BBMP
Loading ...

KJ George

ದಾವಣಗೆರೆ : ರಾಜ್ಯದಲ್ಲಿರುವ ಯಾವುದೇ ಎಸ್ಕಾಂಗಳು ನಷ್ಟದಲ್ಲಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ಸಭೆಯಲ್ಲಿ ಮಾತನಾಡಿದ ಅವರು, ಎಸ್ಕಾಂಗಳು ನಷ್ಟದಲ್ಲಿವೆ ಎಂಬುದು ಕೇವಲ ಆರೋಪವಷ್ಟೆ. ಸರ್ಕಾರದಿಂದ ಸಾಕಷ್ಟು ಹಣ ಬರಬೇಕಾಗಿದೆ. ಸ್ಥಳೀಯ ಸಂಸ್ಥೆಗಳು ಸೇರಿದಂತೆ ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ದಿ ಇಲಾಖೆಯಿಂದ ನಮಗೆ ಬರಬೇಕಾದ ಹಣ ಬಾಕಿ ಇದೆ ಎಂದು ಹೇಳಿದರು.

ಗ್ರಾಮ ಪಂಚಾಯಿತಿಗಳು ಸ್ವಂತವಾಗಿ ವಿದ್ಯುತ್ ಉತ್ಪಾದನೆ ಮಾಡಿಕೊಂಡು ಸ್ವಾವಲಂಭನೆ ಸಾಧಿಸಲು ದಾವಣಗೆರೆ ಜಿಲ್ಲೆಯಲ್ಲಿ ಸೋಲಾರ್ ವಿದ್ಯುತ್ ಉತ್ಪಾದನೆಗೆ ಉದ್ದೇಶಿಸಲಾಗಿದೆ. ಪ್ರಾಯೋಗಿಕವಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪಂಚಾಯಿತಿಗಳಿಗೆ ಕುಡಿಯುವ ನೀರು ಪೂರೈಕೆ, ಬೀದಿದೀಪಗಳಿಗೆ ಅಗತ್ಯವಿರುವ ವಿದ್ಯುತ್‍ನ ಉತ್ಪಾದನೆ ಮಾಡಿಕೊಂಡು ಸ್ವಾವಲಂಬಿಯಾಗಬೇಕು. ಇದಕ್ಕಾಗಿ 400 ಎಕರೆ ಜಾಗವನ್ನು ಗುರುತಿಸಿ, ಸೋಲಾರ್ ಪ್ಯಾನಲ್ ಅಳವಡಿಸಲಾಗುತ್ತದೆ. ಹೆಚ್ಚುವರಿ ವಿದ್ಯುತ್ತನ್ನು ಗ್ರಿಡ್‍ಗೆ ನೀಡಿದರೆ ಹೆಚ್ಚುವರಿ ಅಗತ್ಯ ಇರುವಾಗ ಅಷ್ಟೆ ವಿದ್ಯುತ್‍ಅನ್ನು ವಾಪಸ್ ನೀಡಲಾಗುತ್ತದೆ. ಇದರಿಂದ ಪಂಚಾಯಿತಿಗಳ ಮೇಲಿನ ಹೊರೆ ಕಡಿಮೆಯಾಗಲಿದೆ ಎಂದರು.

ಬೆಂಗಳೂರಿಗರೇ ಎಚ್ಚರ… ಎಚ್ಚರ… – ನೀರು ವ್ಯರ್ಥ ಮಾಡಿದ್ರೆ ಬೀಳುತ್ತೆ 5,000 ದಂಡ!

Leave a Reply

Your email address will not be published. Required fields are marked *