂಗಳೂರು ಗ್ರಾಮಾಂತರದ ನೆಲಮಂಗಲದಲ್ಲಿ ವೀರಭದ್ರೇಶ್ವರ ದೇವಾಲಯಕ್ಕೆ ಭೇಟಿ ನೀಡಿದ ಬಳಿಕ, ಸುದ್ದಿಗಾರರೊಂದಿಗೆ ಮಾತನಾಡಿದಂತ ಡಿಸಿಎಂ ಡಿಕೆ ಶಿವಕುಮಾರ್ ಅವರು, ಚನ್ನಪಟ್ಟಣ ಬೈ ಎಲೆಕ್ಷನ್ ಗೆ ನಾನೇ ಅಭ್ಯರ್ಥಿಯಾಗಿದ್ದೇನೆ ಎಂಬುದಾಗಿ ಘೋಷಿಸಿದರು.
ಗ್ಯಾರಂಟಿ ಯೋಜನೆಯಲ್ಲಿ ಯಾವುದೇ ಬದಲಾವಣೆಯಿಲ್ಲ. ಯಾವ ಸಚಿವರು ಏನೂ ಮಾತನಾಡಲ್ಲ. ಏನೂ ಇಲ್ಲ. ಯಾವುದೇ ಬದಲಾವಣೆಯಿಲ್ಲ. ಗ್ಯಾರಂಟಿ ಯೋಜನೆಗಳು ಮುಂದುವರೆಯಲಿದ್ದಾವೆ ಎಂಬುದಾಗಿ ಸ್ಪಷ್ಟ ಪಡಿಸಿದರು.
ಕರ್ತವ್ಯ ಲೋಪದಡಿ ಅಮಾನತುಗೊಂಡಿದ್ದ ಪೊಲೀಸ್ ಪೇದೆಗೆ ಮುಖ್ಯಮಂತ್ರಿ ಪದಕ: ಸರ್ಕಾರಕ್ಕೆ ಮುಜುಗರ


