ಬೆಂಗಳೂರು: ರಾಜ್ಯದಲ್ಲಿ ಮತ್ತೆ ಟೋಯಿಂಗ್ ಆರಂಭಿಸುವ ಬಗ್ಗೆ ಸರ್ಕಾರ ಈ ಹಿಂದೆಯೇ ಸುಳಿವು ನೀಡಿತ್ತು. ಇದೀಗ ಗೃಹ ಸಚಿವ ಡಾ. ಜಿ ಪರಮೇಶ್ವರ, ಆಗಸ್ಟ್ ಅಂತ್ಯಕ್ಕೆ ರಾಜ್ಯದಲ್ಲಿ ಮತ್ತೆ ಟೋಯಿಂಗ್ ಆರಂಭಿಸುವುದಾಗಿ ತಿಳಿಸಿದ್ದಾರೆ.
ಈ ಬಾರಿ ಗುತ್ತಿಗೆ ನೀಡುವುದಿಲ್ಲ, ಇಲಾಖೆಯಿಂದಲೇ ಟೋಯಿಂಗ್ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.
ಪಾರ್ಕಿಂಗ್ ಸಮಸ್ಯೆ ತಲೆ ನೋವಾಗಿದೆ. ರಸ್ತೆಯಲ್ಲಿ ನಿಲ್ಲಿಸುವ ವಾಹನಗಳ ಟೋಯಿಂಗ್ ಮಾಡಲಾಗುವುದು. ಪೊಲೀಸರಿಗೆ ಜನರ ಜತೆ ಮಾನವೀಯತೆಯಿಂದ ವರ್ತಿಸಲು, ಶಾಂತಿಯಿಂದ ವರ್ತಿಸಲು ಸೂಚಿಸಿದ್ದೇವೆ ಎಂದು ಪರಮೇಶ್ವರ್ ಹೇಳಿದ್ದಾರೆ.
ಬೆಂಗಳೂರು ಜನತೆಗೆ ಬಿಗ್ ಶಾಕ್: ನಾಳೆಯಿಂದಲೇ ಆಟೋ ದರ ಏರಿಕೆ! ಇಲ್ಲಿದೆ ಕಂಪ್ಲೀಟ್ ಮಾಹಿತಿ…


