ಕರ್ನಾಟಕದಲ್ಲಿ ನಡೆದ ಮೂರೂ ಉಪಚುನಾವಣೆಗಳಲ್ಲಿ ಭರ್ಜರಿ ಗೆಲುವು ದಾಖಲಿಸಿ ಹುಮ್ಮಸ್ಸಿನಲ್ಲಿರುವ ಕಾಂಗ್ರೆಸ್, ಜೆಡಿಎಸ್ ಭದ್ರಕೋಟೆ ಎಂದೇ ಹೇಳಲಾದ ಹಾಸನದಲ್ಲಿ ಬೃಹತ್ ಸಮಾವೇಶ ಆಯೋಜಿಸಿದೆ. ಆರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಮಾನಿಗಳ ‘‘ ಸ್ವಾಭಿಮಾನಿ ಸಮಾವೇಶ’’ ಎಂದು ಹೇಳಲಾಗಿದೆ ಇದು ನಂತರದಲ್ಲಿ ಜನ ಕಲ್ಯಾಣ ಸಮಾವೇಶ ಎಂಬ ಹೆಸರಿನೊಂದಿಗೆ ನಡೆಯುತ್ತಿದೆ. ಮುಖ್ಯಮಂತ್ರಿಯ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಹಾಸನ ಉಸ್ತುವಾರಿ ಸಚಿವ ರಾಜಣ್ಣ ಸೇರಿದಂತೆ ಅನೇಕ ಸಚಿವರು, ಹಿರಿಯ ಕಾಂಗ್ರೆಸ್ ನಾಯಕರು ಸಮಾವೇಶದಲ್ಲಿ ಭಾಗವಹಿಸುತ್ತಿದ್ದಾರೆ. ಸಮಾವೇಶದ ನೇರ ಪ್ರಸಾರ ಇಲ್ಲಿದೆ.


