Greater Bengaluru News9 : ರಾಜ್ಯದಲ್ಲಿ ಬಿರುಗಾಳಿ ಎಬ್ಬಿಸಿರುವ ಜಾತಿ ಗಣತಿ ವಿವಾದದ ನಡುವೆ ರಾಜ್ಯ ಕಾಂಗ್ರೆಸ್ ಉಸ್ತುವಾಗಿ ಸುರ್ಜೆವಾಲಾ ಅವರು ಇಂದು ಸಭೆ ನಡೆಸಿದರು.
ತಾಜ್ ವೆಸ್ಟೆಂಡ್ ಹೋಟೆಲ್ನಲ್ಲಿ ನಡೆದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಹಾಗೂ ಸಚಿವರಾದ ದಿನೇಶ್ ಗುಂಡೂರಾವ್, ಭೈರತಿ ಸುರೇಶ್, ಕೆ.ಜೆ ಜಾರ್ಜ್, ರಾಮಲಿಂಗಾ ರೆಡ್ಡಿ ಹಾಗೂ ಜಮೀರ್ ಅಹಮ್ಮದ್ ಭಾಗಿಯಾಗಿದರು.
ಗ್ರೇಟರ್ ಬೆಂಗಳೂರು ಚುನಾವಣೆ ತಯಾರಿ ಸಂಬಂಧ ಸಮಾಲೋಚನೆ ಹಾಗೂ ಸಚಿವರಿಗೆ ಜವಾಬ್ದಾರಿ ಹಂಚಿಕೆ ಕುರಿತು ಚರ್ಚೆ ನಡೆದಿದೆ. ಚುನಾವಣೆಯಲ್ಲಿ ಗೆಲ್ಲಲು ಈಗಿನಿಂದಲೇ ತಯಾರಿ ಮಾಡಿಕೊಳ್ಳುವಂತೆ ಸುರ್ಜೇವಾಲಾ ಅವರ ಸಭೆಯಲ್ಲಿ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.


