ಬೆಂಗಳೂರು: ಇಂದು (ಜುಲೈ 07) ನಡೆದ ನಗರದ ಪ್ರತಿಷ್ಠಿತ ʼಪ್ರೆಸ್ ಕ್ಲಬ್ ಆಫ್ ಬೆಂಗಳೂರುʼ ಚುನಾವಣೆಯಲ್ಲಿ ಪತ್ರಕರ್ತರಾದ ಆರ್. ಶ್ರೀಧರ್ ಅವರು ಅಧ್ಯಕ್ಷರಾಗಿ ಆಯ್ಕೆಯಾದರೆ, ಮೋಹನ್ ಕುಮಾರ್ ಅವರು ಉಪಾಧ್ಯಕ್ಷರಾಗಿ ಚುನಾಯಿತರಾಗಿದ್ದಾರೆ.
ಕ್ಲಬ್ನ ಅಧ್ಯಕ್ಷ ಸ್ಥಾನಕ್ಕಾಗಿ ಮೂವರು ಪತ್ರಕರ್ತರ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಧ್ಯಾನ್ ಪೂಣಚ್ಚ, ಆರ್. ಶ್ರೀಧರ ಹಾಗೂ ಸುಭಾಷ್ ಹೂಗಾರ್ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದರು. ಅಂತಿಮವಾಗಿ ಚುನಾವಣ ಫಲಿತಾಂಶದಲ್ಲಿ ಅತಿ ಹೆಚ್ಚು ಮತಗಳೊಂದಿಗೆ ಆರ್. ಶ್ರೀಧರ್ ಅವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷ ಸ್ಥಾನಕ್ಕೆ ಮಹಾಂತೇಶ್ ಹೀರೇಮಠ್, ಬಿ.ಎನ್.ಮೋಹನ್ ಕುಮಾರ್ ಹಾಗೂ ವಿಶ್ವನಾಥ್ ಭಾಗವತ್ ಕಣದಲ್ಲಿದ್ದರು. ಅಂತಿಮವಾಗಿ ಮೋಹನ್ ಕುಮಾರ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅದೇ ರೀತಿ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ದೊಡ್ಡ ಬೊಮ್ಮಯ್ಯ, ಟಿ. ಮಂಜುನಾಥ್, ಎಂ.ಡಿ ಶಿವಕುಮಾರ್ ಬೆಳ್ಳಿತಟ್ಟೆ, ಹಾಗೂ ವೈ.ಎಸ್.ಎಲ್. ಸ್ವಾಮಿ ನಡುವೆ ಪೈಪೋಟಿ ನಡೆದಿತ್ತು. ಅಂತಿಮವಾಗಿ ಶಿವಕುಮಾರ್ ಬೆಳ್ಳಿತಟ್ಟೆಯವರು ಆಯ್ಕೆಯಾಗಿದ್ದಾರೆ.
ಬೆಂಗಳೂರು ಪ್ರೆಸ್ ಕ್ಲಬ್ನ 2024-25ನೇ ಸಾಲಿಗೆ ಚುನಾಯಿತರಾದವರ ಸಂಪೂರ್ಣ ಪಟ್ಟಿ ಈ ಕೆಳಕಂಡಂತಿದೆ…
* ಆರ್. ಶ್ರೀಧರ್- ಅಧ್ಯಕ್ಷರು
* ಮೋಹನ್ ಕುಮಾರ್- ಉಪಾಧ್ಯಕ್ಷರು
* ಶಿವಕುಮಾರ್ ಬೆಳ್ಳಿ ತಟ್ಟೆ- ಪ್ರಧಾನ ಕಾರ್ಯದರ್ಶಿ
* ಮಂಜುನಾಥ್ ಜಿ.ವೈ – ಕಾರ್ಯದರ್ಶಿ
* ಧರಣೀಶ್ ಬಿ.ಎನ್ – ಜಂಟಿ ಕಾರ್ಯದರ್ಶಿ
* ಗಣೇಶ್ ಜಿ – ಖಜಾಂಚಿ
ಕಾರ್ಯಕಾರಿ ಸಮಿತಿ
* ಶಿವಣ್ಣ
* ಯಾಸಿರ್ ಮುಸ್ತಾಕ್
* ಶರಣಬಸಪ್ಪ ಎ.ಎಚ್.
* ಮಮ್ತಾಜ್ ಅಲಿಮ್
* ರೋಹಿಣಿ ವಿ. ಅಡಿಗ
* ಸಿ.ಆರ್.ಮಂಜುನಾಥ್.
ಮಹಿಳಾ ಮೀಸಲು ಕ್ಷೇತ್ರ
* ಮಿನಿ ತೇಜಸ್ವಿನಿ.
ಬೆಸ್ಕಾಂ ಬೊಕ್ಕಸ ತುಂಬಿಸಿದ ಗೃಹ ಜ್ಯೋತಿ ಯೋಜನೆ; 10 ವರ್ಷಗಳಲ್ಲಿ ಆದಾಯ 3 ಪಟ್ಟು ಏರಿಕೆ


