ಬೆಂಗಳೂರು: ಕೆಲವು ಮಂದಿ ಶಾಸಕರ ವಿರುದ್ಧ ಕಾಂಗ್ರೆಸ್ ಪಕ್ಷದ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಕೆಲವು ಸಚಿವರನ್ನು ಈಗಲೇ ಸಂಪುಟದಿಂದ ಕೈಬಿಡುವುದು ಸೂಕ್ತ ಎಂದು ಆಗ್ರಹಿಸಿದ್ದಾರೆ ಎಂಬುದು ತಿಳಿದು ಬಂದಿದೆ. ಗುರುವಾರ ರಾತ್ರಿ ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕೆಲವು ಸಚಿವರ ವಿರುದ್ಧ ಶಾಸಕರು ಸಿಎಂ ಸಿದ್ದರಾಮಯ್ಯ ಬಳಿ ದೂರು ನೀಡಿದ್ದಾರೆ.
ಶಾಸಕರ ಅಸಮಾಧಾನಗಳೇನು?
ಸಚಿವರ ಕಾರ್ಯವೈಖರಿ ಬಗ್ಗೆ ಹಲವು ಮಂದಿ ಹಿರಿಯ ಶಾಸಕರೇ ಸಿದ್ದರಾಮಯ್ಯ ಬಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 136 ಶಾಸಕರ ಮೊಬೈಲ್ ಸಂಖ್ಯೆಯನ್ನು ಇಟ್ಟುಕೊಳ್ಳುವುದು ಕೂಡ ಸಚಿವರಿಗೆ ಕಷ್ಟವಾಗುತ್ತದೆಯೇ ಎಂದು ಶಾಸಕರು ಪ್ರಶ್ನಿಸಿದ್ದಾರೆ. ಏಳೆಂಟು ಬಂದಿದ್ದ ಸಚಿವರ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಈ ಸಚಿವರು ತಮ್ಮ ಕಾರ್ಯವೈಖರಿಯನ್ನು ಸುಧಾರಿಸಿಕೊಳ್ಳಬೇಕು ಎಂದು ಶಾಸಕರು ತಾಕಿತು ಮಾಡಿದ್ದಾರೆ.
ಇನ್ನು ಸಭೆಯಲ್ಲಿ ವಿನಯ್ ಕುಲಕರ್ಣಿ, ರಾಜು ಕಾಗೆ, ಮಾಲೂರು ನಂಜೇಗೌಡ ಖಾರವಾಗಿಯೇ ಮಾತನಾಡಿದ್ದಾರೆ ಎನ್ನಲಾಗಿದೆ. ಅನುದಾನಕ್ಕೂ ಬಿಗಿಪಟ್ಟು ಹಿಡಿದು ಸಿಎಂ ಮುಂದೆ ಆಗ್ರಹ ಮಂಡಿಸಿದ್ದಾರೆ. ಅನುದಾನ ಬಿಡುಗಡೆಗೆ ಸಚಿವರಿಗೆ ನೀವೇ ಖುದ್ದಾಗಿ ಹೇಳಿ ಎಂದು ಸಿಎಂಗೆ ಒತ್ತಡ ಹೇರಿದ್ದಾರೆ.
ಅನುದಾನ ಇಲ್ಲದೆ ಹೋದರೆ ಕ್ಷೇತ್ರಕ್ಕೆ ಕಾಲಿಡುವುದು ಕಷ್ಟವಾಗುತ್ತದೆ. ಅನುದಾನಕ್ಕಾಗಿ ಒಂದು ವರ್ಷದಿಂದ ಚಾತಕ ಪಕ್ಷಗಳಂತೆ ಕಾದಿದ್ದೇವೆ. ಇನ್ನಷ್ಟು ನಮ್ಮ ತಾಳ್ಮೆಯನ್ನು ಪರೀಕ್ಷಿಸಬೇಡಿ. ಅನುದಾನ ಇಲ್ಲದೆ ಹೋದರೆ ಕ್ಷೇತ್ರದಲ್ಲಿ ಓಡಾಡುವುದು ಕಷ್ಟವಾಗುತ್ತದೆ. ಎಷ್ಟೇ ಬಾರಿ ಹೇಳಿದರೂ ಸಚಿವರ ವರ್ತನೆ ಬದಲಾಗಿಲ್ಲ. ಕೆಲವು ಸಚಿವರನ್ನ ತಕ್ಷಣ ಸಂಪುಟದಿಂದ ಕೈ ಬಿಡುವುದು ಒಳ್ಳೆಯದು ಎಂದು ಸಚಿವರ ವಿರುದ್ಧ ಶಾಸಕಾಂಗ ಸಭೆಯಲ್ಲಿ ಶಾಸಕರು ಅಪಸ್ವರ ಎತ್ತಿದ್ದಾರೆ.
ಬಿಬಿಎಂಪಿ ಕಡೆಯಿಂದ ರೀಲ್ಸ್ ಪ್ರಿಯರಿಗೆ ಬಂಪರ್ ಆಫರ್: ಡೆಂಗ್ಯೂ ಬಗ್ಗೆ ರೀಲ್ಸ್ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ!


