ಬೆಂಗಳೂರು: ಇಂದು (ಜೂನ್ 26) ಬೆಳಗ್ಗೆ 8.30ಕ್ಕೆ ಇಂಧನ ಇಲಾಖೆ ವಿದ್ಯುತ್ ಪರಿವೀಕ್ಷಣಾಲಯದಿಂದ ರಾಷ್ಟ್ರೀಯ ವಿದ್ಯುತ್ ಸುರಕ್ಷತಾ ಕಾರ್ಯಕ್ರಮ-2025 ಯಶಸ್ವಿಯಾಗಿ ನಡೆಯಿತು.
ರಾಜಾಜಿನಗರದ ಬ್ರಿಗೇಡ್ ಗೇಟ್ವೇ (ಒರಾಯನ್ ಮಾಲ್ ಹಿಂಭಾಗ) ನಲ್ಲಿ ಈ ಸಮಾರಂಭ ನಡೆಯಿತು. ರಾಷ್ಟ್ರೀಯ ವಿದ್ಯುತ್ ಸುರಕ್ಷತಾ ಕಾರ್ಯಕ್ರಮ ಕರ್ನಾಟಕ ರಾಜ್ಯ ಸರ್ಕಾರದ ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ಗೌರವ್ ಗುಪ್ತ ಅವರು ಉದ್ಘಾಟಿಸಿದರು. ಇದೇ ವಿದ್ಯುತ್ ಸುರಕ್ಷತೆಯ ಬಗ್ಗೆ ಉಪಯುಕ್ತ ಮಾತುಗಳನ್ನಾಡಿದರು.

ಕ.ವಿ.ಪ್ರ.ನಿ.ನಿ. ನಿರ್ದೇಶಕರಾದ ಶ್ರೀ ಪಂಕಜ್ ಕುಮಾರ್ ಪಾಂಡೆ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಶಿವ ಶಂಕರ ಎನ್ ಹಾಗೂ ಇಂಧನ ಇಲಾಖೆಯ ಅಪರ ಕಾರ್ಯದರ್ಶಿಗಳಾದ ಶ್ರೀ ಎಸ್.ಬಿ. ಪ್ರಶಾಂತ ಕುಮಾರ ಅವರು ಮುಖ್ಯ ಅತಿಥಿಗಳಾಗಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಕರ್ನಾಟಕ ಸರ್ಕಾರ ಮುಖ್ಯ ವಿದ್ಯುತ್ ಪರಿವೀಕ್ಷಕರಾದ ಶ್ರೀ ಟಿ.ಎನ್. ಅಪ್ಪಚ್ಚು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. EIEAOK ಅಧ್ಯಕ್ಷರಾದ ಶ್ರೀ ಹೆಚ್.ಎಸ್. ವೆಂಕಟೇಶ ಹಾಗೂ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸಿ. ರಮೇಶ್ ಅವರನ್ನು ಈ ಸಮಾರಂಭಕ್ಕೆ ವಿಶೇಷವಾಗಿ ಆಹ್ವಾನಿಸಲಾಗಿತ್ತು.
ವಿದ್ಯುತ್ ಶುಲ್ಕದ ಮೇಲೆ ತೆರಿಗೆ ರದ್ದು : ಮಹತ್ವದ ಆದೇಶ ಹೊರಡಿಸಿದ ಹೈಕೋರ್ಟ್


