BBMP
Loading ...

Garudachar

ನಿವೃತ್ತ ಪೊಲೀಸ್ ಮಹಾನಿರ್ದೇಶಕ ಬಿ.ಎನ್. ಗರುಡಾಚಾರ್ ಅವರು ಶುಕ್ರವಾರ ನಿಧನರಾಗಿದ್ದಾರೆ. ಬೆಂಗಳೂರು ನಗರದಲ್ಲಿ ಮೊದಲ ಟ್ರಾಫಿಕ್ ಸಿಗ್ನಲ್ ಅನ್ನು ಸ್ಥಾಪಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ. ಇವರು ರಾಜ್ಯ ಪೊಲೀಸ್ ಇಲಾಖೆಯಲ್ಲಿ ಹಲವು ಪ್ರಮುಖ ಹುದ್ದೆಗಳನ್ನು ನಿರ್ವಹಿಸಿದ್ದರು. ಬೆಂಗಳೂರಿನ ನಿವಾಸದಲ್ಲಿ ಬಿ.ಎನ್.ಗರುಡಾಚಾರ್ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

90ರ ಹರೆಯದ ಗರುಡಾಚಾರ್ ಅವರು ಪೊಲೀಸ್ ಇಲಾಖೆಯಲ್ಲಿ ಸುದೀರ್ಘವಾಗಿ ಸೇವೆ ಸಲ್ಲಿಸಿದ ದಕ್ಷತೆ ಮತ್ತು ಪ್ರಾಮಾಣಿಕತೆಯ ರೂಪವಾಗಿದ್ದರು. ಶನಿವಾರ ಸಂಜೆ 4 ಗಂಟೆಗೆ ವಿಲ್ಸನ್ ಗಾರ್ಡನ್ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ನೆರವೇರಿಸಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಓದಿನ ನಂತರ ಸರ್ವೇಯರ್, ಅಬಕಾರಿ ಇನ್ಸ್ಪೆಕ್ಟರ್ ಕೆಲಸಕ್ಕೆ ಸೇರಿದರು. ಅಲ್ಲಿಂದ ನೇರವಾಗಿ ಐಪಿಎಸ್ ಮಾಡಿ, ತಿರುವನ್ವೇಲಿಯಲ್ಲಿ ಅಸಿಸ್ಟೆಂಟ್ ಪೊಲೀಸ್ ಕಮಿಷನರ್ ಹುದ್ದೆ ಅಲಂಕರಿಸಿದ ಗುರುಡಾಚಾರ್‌ಗೆ, ಬಿಂಡಿಗನವಿಲೆಯ ಬಡತನ, ಹಸಿವು, ಅವಮಾನ, ಹಿಂಜರಿಕೆ, ಮುಗ್ಧತೆ, ಪ್ರಾಮಾಣಿಕತೆ ಎಲ್ಲವೂ ಬೆನ್ನಿಗಿದ್ದವು.

ಅವುಗಳ ಅಗಾಧ ಅನುಭವ ಅವರನ್ನು ಸಮಾಜದಲ್ಲಿ ಉನ್ನತ ಸ್ಥಾನಕ್ಕೇರುವಲ್ಲಿ ಪ್ರಶಸ್ತಿ, ಪುರಸ್ಕಾರ, ಪ್ರಶಂಸೆ ಪಡೆಯುವಲ್ಲಿ ಉದ್ದಕ್ಕೂ ಸಹಕರಿಸಿದ್ದವು. ಪೊಲೀಸ್ ವೃತ್ತಿಯಲ್ಲಿ ಶಿಸ್ತು ಮತ್ತು ದಕ್ಷತೆಯಿಂದ ಕಾರ್ಯ ನಿರ್ವಹಿಸಿದ ಗರುಡಾಚಾರ್ ಬಹಳ ಬೇಗ ಉನ್ನತ ಸ್ಥಾನಗಳನ್ನು ಅಲಂಕರಿಸಿ, ಅಧಿಕಾರಸ್ಥ ರಾಜಕಾರಣಿಗಳ ಕಣ್ಣಿಗೆ ಬಿದ್ದಿದ್ದರು. ಕೊಪ್ಪಳ, ಹುಮ್ನಾಬಾದ್, ತುಮಕೂರು, ಬಳ್ಳಾರಿ, ಬೆಂಗಳೂರು ಜಿಲ್ಲಾ ಎಸ್ಪಿಯಾಗಿ ಉತ್ತಮ ಸೇವೆ ಸಲ್ಲಿಸಿ ಹೆಸರಾಗಿದ್ದರು.

ಗ್ರಾಹಕರಿಗೆ ಮತ್ತೆ ಬೆಲೆ ಏರಿಕೆ ಬರೆ: ನಂದಿನಿ ಹಾಲಿಗೆ 4 ರೂ. ಹೆಚ್ಚಳ, ವರ್ಷದಲ್ಲಿ 2ನೇ ಬಾರಿಗೆ ಏರಿಕೆ

Leave a Reply

Your email address will not be published. Required fields are marked *