BBMP
Loading ...

Sudhakar

Greater Bengaluru News9 : ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಡಾ.ಕೆ.ಸುಧಾಕರ್​ ಪತ್ನಿಗೆ ಡಿಜಿಟಲ್ ಅರೆಸ್ಟ್ ಮಾಡಿ ವಂಚಕರು ಬರೋಬ್ಬರಿ 14 ಲಕ್ಷ ರೂ ಹಣ ದೋಚಿರುವಂತಹ ಘಟನೆ ಬೆಳಕಿಗೆ ಬಂದಿದೆ. ಆ.26ರಂದೇ ಪಶ್ಚಿಮ ಸೈಬರ್ ಠಾಣೆಗೆ ಡಾ.ಪ್ರಿಯಾ ದೂರು ನೀಡಿದ್ದರು. ಗೋಲ್ಡನ್ ಅವರ್​ನಲ್ಲಿ ದೂರು‌ ನೀಡಿದ್ದರಿಂದ 14 ಲಕ್ಷ ರೂ ಹಣ ಕೂಡ ವಾಪಸ್ ಬಂದಿದೆ. ಸದ್ಯ ಸೈಬರ್​ ವಂಚಕರ ಜಾಲ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

ಬಿಜೆಪಿ ಸಂಸದ ಡಾ.ಕೆ.ಸುಧಾಕರ್​ ಪತ್ನಿ ಡಾ.ಪ್ರಿಯಾ ಅವರಿಗೆ ಆಗಸ್ಟ್ 26ರಂದು ಸೈಬರ್ ವಂಚಕರಿಂದ ಫೋನ್​ ಕಾಲ್​ ಬಂದಿದೆ. ನಾವು ಮುಂಬೈ ಸೈಬರ್​ ಡಿಪಾರ್ಟ್ಮೆಂಟ್ ಸಿಬ್ಬಂದಿ ಎಂದು ಹೇಳಿಕೊಂಡು ವಂಚಿಸಿದ್ದಾರೆ.

ವಂಚಿಸಿದ್ದು ಹೇಗೆ
ಅಪರಿಚಿತ ವ್ಯಕ್ತಿಯೊಬ್ಬ ನಿಮ್ಮ ದಾಖಲೆಗಳನ್ನು ಬಳಸಿಕೊಂಡಿದ್ದಾರೆ. ನಿಮ್ಮ ಹೆಸರಲ್ಲಿ ಕ್ರೆಡಿಟ್ ಕಾರ್ಡ್ ಮಾಡಿಸಿ ಅಕ್ರಮವಾಗಿ ವರ್ಗಾವಣೆ ಮಾಡಿದ್ದಾನೆ ಎಂದು ಸೈಬರ್​​ ವಂಚಕರು ಕಥೆ ಕಟ್ಟಿದ್ದಾರೆ ಎನ್ನಲಾಗುತ್ತಿದೆ. ಇನ್ನು ವಂಚನೆಗೆ ಒಳಗಾಗಿರುವುದು ಗೊತ್ತಾಗುತ್ತಿದ್ದಂತೆ ರಾಷ್ಟ್ರೀಯ ಸೈಬರ್ ಸಹಾಯವಾಣಿ 1930ನಲ್ಲಿ ಡಾ. ಪ್ರಿಯಾ ದೂರು ದಾಖಲಿಸಿದ್ದರು. ಇದರಿಂದ ತಕ್ಷಣ ಹಣ ವರ್ಗಾವಣೆಯಾಗಿದ್ದ ಅಕೌಂಟ್ ಫ್ರೀಜ್ ಆಗಿದೆ. ಬಳಿಕ ಹಣ ವಾಪಸ್​ಗೆ ಪೊಲೀಸರು ಕೋರ್ಟ್ ಮೊರೆ ಹೋಗಿದ್ದರು.

ಸೆ.3ರಂದು ಹಣ ವಾಪಸ್ ಮಾಡಲು ಸಂಬಂಧಪಟ್ಟ ಬ್ಯಾಂಕ್​ಗೆ ಕೋರ್ಟ್ ಆದೇಶಿಸಿದೆ. ಇದರಿಂದ ಸಂಪೂರ್ಣ 14 ಲಕ್ಷ ರೂ. ಹಣ ಕೂಡ ವಾಪಸ್ ಬಂದಿದೆ. ಸದ್ಯ ಸೈಬರ್​ ವಂಚಕರ ಜಾಲ ಪತ್ತೆಗೆ ಶೋಧ ಕಾರ್ಯ ಮುಂದುವರಿಸಿದ್ದಾರೆ.

ಐಎಎಸ್ ಅಧಿಕಾರಿ ಹೆಸರಲ್ಲೂ ವಂಚನೆ
ಇನ್ನು ಇತ್ತೀಚೆಗೆ ಹಿರಿಯ ಐಎಎಸ್ ಅಧಿಕಾರಿ ಮೇಜರ್ ಮಣಿವಣ್ಣನ್​ಗೆ ಸೈಬರ್ ವಂಚಕರು ವಂಚಿಸಿದ್ದರು. ಅವರ ಹೆಸರಿನಲ್ಲಿ ಫೇಸ್ ಬುಕ್ ಖಾತೆ ತೆರೆದು ಫರ್ನಿಚರ್ ಮಾರಾಟದ ಹೆಸರಿನಲ್ಲಿ ಅವರ ಆಪ್ತರಿಗೆ ವಂಚಿಸಲಾಗಿತ್ತು. ಬಳಿಕ ಆರೋಪಿಗಳ ಪತ್ತೆ ಮಾಡಿ ಅಕೌಂಟ್ ಡಿಆ್ಯಕ್ಟಿವೇಟ್ ಮಾಡುವಂತೆ ಪೊಲೀಸರಲ್ಲಿ ಮಣಿವಣ್ಣನ್ ಮನವಿ ಮಾಡಿಕೊಂಡಿದ್ದರು.

Leave a Reply

Your email address will not be published. Required fields are marked *