BBMP
Loading ...

BBMP

ಬೆಂಗಳೂರು: ಬೆಂಗಳೂರಿನಲ್ಲಿರುವ ತಮ್ಮ ಸ್ಥಿರಾಸ್ತಿಗಳಿಗೆ ಇ – ಖಾತಾ ಮಾಡಿಸಲು ಬಿಬಿಎಂಪಿ ಕಚೇರಿಗೆ, ವಾರ್ಡ್ ಆಫೀಸ್ ಗಳಿಗೆ ಅಲೆದೂ ಸುಸ್ತಾಗಿದ್ದೀರಾ? ಇನ್ನು ಮುಂದೆ ಆ ಕಷ್ಟ ನಿಮಗಿಲ್ಲ. ಇ- ಖಾತಾಗಳ ಅರ್ಜಿ ಸ್ವೀಕಾರಕ್ಕಾಗಿಯೇ ಹೊಸತೊಂದು ವೆಬ್ ಸೈಟ್ ಅನ್ನು ಬಿಬಿಎಂಪಿ ಆರಂಭಿಸಿದೆ.

bbmpeaasthi.karnataka.gov.in ಎಂಬ ವೆಬ್ ಸೈಟ್ ಅನ್ನು ಇ- ಖಾತೆ ಅರ್ಜಿ ಸ್ವೀಕಾರ ಹಾಗೂ ವಿಲೇವಾರಿಗಾಗಿಯೇ ಆರಂಭಿಸಲಾಗಿದ್ದು, ಸಾರ್ವಜನಿಕರು ಈ ವೆಬ್ ಸೈಟ್ ಗೆ ಭೇಟಿ ನೀಡಿ ಅಲ್ಲಿ ಸಲ್ಲಿಸಿದರೆ, ನಿಮ್ಮ ದಾಖಲೆಗಳೆಲ್ಲವೂ ಸರಿಯಾಗಿದ್ದರೆ ಎರಡೇ ದಿನದಲ್ಲಿ ನಿಮ್ಮ ಆಸ್ತಿಗೆ ಇ-ಖಾತಾ ಸಿಗಲಿದೆ ಎಂದು ಬಿಬಿಎಂಪಿ ಕಂದಾಯ ವಿಭಾಗದ ಆಯುಕ್ತರಾದ ಮನೀಶ್ ಮೌದ್ಗಿಲ್ ತಿಳಿಸಿದ್ದಾರೆ. ಇಲ್ಲಿ ಸಲ್ಲಿಕೆಯಾಗುವ ಅರ್ಜಿಗಳನ್ನು ಸೂಕ್ತವಾಗಿ ವಿಲೇವಾರಿ ಮಾಡಲೆಂದೇ ಪ್ರತ್ಯೇಕವಾಗಿ ಅಸಿಸ್ಟಂಟ್ ರೆವಿನ್ಯೂ ಆಫೀಸರ್ ಗಳು (ಎಆರ್ ಒ) ಹಾಗೂ ಕೇಸ್ ವರ್ಕರ್ ಗಳನ್ನು ನಿಯೋಜಿಸಲಾಗಿದ್ದು, ಅವರು ಅರ್ಜಿಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಇ- ಖಾತಾಗಳನ್ನು ವಿಲೇವಾರಿ ಮಾಡಲಿದ್ದಾರೆ ಎಂದು ಮೌದ್ಗೀಲ್ ತಿಳಿಸಿದ್ದಾರೆ.

