BBMP
Loading ...

IMG-20260607-WA0002

Greater Bengaluru News9 : ಸಾರ್ವಜನಿಕರಿಗೆ ತೊಂದರೆ ಆಗಬಹುದಾದ “ಜೀರೋ ಟ್ರಾಫಿಕ್” ಕಾರು ಪ್ರಯಾಣ ತಪ್ಪಿಸಲು ಸಿಎಂ ಡಿ ಕೆ ಶಿವಕುಮಾರ್ ಅವರು ದಿನಾಂಕ 07-06-2026 ರಂದು ಬೆಳಗ್ಗೆ 9.00 ಗಂಟೆಗೆ ವಿಧಾನಸೌಧದ ಎದುರಿನ ಮೆಟ್ರೋ ಸ್ಟೇಷನ್ ನಿಂದ ಕನಕಪುರ ರಸ್ತೆ ಕೊನೇ ಮೆಟ್ರೋ ಸ್ಟೇಷನ್ ವರೆಗೆ ಮೆಟ್ರೋ ರೈಲಿನಲ್ಲಿ ಪ್ರಯಾಣ ಬೆಳೆಸಿದರು.

ಸಿಎಂ ಅವರು ಬೆಂಗಳೂರು ದಕ್ಷಿಣ ಜಿಲ್ಲೆಯ ಹಾರೋಹಳ್ಳಿ ಮತ್ತು ಕನಕಪುರ ತಾಲೂಕಿನ ನಾನಾ ಕಡೆ ಜನರಿಗೆ ಕೃತಜ್ಞತೆ ಸಲ್ಲಿಸಲು ಭಾನುವಾರ ಬೆಳಗ್ಗೆ 10 ಗಂಟೆಯಿಂದ ರಾತ್ರಿ 9.00 ರವರೆಗೆ ಕೃತಜ್ಞತೆ ಸಮರ್ಪಣಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಸದಾಶಿವನಗರ ನಿವಾಸದಿಂದ ಕನಕಪುರ ರಸ್ತೆವರೆಗೂ ಜೀರೋ ಟ್ರಾಫಿಕ್ ಬಳಸುವುದರಿಂದ ಜನರ ವಾಹನ ಸಂಚಾರಕ್ಕೆ ತೊಂದರೆ ಆಗುತ್ತದೆ ಎಂಬುದನ್ನು ಮನಗಂಡು ಸಿಎಂ ಅವರು ಈ ನಿರ್ಧಾರಕ್ಕೆ ಬಂದಿದ್ದಾರೆ.

Leave a Reply

Your email address will not be published. Required fields are marked *