BBMP
Loading ...

bribe

Greater Bengaluru News9: ಸರ್ಕಾರಿ ಕಚೇರಿಗಳಲ್ಲಿ ಲಂಚ ಕೊಡದೆ ಯಾವ ಕೆಲಸವೂ ನಡೆಯುವುದಿಲ್ಲ ಎಂಬ ಆರೋಪವಿದೆ. ಸರ್ಕಾರ ಹಲವು ಕ್ರಮಗಳನ್ನು ತೆಗೆದುಕೊಂಡರೂ ಲಂಚದ ಪಿಡುಗನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ಸಾಧ್ಯವಾಗಿಲ್ಲ. ಈಗ ರಾಜಧಾನಿ ಬೆಂಗಳೂರಿನಲ್ಲಿ ಭಾರತ್ ಪೆಟ್ರೋಲಿಯಂ ನಿಗಮದ ನಿವೃತ್ತ ಸಿಎಫ್​ಒ ಶಿವಕುಮಾರ್ ಅವರ ಮಗಳ ಸಾವಿನ ನಂತರದ ಪ್ರತಿಯೊಂದು ಹಂತದಲ್ಲೂ ಲಂಚಕ್ಕಾಗಿ ಅಧಿಕಾರಿಗಳು ಪೀಡಿಸಿದ ಮತ್ತೊಂದು ಅಮಾನವೀಯ ಘಟನೆ ಇದೀಗ ಬೆಳಕಿಗೆ ಬಂದಿದೆ.

ನಿವೃತ್ತ ಸಿಎಫ್​ಒ ಶಿವಕುಮಾರ್ ಅವರ ತಮ್ಮ ಮಗಳ ಮರಣದ ನಂತರ ಬೆಂಗಳೂರಿನಲ್ಲಿ ಅಧಿಕಾರಿಗಳಿಂದ ತಾವು ಎದುರಿಸಿದ ಕಿರುಕುಳ ಮತ್ತು ಲಂಚಕ್ಕೆ ಸಂಬಂಧಿಸಿದ ಅಸಹನೀಯ ಅನುಭವವನ್ನು ಲಿಂಕ್ಡ್​​ಇನ್​ನಲ್ಲಿ ಪೋಸ್ಟ್ ಮಾಡಿದ್ದಾರೆ. ಬೆಳ್ಳಂದೂರು ಪೊಲೀಸರ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. ಇದರ ಆಧಾರದ ಮೇಲೆ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ಶಿವಕುಮಾರ್ ಅವರಿಂದ ಲಂಚ ಪಡೆದ ಆರೋಪದ ಮೇಲೆ ಬೆಳ್ಳಂದೂರು ಪೊಲೀಸ್ ಠಾಣೆಯ ಪಿಎಸ್​ಐ ಸಂತೋಷ್ ಮತ್ತು ಕಾನ್​ಸ್ಟೇಬಲ್ ಗೋರಖ್​ನಾಥ್ ಅವರನ್ನು ಅಮಾನತು ಮಾಡಲಾಗಿದೆ. ಈ ಅರೋಪ ಬೆಳಕಿಗೆ ಬರುತ್ತಿದ್ದಂತೆ ಅಧಿಕಾರಿಗಳ ಅಮಾನವೀಯ ವರ್ತನೆ ವಿರುದ್ಧ ಎಲ್ಲೆಡೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.

Leave a Reply

Your email address will not be published. Required fields are marked *