ಮೈಸೂರು: ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷರಾದ ಸಿ. ರಮೇಶ್ ಅವರ ಧರ್ಮಪತ್ನಿ ರತ್ನ ರಮೇಶ್ ಅವರು ಮೈಸೂರು ನಗರ ಪೋಲೀಸ್ ಸ್ಪಂದನಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಯಲ್ಲಿ ಜಯಗಳಿಸಿದ್ದಾರೆ.
ನಿನ್ನೆ (ಮಾರ್ಚ್ 01) ಮೈಸೂರಿನಲ್ಲಿ ನಡೆದ ಚುನಾವಣೆಯಲ್ಲಿಲ್ಲಿ ರತ್ನ ರಮೇಶ್ ಅವರು ಮೈಸೂರು ನಗರ ಪೋಲೀಸ್ ಸ್ಪಂದನಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಯಲ್ಲಿ ಮಹಿಳಾ ಸಾಮಾನ್ಯ ಸ್ಥಾನಕ್ಕೆ ಸ್ಪರ್ಧಿಸಿ ಜಯಗಳಿಸಿದ್ದಾರೆ.
ರತ್ನ ರಮೇಶ್ ಅವರಿಗೆ ಕರ್ನಾಟಕ ರಾಜ್ಯ ಅನುಮತಿ ಪಡೆದ ಗುತ್ತಿಗೆದಾರರ ಸಂಘದ ಎಲ್ಲ ಪದಾಧಿಕಾರಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.


