ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಬರ್ಬರ ಹತ್ಯೆ ಪ್ರಕರಣದಲ್ಲಿ ಜಾಮೀನು ಪಡೆದು ಹೊರಬಂದಿರುವ ಎ2 ಆರೋಪಿ ದರ್ಶನ್ ಮತ್ತು ಎ1 ಆರೋಪಿ ಪವಿತ್ರಾ ಗೌಡ ಸೇರಿದಂತೆ ಒಟ್ಟು 7 ಆರೋಪಿಗಳ ಜಾಮೀನನ್ನು ಕಡೆಗೂ ಸುಪ್ರೀಂಕೋರ್ಟ್ ರದ್ದುಗೊಳಿಸಿದೆ.
ಆ.14ಕ್ಕೆ ತೀರ್ಪನ್ನು ಕಾಯ್ದಿರಿಸಿದ್ದ ನ್ಯಾಯಾಲಯ, ಕಡೆಗೂ ರಾಜ್ಯ ಸರ್ಕಾರ ಪರ ತೀರ್ಪು ನೀಡಿದೆ. ಎ2 ಆರೋಪಿ ದರ್ಶನ್ ಮತ್ತು ಎ1 ಆರೋಪಿ ಪವಿತ್ರಾ ಗೌಡ ಸೇರಿದಂತೆ ಒಟ್ಟು 7 ಆರೋಪಿಗಳ ಜಾಮೀನನ್ನು ರದ್ದುಗೊಳಿಸುವಂತೆ ಸರ್ಕಾರ ಪರ ವಕೀಲರು ಪ್ರಬಲ ವಾದ ಮಂಡಿಸಿದ್ದರು. ವಾದ-ಪ್ರತಿವಾದಗಳನ್ನು ಸೂಕ್ಷ್ಮವಾಗಿ ಗಮನಿಸಿದ ಸುಪ್ರೀಂಕೋರ್ಟ್, ಕಡೆಗೂ ಆರೋಪಿಗಳ ಜಾಮೀನನ್ನು ರದ್ದು ಮಾಡಿದೆ. ಈ ಮೂಲಕ ದರ್ಶನ್ಗೆ ಜೈಲು ದರ್ಶನ ತೋರಿಸಿದೆ.
ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ಚಿಕ್ಕವರಲ್ಲ. ಆರೋಪಿ ಜೈಲಿನ ಲಾನ್ನಲ್ಲಿ ಸಿಗರೇಟ್ ಸೇದುವುದು ಕಂಡಬಂದರೆ ಜೈಲಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಕೋರ್ಟ್ ಎಚ್ಚರಿಸಿದೆ.


