ಬೆಂಗಳೂರು: ವಾರೆಂಟ್ ಜಾರಿಯಾದ್ರೂ ಕೋರ್ಟ್ ಗೆ ಹಾಜರಾಗದ ಹಿನ್ನೆಲೆ ವಕೀಲ ಕೆ.ಎನ್. ಜಗದೀಶ್ ಕುಮಾರ್ ರನ್ನು ಅರೆಸ್ಟ್ ಮಾಡಲಾಗಿದೆ.
ಕೊಡಿಗೇಹಳ್ಳಿ ಪೊಲೀಸರಿಂದ ಗೋವಾದಲ್ಲಿ ಜಗದೀಶ್ ಬಂಧಿಸಲಾಗಿದೆ. ಗೋವಾದಲ್ಲಿ ಬಂಧಿಸಿ ಬೆಂಗಳೂರಿಗೆ ಪೊಲೀಸರು ಕರೆತಂದಿದ್ದಾರೆ. 2022 ರಲ್ಲಿ ಇವರ ವಿರುದ್ಧ ಜಾತಿ ನಿಂದನೆ ಕೇಸ್ ದಾಖಲಾಗಿತ್ತು.
ನ್ಯಾಯಾಲಯದಲ್ಲಿ ಜಾಮೀನು ರಹಿತ ವಾರೆಂಟ್ ಜಾರಿಯಾಗಿತ್ತು. ಕೋರ್ಟ್ ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದರು. ಇದೀಗ ಪೊಲೀಸರು ವಕೀಲ ಜಗದೀಶ್ ಕುಮಾರ್ ನನ್ನು ಅರೆಸ್ಟ್ ಮಾಡಿದ್ದಾರೆ.
ಇಂಜಿನಿಯರ್ ಸ್ಥಾನಕ್ಕೆ ಪವರ್ ಮ್ಯಾನ್ ನಿಯೋಜನೆ: ವಿವಾದಕ್ಕೆ ಗುರಿಯಾದ ಬೆಸ್ಕಾಂ ಆದೇಶ


