ಬೆಂಗಳೂರು: ಚನ್ನಪಟ್ಟಣ, ರಾಮನಗರ, ಮಾಗಡಿ, ಕನಕಪುರ ಮತ್ತು ಹಾರೋಹಳ್ಳಿ ಸೇರಿಸಿ ಬೆಂಗಳೂರು ದಕ್ಷಿಣ ಜಿಲ್ಲೆ ಮಾಡಬೇಕೆಂಬ ಮನವಿಯನ್ನು ಡಿಸಿಎಂ ಡಿ. ಕೆ. ಶಿವಕುಮಾರ್ ನೇತೃತ್ವದ ಜನಪ್ರತಿನಿಧಿಗಳ ನಿಯೋಗವು ಸಿಎಂ ಸಿದ್ದರಾಮಯ್ಯ ಅವರಿಗೆ ವಿಧಾನಸೌಧದಲ್ಲಿ ಮಂಗಳವಾರ ಸಲ್ಲಿಸಿತು.
ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ, ಶಾಸಕ ಇಕ್ಬಾಲ್ ಹುಸೈನ್, ಮಾಜಿ ಸಂಸದ ಡಿ ಕೆ ಸುರೇಶ್, ಎಂಎಲ್ಸಿಗಳಾದ ಪುಟ್ಟಣ್ಣ, ಎಸ್ ರವಿ, ಸುಧಾಮದಾಸ್, ಬೆಂಗಳೂರು ಮೈಸೂರು ಇನ್ ಫ್ರಾಸ್ಟ್ರಕ್ಚರ್ ಕಾರಿಡಾರ್ ಪ್ರದೇಶ ಯೋಜನೆ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಘುನಂದನ್ ರಾಮಣ್ಣ, ಮಾಜಿ ಶಾಸಕರಾದ ಸಿ. ಎಂ. ಲಿಂಗಪ್ಪ, ರಾಜು, ಅಶ್ವಥ್ ಮತ್ತಿತರರು ಉಪಸ್ಥಿತರಿದ್ದರು.
ಪ್ರಸ್ತುತ ಚನ್ನಪಟ್ಟಣ, ರಾಮನಗರ, ಕನಕಪುರ, ಮಾಗಡಿ ವಿಧಾನಸಭಾ ಕ್ಷೇತ್ರ ರಾಮನಗರ ಜಿಲ್ಲಾ ವ್ಯಾಪ್ತಿಗೆ ಸೇರಿವೆ. ಈಗಿನ ಬೇಡಿಕೆಯಂತೆ ರಾಮನಗರ ಜಿಲ್ಲೆಯ ಬದಲು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಪರಿಗಣಿಸಲು ಒತ್ತಾಯಿಸಲಾಗಿದೆ.
ರಾಮನಗರ ಜಿಲ್ಲೆ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಯವರ ಮಹತ್ವಾಕಾಂಕ್ಷಿಯಿಂದ ರೂಪುಗೊಂಡು ಬೆಳೆದು ನಿಂತಿದೆ. ಒಂದುವೇಳೆ ಡಿ.ಕೆ.ಶಿವಕುಮಾರ್ ಬೇಡಿಕೆಗೆ ಮಣೆ ಹಾಕಿದ್ದೇ ಆದರೆ ಮತ್ತೊಂದು ರಾಜಕೀಯ ಸಂಘರ್ಷಕ್ಕೂ ಹಾದಿಮಾಡಿಕೊಟ್ಟಂತಾಗಲಿದೆ.
26 ದಿನಗಳ ಜೈಲುವಾಸದಲ್ಲಿ 10 ಕೆಜಿ ತೂಕ ಕಳೆದುಕೊಂಡ ನಟ ದರ್ಶನ್: ಇದೇ ರೀತಿ ಮುಂದುವರಿದರೆ ದಚ್ಚು ಜೀವಕ್ಕೆ ಅಪಾಯ


