BBMP
Loading ...

BDA

ಬೆಂಗಳೂರು: ಬಿಟಿಎಂ ಲೇಔಟ್ ಮತ್ತು ಜಯನಗರದಲ್ಲಿ ನಾಗರಿಕ ಸೌಲಭ್ಯ (ಸಿಎ) ನಿವೇಶನಗಳ ಮಾರಾಟದಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ತನಿಖೆಗೆ ರಾಜ್ಯ ಸರ್ಕಾರ ಸಮಿತಿಯನ್ನು ರಚನೆ ಮಾಡಿದೆ.

ಬಿಬಿಎಂಪಿಯ ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ಅವರ ಅಧ್ಯಕ್ಷತೆಯಲ್ಲಿ ಮೂವರು ಸದಸ್ಯರ ಸಮಿತಿಯನ್ನು ರಚಿಸಲಾಗಿದೆ.

ಸಮಿತಿಯಲ್ಲಿ ನಗರಾಭಿವೃದ್ಧಿ ಅಧೀನ ಕಾರ್ಯದರ್ಶಿ ರಾಜೇಶ್ ಸುಲಿಕೆರೆ ಮತ್ತು ಪಟ್ಟಣ ಯೋಜನಾ ಇಲಾಖೆಯ ಜಂಟಿ ನಿರ್ದೇಶಕ ಎಸ್ ಗೋಪಾಲಕೃಷ್ಣ ಅವರು ಸೇರಿದ್ದಾರೆ.

ಕೆಂಪೇಗೌಡ ಲೇಔಟ್ ರಚನೆಗಾಗಿ ಸ್ವಾಧೀನಪಡಿಸಿಕೊಂಡಿರುವ ಭೂಮಿಗೆ ಸಾರ್ವಜನಿಕರಿಗೆ ನೀಡಲಾಗುತ್ತಿರುವ ಪರಿಹಾರ ಕುರಿತು ಪರಿಶೀಲನೆ ನಡೆಸುವಂತೆ ಸಮಿತಿಗೆ ಸೂಚಿಸಲಾಗಿದೆ.

ಬೆಂಗಳೂರಿನಲ್ಲಿ ಘೋರ ಘಟನೆ : ನೀರು ಹಿಡಿಯಲು ಹೋದಾಗ ವಿದ್ಯುತ್ ಸ್ಪರ್ಶಿಸಿ ಮಹಿಳೆ ಸಾವು.!

Leave a Reply

Your email address will not be published. Required fields are marked *