BBMP
Loading ...

C Ramesh

ಯುಗವೆಂದರೆ ಸೃಷ್ಟಿಯ ಕಾಲಮಾನ. ಅರ್ಥಾತ್ ಹೊಸ ವರ್ಷ; ಆದಿ ಎಂದರೆ ಆರಂಭ. ಯುಗಾದಿ ತತ್ಸಮ ಪದವಾದರೆ ಉಗಾದಿ ತದ್ಭವ, ಯುಗಾದಿ ಹಬ್ಬವು ಪೌರಾಣಿಕ ಹಾಗೂ ಐತಿಹಾಸಿಕ ವಿಶೇಷತೆಗಳ ದಿನವಾಗಿದೆ. ಇಳೆಯ ಸಮಸ್ತ ಜೀವಕೋಟಿಗೆ ಮರುಹುಟ್ಟು ನೀಡುವ ಹೊಸತನವನ್ನು ಹೊತ್ತು ತರುವ ಯುಗಾದಿ ಹಬ್ಬ ನಾಡಿನ ಸಮಸ್ತ ಜನರ ಜೀವನದಲ್ಲಿ ಹೊಸತನ ತರಲೆಂದು ಶಿರಾ ತಾಲೂಕಿನ ಪಟ್ಟನಾಯಕನಹಳ್ಳಿಯ ಪ್ರಸಿದ್ಧ ಶ್ರೀ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಂಜಾವಧೂತ ಸ್ವಾಮೀಜಿ, ಕರ್ನಾಟಕ ರಾಜ್ಯ ಅನುಮತಿ ಪಡೆದ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಸಿ. ರಮೇಶ್ ಅವರು ಶುಭಕೋರಿದ್ದಾರೆ. ​

ಈ ಯುಗಾದಿ ಹಬ್ಬವು ನಿಮ್ಮ ಜೀವನದಲ್ಲಿ ಬೆಲ್ಲವನ್ನೇ ಉಣ ಬಡಿಸಲಿ ಬೇವು ಕಡಿಮೆ ಇರಲಿ ನಿಮ್ಮೆಲ್ಲ ಕನಸುಗಳು ನನಸಾಗಲಿ ಹಾಗೂ ಸಂಪತ್ತು ಮತ್ತು ಸಂತೋಷದಿಂದ ಸಮೃದ್ಧಗೊಳಿಸಲಿ. ಬೆಲ್ಲ ಮತ್ತು ಬೇವಿನ ಎಲೆಗಳ ಸಿಹಿ ರುಚಿ ಜೀವನದ ಕಹಿ ಸಿಹಿ ಕ್ಷಣಗಳನ್ನು ಸಂಕೇತಿಸಲಿ. ಈ ಹೊಸ ವರ್ಷವು ನಿಮ್ಮ ಎಲ್ಲಾ ಪ್ರಯತ್ನಗಳಲ್ಲಿ ಹೊಸ ಅವಕಾಶಗಳು ಮತ್ತು ಯಶಸ್ಸನ್ನು ತರಲಿ. ಯುಗಾದಿಯ ಆಶೀರ್ವಾದಗಳು ನಿಮಗೆ ಅದೃಷ್ಟ ಮತ್ತು ಯಶಸ್ಸನ್ನು ತರಲಿ. ಈ ಹೊಸ ವರ್ಷವು ಸಂತೋಷ, ನಗು ಮತ್ತು ಸಂತೋಷದ ವರ್ಷವಾಗಲಿ. ಈ ಹೊಸ ವರ್ಷವು ಶಾಂತಿ ಮತ್ತು ಸಾಮರಸ್ಯದ ವರ್ಷವಾಗಲಿ. ಈ ಹೊಸ ವರ್ಷವು ನಿಮಗೆ ಉತ್ತಮ ಆರೋಗ್ಯ ಮತ್ತು ಸಂತೋಷವನ್ನು ತರಲಿ. ಈ ವರ್ಷವು ನಿಮ್ಮ ಪ್ರೀತಿಪಾತ್ರರೊಂದಿಗೆ ಪ್ರೀತಿ, ನಗು ಮತ್ತು ಪಾಲಿಸಬೇಕಾದ ಕ್ಷಣಗಳಿಂದ ತುಂಬಿರಲಿ. ಈ ಹೊಸ ವರ್ಷವು ಬೆಳವಣಿಗೆ, ಕಲಿಕೆ ಮತ್ತು ನೆರವೇರಿಕೆಯ ವರ್ಷವಾಗಲಿ. ಈ ಹೊಸ ವರ್ಷವು ನಿಮ್ಮ ಪಾಲಿಗೆ ಶಾಂತಿ, ಸಾಮರಸ್ಯ ಮತ್ತು ಸಮೃದ್ಧಿಯ ವರ್ಷವಾಗಲಿ ಎಂದು ಸಮಸ್ತ ನಾಡಿನ ಜನತೆಗೆ ಮತ್ತು ಬಿಬಿಎಂಪಿ ನ್ಯೂಸ್​ 9 ಓದುಗರಿಗೆ ನಂಜಾವಧೂತ ಶ್ರೀಗಳು ಮತ್ತು ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ರಮೇಶ್​ ಹಾಗೂ ಬಿಬಿಎಂಪಿ ನ್ಯೂಸ 9 ಸಂಪಾದಕರಾದ ವೈ. ಎಚ್​. ಆನಂದ್​ ಶುಭ ಕೋರಿದ್ದಾರೆ.

