BBMP
Loading ...

Greater Bengaluru

Greater Bengaluru News9 : ಬೆಂಗಳೂರು ನಗರವನ್ನು ಆಡಳಿತಾತ್ಮಕವಾಗಿ ಐದು ಪಾಲಿಕೆಗಳಾಗಿ ವಿಂಗಡನೆ ಮಾಡಲಾಗಿದೆ. ವಿರೋಧ ಪಕ್ಷಗಳ ವಿರೋಧದ ನಡುವೆಯೂ ಸರ್ಕಾರ ಈ ಮಹತ್ವದ ತೀರ್ಮಾನಕ್ಕೆ ಬಂದಿದೆ. ಈಗಾಗಲೇ ಗ್ರೇಟರ್ ಬೆಂಗಳೂರು ಜಾರಿಗೆ ಬಂದಿದ್ದು, ಪಾಲಿಕೆ ಆಯುಕ್ತರನ್ನು ನೇಮಕ ಮಾಡಲಾಗಿದೆ. ಇದರ ಬೆನ್ನಲ್ಲೇ ಚುನಾವಣೆಯ ಸಾಧ್ಯತೆಗಳು ದಟ್ಟವಾಗಿದ್ದು, ಪಾಲಿಕೆಗಳ ಜವಾಬ್ದಾರಿಯನ್ನು ಸಚಿವರ ಹೆಗಲಿಗೆ ಹಾಕಲಾಗಿದೆ.

ಐದು ಪಾಲಿಕೆ, 6 ಮಂದಿಗೆ ಜವಾಬ್ದಾರಿ!
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ಗ್ರೇಟರ್ ಬೆಂಗಳೂರು ಮಾಡಿ ಐದು ಪಾಲಿಕೆಗಳನ್ನು ರಚನೆ ಮಾಡಲಾಗಿದೆ. ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಪೂರ್ವ, ಬೆಂಗಳೂರು ಪಶ್ಚಿಮ ಹಾಗೂ ಬೆಂಗಳೂರು ಕೇಂದ್ರ ಪಾಲಿಕೆಗಳನ್ನಾಗಿ ರಚನೆ ಮಾಡಲಾಗಿದೆ. ಈ ಐದು ಪಾಲಿಕೆಗಳಲ್ಲಿ ಸಚಿವರಿಗೆ ಜವಾಬ್ದಾರಿ ನೀಡಲಾಗಿದೆ.

ಚುನಾವಣೆ ಅಧಿಕೃತ ಘೋಷಣೆ ಆಗದೆ ಇದ್ದರೂ, ತಳಮಟ್ಟದಲ್ಲಿ ಸಿದ್ದತೆಯನ್ನು ನಡೆಸಲು ಕಾಂಗ್ರೆಸ್ ಮುಂದಾಗಿದೆ. ಹೀಗಾಗಿ ಚುನಾವಣೆ ನಡೆದಲ್ಲಿ ಐದು ಪಾಲಿಕೆಗಳನ್ನು ಗೆಲ್ಲಿಸಿಕೊಂಡು ಬರುವ ಜವಾಬ್ದಾರಿಯನ್ನು ಸಚಿವರಿಗೆ ನೀಡಲಾಗಿದೆ.

ಆರು ಸಚಿವರಿಗೆ ಜವಾಬ್ದಾರಿ
ಹಿರಿಯ ಸಚಿವ ರಾಮಲಿಂಗಾ ರೆಡ್ಡಿ, ಕೆ.ಜೆ ಜಾರ್ಜ್, ಕೃಷ್ಣ ಭೈರೇಗೌಡ, ದಿನೇಶ್ ಗುಂಡೂರಾವ್, ಜಮೀರ್ ಅಹಮ್ಮದ್ ಹಾಗೂ ಬೈರತಿ ಸುರೇಶ್ ಗೆ ಪಾಲಿಕೆಗಳ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ. ತಮಗೆ ಹಂಚಿಕೆಯಾಗಿರುವ ಪಾಲಿಕೆಗಳನ್ನ ಗೆದ್ದು ತೋರಿಸಬೇಕಾಗಿರುವ ಸವಾಲು ಸಚಿವರ ಮುಂದಿದೆ.

