ಬೆಂಗಳೂರು: ನಗರದ ಬಾಪೂಜಿನಗರದಲ್ಲಿ ನಿರ್ಮಾಣವಾಗಿರುವ ಸಂಗೊಳ್ಳಿರಾಯಣ್ಣನ ಹೆಬ್ಬಾಗಿಲು ಮತ್ತು ಕಂಚಿನ ಪ್ರತಿಮೆಯನ್ನು ಇಂದು ಉದ್ಘಾಟಿಸಿದರು.
ಈ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಮಾಜಿ ಸಚಿವರು ಹಾಗೂ ವಿಜಯನಗರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಎಂ ಕೃಷ್ಣಪ್ಪ ಅವರು ವಹಿಸಿಕೊಂಡಿದ್ದರು.
ಗೋವಿಂದರಾಜನಗರದ ಶಾಸಕ ಪ್ರಿಯಾಕೃಷ್ಣ, ಜಯನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಜನಪ್ರಿಯ ಯುವ ಮುಖಂಡರಾದ ಶ್ರೀ ಪ್ರದೀಪ್ ಕೃಷ್ಣಪ್ಪ ಹಾಗೂ ಸ್ಥಳೀಯ ಕಾಂಗ್ರೆಸ್ ಮುಖಂಡರುಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.