ಪಾಶ್ಚಿಮಾತ್ಯರ ಅಂಧಾನುಕರಣೆ ನಮ್ಮ ಸಂಸ್ಕೃತಿ ಮತ್ತು ಸಂಪ್ರದಾಯಗಳಿಂದ ನಮ್ಮನ್ನ ದೂರ ಸರಿಸುತ್ತಿರುವುದು ದುರಂತವೇ ಸರಿ. ಬಾಲ್ಯದ ನಮ್ಮ ದಿನಗಳನ್ನು ಒಮ್ಮೆ ಮೆಲುಕು ಹಾಕಿ ನೋಡಿ, ಇಡೀ ಮನೆಯಲ್ಲಿ ಹಬ್ಬದ ಪೂರ್ವ ತಯಾರಿಗಳು, ಹಬ್ಬದ ದಿನ ಬಂಧುಗಳ ಸಮಾಗಮ, ಮುಂಜಾನೆಯಿಂದಲೇ ಹೊಸಬಟ್ಟೆ ತೊಟ್ಟು ಕುಣಿದು ಸಂಭ್ರಮಿಸುವ ಯುಗಾದಿ ಮರೆತೆನೆಂದರೂ ಮರೆಯಲಾಗದಂತದ್ದು.

ಪ್ರತಿ ಮನೆ ಮನೆಯ ಮುಂದೆ ಕಂಗೊಳಿಸುವ ಬಣ್ಣದ ಚಿತ್ತಾರದ ರಂಗೋಲಿ, ಬಾಗಿಲಿನಲ್ಲಿ ನಲಿದಾಡುವ ಮಾವಿನೆಲೆ ಮತ್ತು ಬೇವಿನೆಲೆಗಳ ತೋರಣ ನೋಡುವುದೇ ಕಣ್ಮನಗಳಿಗೆ ಸೊಗಸಿನ ಆನಂದಾನುಭವ. ಯುಗಾದಿಯ ದಿನ ಮುಂಜಾನೆ ಬೇವು ಮಿಶ್ರಿತ ನೀರಿನಿಂದ ಸ್ನಾನ ಮಾಡಿ, ಹೊಸಬಟ್ಟೆ ಧರಿಸಿ ತಂತಮ್ಮ ದೇವರನ್ನು ಪೂಜಿಸಿ, ಬೇವು ಬೆಲ್ಲವನ್ನು ಸೇವನೆ ಮಾಡುತ್ತಾರೆ. ಬೇವು-ಬೆಲ್ಲವು ಸುಖ-ದುಃಖ, ರಾತ್ರಿ-ಹಗಲು ಇವುಗಳ ಸಂಕೇತಗಳಾಗಿವೆ. ಮಾನವರ ಬದುಕಿನಲ್ಲಿ ಸುಖ-ದುಃಖಗಳು ಅವಿಭಾಜ್ಯ ಅಂಶಗಳು. ಇವೆಲ್ಲವುಗಳೊಂದಿಗೆ ಸಮತೋಲನ ಕಾಯ್ದುಕೊಂಡೇ ಮನುಷ್ಯ ಬದುಕಬೇಕು. ಜೀವನ ಕಷ್ಟ-ಸುಖ. ನೋವು ನಲಿವುಗಳ ಸಮ್ಮಿಶ್ರಣವಾಗಿದೆ. ಇವೆರಡೂ ಒಟ್ಟಿಗೆ ಇರುವವು. ಎರಡನ್ನೂ ಸಮದೃಷ್ಟಿಯಿಂದ ಸವಿಯುವುದನ್ನು ಕಲಿಯಲೆಂದೇ ಯುಗಾದಿಯಂದು ಬೇವು-ಬೆಲ್ಲವನ್ನು ತಿನ್ನಿಸುವರು.

ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರೆ: 3 ದಿನ ಬೆಟ್ಟಕ್ಕೆ ವಾಹನ ನಿಷೇಧ

Leave a Reply

Your email address will not be published. Required fields are marked *