ಬೆಂಗಳೂರು: ಬಹುಭಾಷಾ ನಟಿ ತಮನ್ನಾ ಭಾಟಿಯಾ ಅವರನ್ನು ಮೈಸೂರು ಸ್ಯಾಂಡಲ್ ಸೋಪ್ ನ ಅಧಿಕೃತ ರಾಯಭಾರಿಯನ್ನಾಗಿ 2 ವರ್ಷಗಳ ಅವಧಿಗೆ ನೇಮಕ ಮಾಡಲಾಗಿದೆ.
ಕರ್ನಾಟಕ ಸರ್ಕಾರದ ಅಧೀನದಲ್ಲಿರುವ ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ ಲಿಮಿಟೆಡ್ ನಿಂದ ಈ ಪ್ರಕಟಣೆ ಹೊರಬಿದ್ದಿದ್ದು, ಮೈಸೂರು ಸ್ಯಾಂಡಲ್ ಮತ್ತು ಇತರ ಉತ್ಪನ್ನಗಳಿಗೆ 2 ವರ್ಷಗಳ ಅವಧಿಗೆ ನೇಮಕ ಮಾಡಲಾಗಿದೆ ಎಂದು ವಿವರಿಸಲಾಗಿದೆ.
ಸಂಭಾವನೆ 6 ಕೋಟಿ!
ಇದಕ್ಕೆ ತಮನ್ನಾ ಭಾಟಿಯಾ ಅವರಿಗೆ 6.2 ಕೋಟಿ ರೂಪಾಯಿ ಸಂಭಾವನೆ ನೀಡಲಾಗಿದ್ದು, ಇಷ್ಟೊಂದು ದೊಡ್ಡ ಮೊತ್ತ ನೀಡಿ ನೇಮಕ ಮಾಡಿಕೊಳ್ಳುವ ಅಗತ್ಯವಿತ್ತೇ ಎಂಬ ಪ್ರಶ್ನೆ ಕೂಡ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

ಕನ್ನಡಿಗರು ಸಿಗಲಿಲ್ಲವಾ?
ತಮನ್ನಾ ಭಾಟಿಯಾ ದಕ್ಷಿಣ ಭಾರತ ಚಿತ್ರರಂಗ ಸೇರಿದಂತೆ ಬಾಲಿವುಡ್ ನಲ್ಲಿ ಕೂಡ ಸಾಕಷ್ಟು ಜನಪ್ರಿಯತೆ ಗಳಿಸಿದ್ದಾರೆ. ಜೊತೆಗೆ ಗ್ಲಾಮರಸ್ ಕೂಡ ಆಗಿ ಕಾಣುತ್ತಾರೆ, ಇದನ್ನು ನೋಡಿ ಮಾರುಕಟ್ಟೆ ಲೆಕ್ಕಾಚಾರ ಹಾಕಿ ಕರ್ನಾಟಕ ಸರ್ಕಾರ ಅವರನ್ನು ಸಂಪರ್ಕಿಸಿ ನೇಮಕ ಮಾಡಿಕೊಂಡಿರಬಹುದು. ಆದರೆ ಕನ್ನಡದ ಕಲಾವಿದರು ಯಾರೂ ಸಿಗಲಿಲ್ಲವಾ ಎಂದು ಸಹ ನೆಟ್ಟಿಗರು ಪ್ರಶ್ನಿಸುತ್ತಿದ್ದಾರೆ.
ಕೊನೆ ಕ್ಷಣದಲ್ಲಿ ಡಿಜಿಪಿ ಪ್ರಮೋಷನ್ಗೆ ತಡೆ: ಅಲೋಕ್ ಕುಮಾರ್ಗೆ ಅಧಿಕಾರಿಗಳೇ ಅಡ್ಡಿ? ಇಲಾಖೆಯಲ್ಲೇ ಪಿತೂರಿ?