ಮಾ. 21ರವರೆಗೆ ಇ-ಖಾತಾಕ್ಕಾಗಿ 2.9 ಲಕ್ಷ ಅರ್ಜಿಗಳು ಬಂದಿದ್ದವು. ಅವುಗಳಲ್ಲಿ 2.7 ಲಕ್ಷ ಅರ್ಜಿಗಳನ್ನು ವಿಲೇವಾರಿ ಮಾಡಲಾಗಿತ್ತು. ಉಳಿಕೆ ಅರ್ಜಿಗಳನ್ನು ಶನಿವಾರದಂದು ವಿಲೇವಾರಿ ಮಾಡಲಾಗಿದೆ. ಎಲ್ಲಾ ಎಆರ್ ಒಗಳಿಗೆ ಅರ್ಜಿ ವಿಲೇವಾರಿಗಾಗಿ ಪ್ರತ್ಯೇಕ ವ್ಯವಸ್ಥೆಯನ್ನು ನೀಡಲಾಗಿದೆ. ಸೋಮವಾರದಿಂದ ಬರುವ ಹೊಸ ಪ್ರತಿ ಅರ್ಜಿಗೂ ಎರಡು ದಿನಗಳ ಡೆಡ್ ಲೈನ್ ಇಟ್ಟುಕೊಂಡು ಇ- ಖಾತಾ ಪ್ರಮಾಣಪತ್ರಗಳನ್ನು ನೀಡಲಾಗುತ್ತದೆ ಎಂದು ಆಯುಕ್ತರು ಹೇಳಿದ್ದಾರೆ.

ಅರ್ಜಿ ವಿಲೇವಾರಿಯಲ್ಲಿ ಏನಾದರೂ ತೊಡಕುಗಳಿದ್ದರೆ ಅವುಗಳನ್ನು ಬೇಗನೇ ಪರಿಹರಿಸಲು ಸಾಧ್ಯವಾಗುವ ನಿಟ್ಟಿನಲ್ಲಿ ಪ್ರತಿ ದಿನ ಇ-ಖಾತಾ ವಿತರಿಸಲಾಗುತ್ತಿರುವ ಎಂಟು ಝೋನಲ್ ಕಚೇರಿಗಳ ಅಧಿಕಾರಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿಸಿ, ಏನಾದರೂ ತಾಂತ್ರಿಕ ಸಮಸ್ಯೆಗಳಿವೆಯೇ ಎಂದು ವಿಚಾರಿಸಲಾಗುತ್ತಿದೆ. ಏನಾದರೂ ಸಮಸ್ಯೆಗಳಿದ್ದರೆ ಅವುಗಳನ್ನು ಕೂಡಲೇ ನಿವಾರಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಹಾಗಾಗಿ, ಇ- ಖಾತೆ ಅರ್ಜಿ ವಿಲೇವಾರಿ ತ್ವರಿತವಾಗಿ ಆಗುವಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ.

ಮಲ್ಲೇಶ್ವರದಲ್ಲಿ ಅಕ್ರಮ ಕಟ್ಟಡ ನಿರ್ಮಾಣಕ್ಕೆ ತಡೆ
ಬೆಂಗಳೂರು ನಗರದ ಮಲ್ಲೇಶ್ವರದ ಸಂಪಿಗೆ ರಸ್ತೆಯ ನಾಲ್ಕನೇ ಅಡ್ಡರಸ್ತೆಯಲ್ಲಿಅಕ್ರಮವಾಗಿ ನಿರ್ಮಿಸಲಾಗುತ್ತಿದ್ದ ವಾಣಿಜ್ಯ ಕಟ್ಟಡದ ಕಾಮಗಾರಿಗೆ ಹೈಕೋರ್ಟ್‌ ತಡೆ ನೀಡಿದೆ. ನ್ಯಾಯವಾದಿ ಎನ್‌.ಪಿ.ಅಮೃತೇಶ್‌ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾ. ಸುನಿಲ್‌ ದತ್‌ ಯಾದವ್‌ ಅವರಿದ್ದ ಏಕಸದಸ್ಯಪೀಠ ಈ ಮಧ್ಯಂತರ ಆದೇಶ ನೀಡಿದೆ. ಅರ್ಜಿದಾರರ ಪರ ವಾದ ಆಲಿಸಿದ ನ್ಯಾಯಾಲಯ, ಮುಂದಿನ ಆದೇಶದವರೆಗೆ ಯಾವುದೇ ನಿರ್ಮಾಣ ಕಾಮಗಾರಿಯನ್ನು ಕೈಗೊಳ್ಳುವಂತಿಲ್ಲಎಂದು ಆದೇಶಿಸಿ ವಿಚಾರಣೆಯನ್ನು ಏ.9ಕ್ಕೆ ಮುಂದೂಡಿದೆ.

ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಕೆ.ಎಸ್‌.ಅರುಣ್‌, ಮಲ್ಲೇಶ್ವರದ ಸಂಪಿಗೆ ರಸ್ತೆಯ ನಾಲ್ಕನೇ ಕ್ರಾಸ್‌ನಲ್ಲಿಅಕ್ರಮವಾಗಿ ವಾಣಿಜ್ಯ ಕಟ್ಟಡ ಕಾಮಗಾರಿ ಕೈಗೊಂಡಿದ್ದು, ನಿಯಮಾವಳಿಗಳನ್ನು ಗಾಳಿಗೆ ತೂರಲಾಗಿದೆ. ಅಲ್ಲದೇ ಬಿಬಿಎಂಪಿಯ ನಕ್ಷೆ ಮಂಜೂರಾತಿ ಉಲ್ಲಂಘಿಘಿಸಿ, ಐದು ಅಂತಸ್ತುಗಳನ್ನು ಹೆಚ್ಚುವರಿಯಾಗಿ ನಿರ್ಮಿಸಲಾಗುತ್ತಿದೆ. ಹಾಗಾಗಿ ನಿರ್ಮಾಣ ಕಾಮಗಾರಿಗೆ ತಡೆ ನೀಡಬೇಕೆಂದು ಕೋರಿದರು.

ಬಿಬಿಎಂಪಿ ಪರ ವಕೀಲರು, ನಿಯಮ ಉಲ್ಲಂಘಿಘಿಸಿ ವಾಣಿಜ್ಯ ಸಂಕೀರ್ಣವನ್ನು ನಿರ್ಮಿಸುತ್ತಿರುವುದು ಪಾಲಿಕೆ ಗಮನಕ್ಕೆ ಬಂದಿದೆ. ನಿಯಮಬಾಹಿರವಾಗಿ 5 ಮಹಡಿಗಳನ್ನು ಹೆಚ್ಚುವರಿಯಾಗಿ ನಿರ್ಮಿಸುತ್ತಿರುವುದರಿಂದ ಬಿಬಿಎಂಪಿ ಈಗಾಗಲೇ ಆ ಅನಧಿಕೃತ ಭಾಗವನ್ನು ತೆರವುಗೊಳಿಸಲು 2025ರ ಮಾ.14ರಂದೇ ನೋಟಿಸ್‌ ನೀಡಿದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ಸಂಪಿಗೆ ರಸ್ತೆಯ 4ನೇ ಕ್ರಾಸ್‌ನಲ್ಲಿಹಿಂದೆ ರತ್ನ ಮಹಲ್‌ ಇದ್ದ ಜಾಗದಲ್ಲಿಬೃಹತ್‌ ವಾಣಿಜ್ಯ ಸಂಕೀರ್ಣವನ್ನು ನಿರ್ಮಿಸಲಾಗುತ್ತಿದ್ದು, ನಿಯಮಗಳನ್ನು ಉಲ್ಲಂಘಿಘಿಸಲಾಗಿದೆ. ಇಂತಹ ಕಟ್ಟಡಗಳಿಂದ ಸಾರ್ವಜನಿಕರಿಗೆ ತೊಂದರೆ ಆಗಲಿದೆ. ಆ ರಸ್ತೆಯಲ್ಲಿವಾಹನ ದಟ್ಟಣೆ ಹೆಚ್ಚಲಿದೆ ಎಂದು ಅರ್ಜಿದಾರರು ನ್ಯಾಯಾಲಯದ ಮೊರೆ ಹೋಗಿದ್ದರು.

ಯುಗಾದಿ, ರಂಜಾನ್ ಹಬ್ಬಕ್ಕೆ ಬಿಬಿಎಂಪಿ ಅಧಿಕಾರಿಗಳು, ಸಿಬ್ಬಂದಿಗಳ ರಜೆ ರದ್ದು!

Leave a Reply

Your email address will not be published. Required fields are marked *