BBMP
Loading ...

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಸ್ನೇಹಿತೆ ಆಗಿರುವ ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಕಳುಹಿಸಿದ ಅನ್ನೋ ಕಾರಣಕ್ಕೆ ರೇಣುಕಾಸ್ವಾಮಿಯನ್ನು ಕರೆಸಿ ಹಲ್ಲೆ ಮಾಡಿ ಹತ್ಯೆಗೈದಿರೋ ಆರೋಪ ಕೇಳಿಬಂದಿದೆ. ಈ ಕೇಸ್‌ನಲ್ಲಿ ನಟ ದರ್ಶನ್ ಸೇರಿ 13 ಜನರನ್ನು ಬಂಧಿಸಿ ವಿಚಾರಣೆ ನಡೆಸಲಾಗ್ತಿದೆ. ಈ ಪ್ರಕರಣದ ಕುರಿತಾಗಿ ಒಂದೊಂದೆ ವಿಚಾರಗಳು ತನಿಖೆಯಿಂದ ಹೊರ ಬರುತ್ತಿವೆ ಎನ್ನಲಾಗಿದೆ. ಇದೀಗ ಮೃತ ಮೃತ ರೇಣುಕಾಸ್ವಾಮಿಯ ಮರಣೋತ್ತರ ಪರೀಕ್ಷೆಯ ರಿಪೋರ್ಟ್ ಬಂದಿದೆ.

ರೇಣುಕಾಸ್ವಾಮಿ ಮರ್ಮಾಂಗದ ಮೇಲೆ ಹಲ್ಲೆ ಮಾಡಿರೋದು ಮರಣೋತ್ತರ ಪರೀಕ್ಷೆಯಲ್ಲಿ ದೃಢವಾಗಿದೆ ಎನ್ನಲಾಗಿದೆ. ಮರ್ಮಾಂಗದ ಭಾಗದಲ್ಲಿ ರಕ್ತ ಸೋರಿಕೆಯಾಗಿದೆ. ಮರ್ಮಾಂಗ, ಹೊಟ್ಟೆಯ ಭಾಗದಲ್ಲಿ ರಕ್ತ ಚಿಮ್ಮಿದೆ ಭಾಗದಲ್ಲಿ ರಕ್ತ ಚೆಲ್ಲಿದೆ. ತಲೆಗೆ ಹೊಡೆದಿದ್ದಾರೆ ಆದರೆ ರಕ್ತ ಸೋರಿಕೆಯಾಗಿಲ್ಲ.ಮರದ ಪೀಸ್ ನಿಂದ ಹಲ್ಲೆ ಮಾಡಲಾಗಿದೆ. ಕೈ ಮತ್ತು ಕಾಲು, ಬೆನ್ನಿನಲ್ಲಿ ಹಾಗೂ ಎದೆ ಭಾಗದಲ್ಲೂ ರಕ್ತ ಬಂದಿದೆ.

ತೀವ್ರವಾದ ಹಲ್ಲೆಯಿಂದ ದೇಹಕ್ಕೆ ಆಘಾತ ಆಗಿ ರಕ್ತ ಹೆಪ್ಪುಗಟ್ಟಿ ಸಾವಾಗಿದೆ. ಹಲ್ಲೆಗೆ ಮರದ ಪೀಸ್, ಬೆಲ್ಟ್ ನಿಂದ ಹಲ್ಲೆ ಮಾಡಲಾಗಿದೆ ಎನ್ನಲಾಗಿದೆ. ದೇಹದಲ್ಲಿ ೧೫ ಕಡೆ ಗಾಯಗಳಾಗಿವೆ. ಮುಖ ಮತ್ತು ದವಡೆಯನ್ನ ನಾಯಿಗಳು ಕಿತ್ತು ತಿಂದಿರೋದು ಮರಣೋತ್ತರ ಪರೀಕ್ಷೆಯಲ್ಲಿ ಪತ್ತೆಯಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಫೆಬ್ರವರಿ 27ರಿಂದ ಪವಿತ್ರಾ ಗೌಡಗೆ ರೇಣುಕಾ ಸ್ವಾಮಿ ಅಶ್ಲೀಲವಾಗಿ ಮೆಸೇಜ್ ಶುರು ಮಾಡಿದ್ದರು. ಅಕೌಂಟ್‌ ಬ್ಲಾಕ್‌ ಮಾಡಿದ್ದರೂ ಹೊಸ ಅಕೌಂಟ್‌ನಿಂದ ಮತ್ತದೇ ಮಸೇಜ್ ಕಳುಹಿಸುತ್ತಿದ್ದ. ಕಳೆದ ಶುಕ್ರವಾರ ಮರ್ಮಾಂಗದ ಫೋಟೋ ಕಳುಹಿಸಿ ‘ದರ್ಶನ್​ಗಿಂತ ನಾನೇನು ಕಡಿಮೆ ಬಾ’ ಎಂದು ಹೇಳಿದ್ದ. ಈ ರೀತಿಯ ಟಾರ್ಚರ್‌ ಸಹಿಸಿಕೊಳ್ಳಲಾಗದೇ ಪವಿತ್ರಾ ಅವರು ತಮ್ಮ ಮನೆಗೆಲಸದವ ಪವನ್​ಗೆ ಹೇಳಿದ್ದರು. ಈ ವಿಚಾರ ದರ್ಶನ್​ಗೆ ತಿಳಿದಿದೆ.

