BBMP
Loading ...

ಬೆಂಗಳೂರು: ಬೆಂಗಳೂರಿನಲ್ಲಿ ಮಳೆ ಚುರುಕು ಪಡೆದಿದೆ. ನಿನ್ನೆ (ಜೂನ್​ 02) ಸುರಿದ ಮಳೆಗೆ ಸಾಕಷ್ಟು ಮರಗಳು ಧರೆಗೆ ಉರುಳಿವೆ. ಅಲ್ಲಲ್ಲಿ ಟ್ರಾಫಿಕ್, ಇನ್ನಿತರ ಸಮಸ್ಯೆ ಉಂಟಾಗಿದೆ. ಜನರಿಗೆ ತ್ವರಿತವಾಗಿ ಸ್ಪಂದಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ‘ಕಂಟ್ರೋಲ್ ರೂಂ’ ಸ್ಥಾಪಿಸಿದೆ.

ಬೆಂಗಳೂರಿನಲ್ಲಿ ಇದೀಗ ತಂಪು ವಾತಾವರಣ ನಿರ್ಮಾಣವಾಗಿದೆ. ಕಾರಣ ದಿಢೀರ್ ಬರುತ್ತಿರುವ ಮಳೆ. ಆದರೆ ಈ ಮಳೆಯಿಂದ ಹಲವೆಡೆ ಅದ್ವಾನಗಳು ನಡೆದಿವೆ. ಇಂತಹ ಸಮಯದಲ್ಲಿ ತ್ವರಿತವಾಗಿ ಸ್ಪಂದಿಸಲು, ವಿಪತ್ತು ನಿರ್ವಹಣೆಗಾಗಿ ಬಿಬಿಎಂಪಿ ತನ್ನ ಎಲ್ಲ ಎಂಟು ವಲಯಗಳಲ್ಲಿ ಪ್ರತ್ಯೇಕವಾಗಿ ಕಂಟ್ರೋಲ್ ರೂಂ ಸ್ಥಾಪನೆ ಮಾಡಿದೆ, ದೂರವಾಣಿ/ಸಹಾಯವಾಣಿ ಸಂಖ್ಯೆ ಪ್ರಕ್ರಿಸಿದೆ. ನಿವಾಸಿಗಳು ಈ ಸಂಖ್ಯೆಗೆ ಕರೆ ಮಾಡಿ ಸಮಸ್ಯೆ ಹೇಳಿಕೊಳ್ಳಬಹುದು. ದೂರು ನೀಡಬಹುದು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು (ಬಿಬಿಎಂಪಿ) ವಿಪತ್ತು ನಿರ್ವಹಣೆಗೆ ಸಿದ್ಧತೆಗಳನ್ನು ಮಾಡಿಕೊಂಡಿದೆ. ಇದೀಗ 24/7 ಕಾರ್ಯ ನಿರ್ವಹಿಸುವ ಕಂಟ್ರೋಲ್ ರೂಂ ಸ್ಥಾಪಿಸಿದೆ. ಬಿಬಿಎಂಪಿ ಉಚಿತ ಸಹಾಯವಾಣಿ ಸಂಖ್ಯೆ 1533 ಜೊತೆಗೆ ಮಹಾನಗರದಲ್ಲಿನ ವಿವಿಧ 08 ವಲಯಗಳಲ್ಲಿ ಪ್ರತ್ಯೇಕವಾಗಿ ಕಂಟ್ರೋಲ್ ರೂಂ ನಿರ್ಮಿಸಿದ್ದು, ಸಿಬ್ಬಂದಿ ನಿಯೋಜಿಸಿದೆ. ಇವರು ಮಳೆಗಾಲದ ಸಮಯದಲ್ಲಿ ದಿನಪೂರ್ತಿ ಜನರ ನೆರವಿಗೆ ಧಾವಿಸಲಿದ್ದಾರೆ ಎಂದು ಬಿಬಿಂಪಿ ಬುಧವಾರ ತಿಳಿಸಿದೆ. ಹಾಗಾದರೆ ವಲಯವಾರು ಕಂಟ್ರೋಲ್ ರೂಂ ದೂರವಾಣಿ, ಮೊಬೈಲ್ ಸಂಖ್ಯೆ ಇಲ್ಲಿ ತಿಳಿಯಿರಿ.

ಸರ್ಕಾರಿ ನೌಕರ ಲಂಚ ಪಡೆದಿದ್ದಲ್ಲಿ ಶಿಕ್ಷೆ ಎದುರಿಸಲು ಸಹ ರೆಡಿಯಾಗಿರಬೇಕು: ಹೈಕೋರ್ಟ್ ಮಹತ್ವದ ತೀರ್ಪು

Leave a Reply

Your email address will not be published. Required fields are marked *