ರಾಮನಗರದ: ಇಂದು (ಜುಲೈ 31) ಬೆಳಗ್ಗೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲ್ಲೂಕು ಇಗ್ಗಲೂರು ಗ್ರಾಮದಲ್ಲಿ ನಿರ್ಮಿಸಲಾಗಿರುವ ಶ್ರೀ ಹೆಚ್.ಡಿ. ದೇವೇಗೌಡ ಬ್ಯಾರೇಜ್ ಜಲಾಶಯವನ್ನು ಶ್ರೀ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಂಜಾವಧೂತ ಮಹಾ ಸ್ವಾಮೀಜಿಯವರು ವೀಕ್ಷಿಸಿದರು.

ಕಾವೇರಿ ನೀರಾವರಿ ನಿಗಮ (ನಿ) ದ ಕಾವೇರಿ ನದಿಯ ಉಪನದಿಯಾದ ಶಿಂಶಾ ನದಿಗೆ ಅಡ್ಡಲಾಗಿ ಕಟ್ಟಿರುವ ಶ್ರೀ ಹೆಚ್.ಡಿ. ದೇವೇಗೌಡ ಬ್ಯಾರೇಜ್ ಜಲಾಶಯವನ್ನು ಶ್ರೀ ಸ್ಪಟಿಕಪುರಿ ಮಹಾ ಸಂಸ್ಥಾನ – ಶ್ರೀ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಂಜಾವಧೂತ ಮಹಾ ಸ್ವಾಮೀಜಿಯವರು ವೀಕ್ಷಿಸಿ ಕಣ್ವ ಏತ ನೀರಾವರಿ ಯೋಜನೆಗಳ ಮಾಹಿತಿಯನ್ನು ಪಡೆದರು.

ಮೂರ್ನಾಲ್ಕು ದಿನಗಳಲ್ಲಿ ನಿಗಮ ಮಂಡಳಿ ಪಟ್ಟಿ: ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆ


