BBMP
Loading ...

ಬೆಂಗಳೂರು: ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರಿಗೆ ಪುತ್ರಿ ವಿಯೋಗ ಉಂಟಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸ ಮೊಯ್ಲಿ ನಿನ್ನೆ ರಾತ್ರಿ ಬೆಂಗಳೂರಿನಲ್ಲಿ ಮೃತಪಟ್ಟಿದ್ದಾರೆ.

ಪುತ್ರಿ ಹಂಸ ಮೊಯ್ಲಿ ಸಾವಿನ ಸುದ್ದಿ ತಿಳಿದು ಛತ್ತೀಸ್‌ಘಡದಲ್ಲಿದ್ದ ವೀರಪ್ಪ ಮೊಯ್ಲಿ ರಾತ್ರಿಯೇ ವಾಪಾಸ್ ಆಗಿದ್ದಾರೆ. ನಾಳೆ ಬೆಳಗ್ಗೆ (ಜುಲೈ 1) ವೀರಪ್ಪ ಮೊಯ್ಲಿ ಪುತ್ರಿಯ ಅಂತ್ಯ ಸಂಸ್ಕಾರ ನಡೆಸಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ರಾಜ್ಯದಲ್ಲಿ ಹೆಚ್ಚುವರಿ ಡಿಸಿಎಂ ಇಲ್ಲ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸಾಧ್ಯತೆ!
ಕೆಲವು ದಿನಗಳಿಂದ ರಾಜ್ಯದಲ್ಲಿ ಸಿಎಂ ಬದಲಾವಣೆ, ಹೆಚ್ಚುವರಿ ಡಿಸಿಎಂ ಪಟ್ಟ ವಿಷಯವಾಗಿ ಬಹಳಷ್ಟು ಚರ್ಚೆಗಳು ನಡೆಯುತ್ತಿವೆ. ಈಗ ದೆಹಲಿ ಮಟ್ಟದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಗಂಭೀರ ಚರ್ಚೆ ನಡೆದಿದೆ ಎನ್ನಲಾಗಿದೆ.

ಡಿ.ಕೆ.ಶಿವಕುಮಾರ್ ಬಳಿಯೇ ಎರಡು ಪ್ರಬಲ ಖಾತೆಗಳಿವೆ. ಪಕ್ಷ ಸಂಘಟನೆಗೆ ಇದು ಅನುಕೂಲಕರವಲ್ಲ. ಹೀಗಾಗಿ ಅಧ್ಯಕ್ಷರ ಬದಲಾವಣೆ ಮಾಡಿದರೆ ಸೂಕ್ತ ಎಂದು ರಾಜ್ಯ ನಾಯಕರು ಹೈಕಮಾಂಡ್‌ಗೆ ವರದಿ ಸಲ್ಲಿಸಿದ್ದಾರೆ ಎನ್ನಲಾಗಿದೆ. ಹೈಕಮಾಂಡ್ ನಾಯಕರಿಂದಲೂ ಕೆಪಿಸಿಸಿಗೆ ನೂತನ ಸಾರಥಿ ನೀಡುವ ಬಗ್ಗೆ ಹೆಚ್ಚಿನ‌ ಒಲವು ಇದೆ ಎನ್ನಲಾಗುತ್ತಿದೆ. ಈ ಸಂಬಂಧ ರಾಜ್ಯ ಉಸ್ತುವಾರಿ, ಪ್ರಧಾನ ಕಾರ್ಯದರ್ಶಿಗಳಿಂದ ಹೈಕಮಾಂಡ್​ ವರದಿ ಪಡೆದಿದೆ.

ನೂತನ ಅಧ್ಯಕ್ಷರ ಆಯ್ಕೆಯಾದರೆ, ಕಾಂಗ್ರೆಸ್ ಒಳಗಿನ ಸಮಸ್ಯೆಗಳಿಗೆ ಇತಿಶ್ರೀ ಹಾಡಬಹುದು ಎಂಬ ಅಭಿಪ್ರಾಯವನ್ನು ರಾಜ್ಯ ನಾಯಕರು ದೆಹಲಿ ಭೇಟಿ ವೇಳೆ ಹೇಳಿದ್ದಾರೆ. ರಾಜ್ಯ ನಾಯಕರ ಮಾತಿಗೆ ಬಹುತೇಕ ಮನ್ನಣೆ ಸಿಗುವ ಸಾಧ್ಯತೆ ದಟ್ಟವಾಗಿದೆ. ಹೀಗಾಗಿಯೇ ಇಂದು ಬೆಳಿಗ್ಗೆ ಮಲ್ಲಿಕಾರ್ಜುನ ಖರ್ಗೆ ಡಿಕೆಶಿ ಅವರನ್ನು ಕರೆಸಿ‌ ಚರ್ಚೆ ಮಾಡಿದ್ದಾರೆ. ಆದರೆ ಡಿಕೆ ಶಿವಕುಮಾರ್ ಜಿಪಂ, ತಾಪಂ ಚುನಾವಣೆವರೆಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯುವ ಇರಾದೆ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.

ಇಂದು ಬೆಳಿಗ್ಗೆ ನವದೆಹಲಿ ನಿವಾಸದಲ್ಲಿ ಡಿಕೆ ಶಿವಕುಮಾರ್ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಹೈಕಮಾಂಡ್ ನಿಲುವಿನ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಡಿಕೆಶಿ ಜೊತೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ರಾಹುಲ್‌ ಗಾಂಧಿ ಜೊತೆ ಸಿದ್ದರಾಮಯ್ಯ ಟೀಂ ಚರ್ಚೆ ಬೆನ್ನಲ್ಲೇ, ಡಿಕೆಶಿಗೆ ಮಲ್ಲಿಕಾರ್ಜುನ ಖರ್ಗೆ ಬುಲಾವ್ ಕೊಟ್ಟಿದ್ದಾರೆ. ಖರ್ಗೆ ಮತ್ತು ಡಿಕೆಶಿ ಭೇಟಿ ಕುತೂಹಲ ಮೂಡಿಸಿದ್ದು, ರಾಜ್ಯ ರಾಜಕೀಯದಲ್ಲಿ ಮಹತ್ವದ ಬದಲಾವಣೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತದೆ.

ಗೋಬಿ-ಕಬಾಬ್‌ ನಂತರ ಈಗ ಶವರ್ಮಾ ಬ್ಯಾನ್‌ ಮಾಡಲು ರಾಜ್ಯ ಸರ್ಕಾರ ಚಿಂತನೆ

Leave a Reply

Your email address will not be published. Required fields are marked *