ಅನಾರೋಗ್ಯದಿಂದ ಬಳಲುತ್ತಿದ್ದ ಕೆಂಪ, ಗಣಪ ಹಾಗೂ ಕರಿಯ 2 ಖ್ಯಾತಿಯ ನಟ ಸಂತೋಷ್ ಬಾಲರಾಜ್ ಇಂದು ಬೆಳಗ್ಗೆ 9.45ರ ಸುಮಾರಿಗೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.
ಸಂತೋಷ್ ಬಾಲರಾಜ್ ಅವರಿಗೆ 35 ವರ್ಷ ವಯಸ್ಸಾಗಿತ್ತು. ಜಾಂಡೀಸ್ನಿಂದ ಬಳಲುತ್ತಿದ್ದ ಸಂತೋಷ್, ಕೆಲ ದಿನಗಳ ಹಿಂದೆ ಕುಮಾರಸ್ವಾಮಿ ಲೇಔಟ್ನ ಸಾಗರ್ ಅಫೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಬಾಲರಾಜ್ ಅವರನ್ನು ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ನಿನ್ನೆ (ಆಗಸ್ಟ್ 04) ಆರೋಗ್ಯದಲ್ಲಿ ಕೊಂಚ ಮಟ್ಟಿಗಿನ ಚೇತರಿಕೆ ಕಂಡಿತ್ತು. ಆದರೆ, ಇಂದು ಬೆಳಗ್ಗೆ ಸಾವಿಗೀಡಾಗಿದ್ದಾರೆ.
ಸಂತೋಷ್ ಅವರು ಹಿರಿಯ ನಿರ್ಮಾಪಕ ಆನೆಕಲ್ ಬಾಲರಾಜ್ ಅವರ ಪುತ್ರ. ಕರಿಯ-2, ಕೆಂಪ, ಗಣಪ, ಬರ್ಕ್ಲಿ ಹಾಗೂ ಸತ್ಯ ಸಿನಿಮಾಗಳಲ್ಲಿ ನಾಯಕನಾಗಿ ನಟಿಸಿ, ಜನಮನ್ನಣೆ ಗಳಿಸಿದ್ದಾರೆ. ಜಾಂಡೀಸ್ ಮೈಗೆಲ್ಲ ಹರಡಿ ಗಂಭೀರ ಸ್ಥಿತಿ ತಲುಪಿದ್ದರು. ಅಲ್ಲದೆ, ನಾಲ್ಕೈದು ದಿನಗಳಿಂದ ಕೋಮಾಗೆ ಜಾರಿದ್ದರು. ಆದರೆ, ಚಿಕಿತ್ಸೆ ಫಲಿಸದೇ ಇಹಲೋಕ ತ್ಯಜಿಸಿದ್ದಾರೆ.
ಇಂದು ಸಾರಿಗೆ ನೌಕರರ ಮುಷ್ಕರ: ಬಸ್ ನಿಲ್ದಾಣಗಳಲ್ಲಿ ಕಾಯುತ್ತಿರುವ ಜನ, ಬಸ್ಗಳಿಲ್ಲದೇ ಪರದಾಟ