ಒಟ್ಟು ಆರು ಮಂದಿ ಸಚಿವರಿಗೂ ಐದು ಪಾಲಿಕೆಗಳವಾರು ಜವಾಬ್ದಾರಿ ಹಂಚುವ ಮೂಲಕ ಟಾಸ್ಕ್ ನೀಡಲಾಗಿದೆ. ಕನಿಷ್ಠ ಮೂರ್ನಾಲ್ಕು ಕ್ಷೇತ್ರಗಳನ್ನ ಗೆಲ್ಲಲೇಬೇಕಾದ ಅನಿವಾರ್ಯತೆ ಕಾಂಗ್ರೆಸ್ ಸರ್ಕಾರಕ್ಕೆ ಇದೆ. ಹಾಗಾಗಿ ಚುನಾವಣೆ ಘೋಷಣೆಗೂ ಮೊದಲೇ ಸಚಿವರಿಗೆ ಜವಾಬ್ದಾರಿ ಹಂಚುವ ಮೂಲಕ ಗೆಲುವಿನ ಟಾಸ್ಕ್ ನೀಡಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಐದು ಪಾಲಿಕೆಗೆ ವಿರೋಧ
ಗ್ರೇಟರ್ ಬೆಂಗಳೂರು ಸ್ಥಾಪನೆಗೆ ವಿಪಕ್ಷಗಳು ಭಾರೀ ವಿರೋಧ ವ್ಯಕ್ತಪಡಿಸಿದ್ದರು. ಈ ನಿಟ್ಟಿನಲ್ಲಿ ಜಂಟಿ ಸದನ ಸಮಿತಿಯನ್ನು ರಚನೆ ಮಾಡಲಾಗಿತ್ತು. ಬಳಿಕ ವಿಧೇಯಕವನ್ನು ಸದನದಲ್ಲಿ ಮಂಡಿಸಿ ಅಂಗೀಕಾರ ಪಡೆದುಕೊಳ್ಳಲಾಗಿತ್ತು. ಕಳೆದ ಅಧಿವೇಶನದಲ್ಲೂ ಗ್ರೇಟರ್ ಬೆಂಗಳೂರು ತಿದ್ದುಪಡಿ ವಿಧೇಯಕವನ್ನು ಮಂಡಿಸಿ ಅಂಗೀಕಾರ ಪಡೆದುಕೊಳ್ಳಲಾಗಿತ್ತು.

ಗ್ರೇಟರ್ ಬೆಂಗಳೂರು ರಚನೆ ಮಾಡುವ ಮೂಲಕ ಬೆಂಗಳೂರನ್ನು ಅವೈಜ್ಞಾನಿಕವಾಗಿ ವಿಭಜನೆ ಮಾಡಲಾಗಿದೆ ಹಾಗೂ ಇದು ಚುನಾವಣೆಯನ್ನು ಮುಂದೂಡುವ ಪ್ರಯತ್ನ ಎಂಬ ಆರೋಪವನ್ನು ಬಿಜೆಪಿ ಮತ್ತು ಜೆಡಿಎಸ್ ನಾಯಕರು ಮಾಡಿದ್ದಾರೆ. ಆದರೆ ಈ ಆರೋಪಗಳ ನಡುವೆಯೂ ಕಾಂಗ್ರೆಸ್ ಸರ್ಕಾರ ಗ್ರೇಟರ್ ಬೆಂಗಳೂರಿಗೆ ಚುರುಕು ನೀಡುತ್ತಿದೆ. ಅಲ್ಲದೆ, ಸದ್ದಿಲ್ಲದೆ ಚುನಾವಣೆಗೂ ಸಿದ್ದತೆ ನಡೆಸುತ್ತಿದೆ.

Leave a Reply

Your email address will not be published. Required fields are marked *