ರೇಣುಕಾ ಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಣ ಮಾಡಿ ಕರೆದುಕೊಂಡು ಬಂದು ಶೆಡ್​ನಲ್ಲಿ ಇರಿಸಿಕೊಂಡು ಹಲ್ಲೆ ಮಾಡಿದ್ದ ದರ್ಶನ್ ಮತ್ತು ಗ್ಯಾಂಗ್​, ಹಲ್ಲೆಯಿಂದ ರೇಣುಕಾ ಸ್ವಾಮಿ ನಿಧನ ಹೊಂದಿದ ಬಳಿಕ ಆತಂಕಗೊಂಡು, ಶವವನ್ನು ಸಾಗಿಸುವ ದಾರಿ ಹುಡುಕಿದೆ. ಆಗ ಬೇರೆ ಗ್ಯಾಂಗ್ ಒಂದನ್ನು ಕರೆಸಿ ಅವರಿಗೆ ಶವ ಒಪ್ಪಿಸಿ, ಅದನ್ನು ವಿಲೇವಾರಿ ಮಾಡುವಂತೆ ಹೇಳಿ ಅವರಿಗೆ 30 ಲಕ್ಷ ರೂಪಾಯಿ ಹಣ ನೀಡಿದ್ದಾರೆ. ಈ ಹಣವನ್ನು ದರ್ಶನ್ ಅವರೇ ನೀಡಿದ್ದಾರೆ ಎನ್ನಲಾಗುತ್ತಿದೆ.

ಹಣ ಪಡೆದ ಮತ್ತೊಂದು ಗ್ಯಾಂಗ್ ರೇಣುಕಾ ಸ್ವಾಮಿಯ ಶವವನ್ನು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಮನಹಳ್ಳಿ ಮೋರಿಗೆ ಬಿಸಾಡಿ ಹೋಗಿದ್ದಾರೆ. ಶವ ದೊರೆತ ಬಳಿಕ ತಾವೇ ಕೊಲೆ ಮಾಡಿರುವುದಾಗಿ ಹೇಳಿ ಠಾಣೆಗೆ ಒಪ್ಪಿಕೊಂಡಿದ್ದಾರೆ. ಕೊಲೆ ಮಾಡಲು ಹಣಕಾಸಿನ ವಿಚಾರವೇ ಕಾರಣ ಎಂದು ಹೇಳಿದ್ದಾರೆ. ಆದರೆ ಒಬ್ಬೊಬ್ಬರನ್ನೂ ಪ್ರತ್ಯೇಕವಾಗಿ ವಿಚಾರಣೆ ಮಾಡಿದಾಗ ಅವರ ಹೇಳಿಕೆಯಲ್ಲಿ ವ್ಯತ್ಯಾಸ ಕಂಡುಬಂದಿದೆ. ಬಳಿಕ ಪೊಲೀಸರು ತಮ್ಮದೇ ಶೈಲಿಯಲ್ಲಿ ವಿಚಾರಣೆ ಮಾಡಿದಾಗ ನಿಜಾಂಶ ಬಯಲಾಗಿದೆ.

ಹಣ ಪಡೆದು ಶವ ವಿಲೇವಾರಿ ಜವಾಬ್ದಾರಿ ಹೊತ್ತಿದ್ದ ಗ್ಯಾಂಗ್, ದರ್ಶನ್​ರ ಆಪ್ತನೊಟ್ಟಿಗೆ ಸಂಪರ್ಕದಲ್ಲಿತ್ತಂತೆ. ಶವ ವಿಲೇವಾರಿ ಹಾಗೂ ಕೊಲೆಯ ಆರೋಪ ಹೊರಲೆಂದು ಮುಂಚಿತವಾಗಿಯೇ 30 ಲಕ್ಷ ರೂಪಾಯಿ ಹಣವನ್ನು ದರ್ಶನ್ ಅವರಿಂದ ಈ ಗ್ಯಾಂಗ್ ಪಡೆದಿತ್ತು ಎನ್ನಲಾಗಿದೆ.

ಉಕ್ಕು ಕೇಂದ್ರ ಖಾತೆ ವಹಿಸಕೊಳ್ಳುತ್ತಲೇ ಬೆಂಗಳೂರಿಗೆ ಗಿಫ್ಟ್‌ ಕೊಟ್ಟ ಹೆಚ್‌ಡಿ ಕುಮಾರಸ್ವಾಮಿ

ದರ್ಶನ್ ಬಂಧನವಾಗುತ್ತಿದ್ದಂತೆ ಸಿಎಂ ಅಲರ್ಟ್:​ ಸಚಿವ ಜಮೀರ್​ಗೆ ಸಿದ್ದರಾಮಯ್ಯ ವಾರ್ನಿಂಗ್

Leave a Reply

Your email address will not be published. Required fields are marked *