BBMP
Loading ...

ಬೆಂಗಳೂರು: ಬೆಂಗಳೂರಿನಲ್ಲಿ ಗಣೇಶ ಹಬ್ಬಕ್ಕೆ ಬಿಬಿಎಂಪಿ ಗ್ರೀನ್ ಸಿಗ್ನಲ್ ಕೊಟ್ಟಿದೆ. ಇಂದು(ಶುಕ್ರವಾರ) ಗೌರಿ ಗಣೇಶ ಹಬ್ಬದ ಹಿನ್ನಲೆ ಬಿಬಿಎಂಪಿ ಸಭೆ ನಡೆಸಿದ್ದು, ಬೆಂಗಳೂರು ಜಿಲ್ಲಾಧಿಕಾರಿ, ಬಿಬಿಎಂಪಿ, ಬೆಸ್ಕಾಂ, ಪೊಲೀಸ್ ಇಲಾಖೆ, ವಾಯು ಮಾಲಿನ್ಯ ಮಂಡಳಿ ಹಿರಿಯ ಅಧಿಕಾರಿಗಳು ಚರ್ಚಿಸಿ ಪಿಒಪಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ನಿರ್ಬಂಧ ಹೇರಿದ್ದಾರೆ. ಈ ಕುರಿತು ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ​​ ತುಷಾರ್ ಗಿರಿನಾಥ್, ‘ಗಣೇಶನ ಪ್ರತಿಷ್ಠಾಪನೆ ಮಾಡುವವರಿಗೆ ಯಾವುದೇ ನಿರ್ಬಂಧವಿಲ್ಲ. 24 ಗಂಟೆಯೊಳಗೆ ಅನುಮತಿ ಕೊಡಲು ಆಯಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ ಎಂದರು.

ಈ ಬಾರಿ ಬೆಂಗಳೂರಲ್ಲಿ ಗಣೇಶ ಹಬ್ಬಕ್ಕೆ ಯಾವುದೇ ನಿರ್ಬಂಧ ಹೇರಿಲ್ಲ
ಇನ್ನು ಈಗಾಗಲೇ ಪಿಒಪಿ ಗಣೇಶಗಳನ್ನ ಸೀಜ್ ಮಾಡಲಾಗಿದೆ. ಕಳೆದ ಬಾರಿ 5 ಅಡಿ ಗಣೇಶ ಮೂರ್ತಿಗಷ್ಟೇ ಅನುಮತಿ ಕೊಡಲಾಗಿತ್ತು. ಈ ಬಾರಿ ಬೆಂಗಳೂರಲ್ಲಿ ಗಣೇಶ ಹಬ್ಬಕ್ಕೆ ಯಾವುದೇ ನಿರ್ಬಂಧ ಹೇರಿಲ್ಲ. ಗಣೇಶನ ವಿಸರ್ಜನೆ ವೇಳೆ ಅಹಿತಕರ ಘಟನೆ ನಡೆಯದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಗಣೇಶ ವಿಸರ್ಜನೆ ಮಾಡುವ 42 ಕೆರೆ, ಕಲ್ಯಾಣಿಗಳಲ್ಲಿ ಹೆಚ್ಚಿನ ಭದ್ರತೆ ವಹಿಸಲಾಗುವುದು. ಕಲ್ಯಾಣಿ ಬಳಿ‌ ಆ್ಯಂಬುಲೆನ್ಸ್, ಅಗ್ನಿಶಾಮಕ ವಾಹನ ನಿಲುಗಡೆಗೆ ಸೂಚಿಸಿದ್ದು, ಬೆಂಗಳೂರು ನಗರದ ಮನೆ ಮನೆ ಗಣಪನ ವಿಸರ್ಜನೆಗೆ ಟ್ಯಾಂಕರ್ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

ಗಣೇಶ ಪ್ರತಿಷ್ಟಾಪನೆಗೆ ಅನುಮತಿ ಪಡೆಯುವುದು ಹೇಗೆ?
ಇನ್ನು ಬೆಸ್ಕಾಂ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಪಾಲಿಕೆಯ 63 ಉಪ ವಿಭಾಗ ಕಚೇರಿಗಳಲ್ಲಿ ಏಕಗವಾಕ್ಷಿ ಕೇಂದ್ರಗಳನ್ನು ತೆರೆಯಲಾಗುಗುವುದು. ಈ ಕುರಿತು ನೋಡಲ್ ಅಧಿಕಾರಿಗಳ ವಿವರವಾದ ಮಾಹಿತಿಯನ್ನು ಶೀಘ್ರವೇ ಬಿಡುಗಡೆ ಮಾಡಲಾಗುವುದು. ಅದರನುಸಾರ ಗಣೇಶ ಮೂರ್ತಿಗಳನ್ನಿಡುವವರು ಏಕಗವಾಕ್ಷಿ ಸ್ಥಳಕ್ಕೆ ಭೇಟಿ ನೀಡಿ ಒಂದೇ ಸ್ಥಳದಲ್ಲಿ ಅನುಮತಿ ಪಡೆಯಬಹುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದರು.

ಸಿಎಂ ಸಿದ್ದರಾಮಯ್ಯಗೆ ಕುರ್ಚಿ ಕಂಟಕ: ಮುಂದಿನ ಮುಖ್ಯಮಂತ್ರಿ ಡಿಕೆಶಿ: ಭವಿಷ್ಯ ನುಡಿದ ಅರ್ಚಕ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಶೀಘ್ರವೇ ನಟ ದರ್ಶನ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ : ಬಿ.ದಯಾನಂದ್

Leave a Reply

Your email address will not be published. Required fields are marked *