ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಆಸ್ತಿಗಳ ಗುರುತಿನ ಸಂಖ್ಯೆಯನ್ನು(ಪಿಐಡಿ) ಬೆಸ್ಕಾಂನ ವಿದ್ಯುತ್ ಬಿಲ್ನಲ್ಲಿ ನಮೂದಿಸಲಾಗುವುದು ಎಂದು ಬಿಬಿಎಂಪಿ ಮುಖ್ಯಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.
ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಜಿಪಿಎಸ್ ಮಾಹಿತಿಯನ್ನು ಪ್ರತಿ ಆಸ್ತಿಗೂ ಸೆರೆ ಹಿಡಿಯುವ ಅಭಿಯಾನವನ್ನೂ ಆರಂಭಿಸಲಾಗಿದೆ.ಇದಕ್ಕಾಗಿ ಬಿಬಿಎಂಪಿ ಅಧಿಕಾರಿಗಳು ಆಸ್ತಿಗಳಿಗೆ ಭೇಟಿ ನೀಡಲಿದ್ದಾರೆ. ಮಾಲೀಕರು ಸಹಕಾರ ನೀಡಬೇಕೆಂದು ಮನವಿ ಮಾಡಿದರು.
ಮೊಬೈಲ್ ಅಪ್ಲಿಕೇಶನ್ ಮೂಲಕ ವಾರ್ಡ್ಗಳಲ್ಲಿರುವ ಎಲ್ಲ ಸ್ವತ್ತುಗಳನ್ನು ಈಗಾಗಲೇ ಪಟ್ಟಿ ಮಾಡಲಾಗಿದೆ. ಬೆಸ್ಕಾಂ ಬಿಲ್ಗಳಲ್ಲೂ ಆಸ್ತಿಗಳ ಪಿಐಡಿ ನಮೂದಿಸುವುದರಿಂದ ಸ್ವತ್ತಿನ ಸಮರ್ಪಕ ಮಾಹಿತಿ ಲಭ್ಯವಾಗುತ್ತದೆ. ಈ ಬಗ್ಗೆ ಬೆಸ್ಕಾಂನೊಂದಿಗೆ ಮಾತುಕತೆ ನಡೆಸಲಾಗಿದ್ದು, ಇದಕ್ಕೆ ಅವರು ಒಪ್ಪಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಜಿಪಿಎಸ್ ಸೆರೆಹಿಡಿದು ತಂತ್ರಾಂಶದಲ್ಲಿ “ಸಿಟಿಜನ್ ಮಾಡ್ಯೂಲ್’ ಯೋಜನೆ ಆರಂಭಿಸಲಾಗುವುದು. ಯೋಜನೆಯಡಿ ನಾಗರಿಕರೇ ನಮ್ಮ ಸ್ವತ್ತುಗಳನ್ನು ಜಿಪಿಎಸ್ ಸೆರೆಹಿಡಿದು ಸಲ್ಲಿಸಬಹುದು ಎಂದು ಹೇಳಿದರು.
75 ಕೋಟಿ ಮೌಲ್ಯದ ಒತ್ತುವರಿ ತೆರವು:ಬಿಬಿಎಂಪಿ ವ್ಯಾಪ್ತಿಯಲ್ಲಿ ಕೆರೆಗಳ ಪ್ರದೇಶದಲ್ಲಿ ಜಾಗ ಒತ್ತುವರಿ ತೆರವುಗೊಳಿಸುವ ಕಾರ್ಯ ಜಾರಿಯಲ್ಲಿದೆ ಎಂದು ಬಿಬಿಎಂಪಿ ವಿಭಾಗದ ಅರಣ್ಯ, ಪರಿಸರ ಮತ್ತು ಹವಾಮಾನ ವೈಪರೀತ್ಯ ನಿರ್ವಹಣೆಯ ವಿಶೇಷ ಆಯುಕ್ತೆ ಪ್ರೀತಿ ಗೆಹ್ಲೋಟ್ ಹೇಳಿದ್ದಾರೆ. ಮಹದೇವಪುರ ವಲಯದ ದೊಡ್ಡನೆಕ್ಕುಂದಿ ಕೆರೆಗೆ ಸಂಬಂಧಿಸಿದಂತೆ ಕಂದಾಯ ಇಲಾಖೆ ನಡೆಸಿದ್ದ ಸರ್ವೇಯಲ್ಲಿ 2 ಎಕರೆ 6 ಗುಂಟೆ ಕೆರೆಯ ಪ್ರದೇಶ ಒತ್ತುವರಿಯಾಗಿರುವುದು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಇಲಾಖೆಯ ಸಹಕಾರದೊಂದಿಗೆ ಒತ್ತುವರಿ ಪ್ರದೇಶವನ್ನು ತೆರವುಗೊಳಿಸಿ ತಂತಿಬೇಲಿ ಅಳವಡಿಸಲಾಗುತ್ತಿದೆ. ಈ ಜಾಗದ ಮಾರುಕಟ್ಟೆ ಮೌಲ್ಯ 75 ಕೋಟಿ ರೂ. ಆಗಿದೆ ಎಂದರು.
ಬೆಂಗಳೂರಿನಲ್ಲಿ ಈ ಒಂದು ಅನಾಹುತ ತಡೆಯಲು ಬಿಬಿಎಂಪಿ, ಬೆಸ್ಕಾಂ ಜಂಟಿ ಕಾರ್ಯಾಚರಣೆ


