Greater Bangalore news9 : ಮುಂಬರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಚುನಾವಣೆಗೆ ಬಿಜೆಪಿ ಸಿದ್ಧತೆ ನಡೆಸಿದ್ದು, ರಾಜ್ಯ ಮಟ್ಟದಲ್ಲಿ, ಪ್ರತಿ ನಿಗಮ ಮಟ್ಟದಲ್ಲಿ ಮತ್ತು ಪ್ರತಿ ವಿಧಾನಸಭಾ ಕ್ಷೇತ್ರಕ್ಕೂ ಉಸ್ತುವಾರಿಗಳನ್ನು ನೇಮಿಸಿದೆ.
ಜಿಬಿಎ ರಾಜ್ಯ ತಂಡದಲ್ಲಿ ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ಮತ್ತು ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ ಮತ್ತು ಛಲವಾದಿ ನಾರಾಯಣಸ್ವಾಮಿ, ಕೇಂದ್ರ ಸಚಿವರಾದ ವಿ. ಸೋಮಣ್ಣ ಮತ್ತು ಶೋಭಾ ಕರಂದ್ಲಾಜೆ, ಮಾಜಿ ಸಚಿವರಾದ ಎಸ್. ಸುರೇಶ್ ಕುಮಾರ್ ಮತ್ತು ಡಾ. ಸಿ. ಎನ್. ಅಶ್ವತ್ಥನಾರಾಯಣ್ ಮತ್ತು ಸಂಸದರಾದ ಪಿ.ಸಿ. ಮೋಹನ್, ಡಾ. ಸಿ. ಎನ್. ಮಂಜುನಾಥ್, ತೇಜಸ್ವಿ ಸೂರ್ಯ ಮತ್ತು ಡಾ. ಕೆ. ಸುಧಾಕರ್ ಮತ್ತು ಬಿಜೆಪಿ ರಾಜ್ಯ ಕಾರ್ಯದರ್ಶಿ ಎನ್.ಎಸ್. ನಂದೀಶ್ ರೆಡ್ಡಿ ಇದ್ದಾರೆ.
ಬೆಂಗಳೂರು ಪೂರ್ವ ನಿಗಮದಲ್ಲಿ ಶಾಸಕರಾದ ಬೈರತಿ ಬಸವರಾಜ್, ಮಂಜುಳಾ ಅರವಿಂದ್ ಲಿಂಬಾವಳಿ, ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ರವಿಕುಮಾರ್ ಮತ್ತು ನಂದೀಶ್ ರೆಡ್ಡಿ ನೇಮಿಸಲಾಗಿದೆ.
ಉತ್ತರ ನಿಗಮಕ್ಕೆ ಎಸ್.ಆರ್. ವಿಶ್ವನಾಥ್ ಮತ್ತು ಎಸ್. ಮುನಿರಾಜು. ಪಶ್ಚಿಮ ನಿಗಮಕ್ಕೆ. ಆರ್. ಅಶೋಕ, ಶಾಸಕರಾದ ಎಸ್. ಸುರೇಶ್ ಕುಮಾರ್, ಸಿ. ಎನ್. ಅಶ್ವತ್ನಾರಾಯಣ್, ಗೋಪಾಲಯ್ಯ, ಮುನಿರತ್ನ ಮತ್ತು ರವಿ ಸುಬ್ರಮಣ್ಯ ಅವರನ್ನು ನೇಮಕ ಮಾಡಲಾಗಿದೆ.


