BBMP
Loading ...

ಬೆಂಗಳೂರು : ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಹಾಗೂ ಸಹೋದರರ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ಬೆನ್ನಲ್ಲೇ ಇದೀಗ ಕಾಂಗ್ರೆಸ್ ನಾಯಕಿ ಕುಸುಮಾ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಮುದ್ದಿನಪಾಳ್ಯ ನಿವಾಸದಲ್ಲಿರುವ ಆರ್ ಆರ್ ನಗರದ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಕುಸುಮಾ ನಿವಾಸದ ಮೇಲೆ ಇಡಿ (E.D) ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಹಾಗೂ ಸಹೋದರರ ನಿವಾಸದ ಮೇಲೆ ಇಡಿ ( E.D) ಅಧಿಕಾರಿಗಳು ದಾಳಿ ನಡೆಸಿದ್ದರು. ಈ ಬೆನ್ನಲ್ಲೇ ಕುಸುಮಾ ಮನೆ ಮೇಲೂ ದಾಳಿ ನಡೆದಿದೆ.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದಲ್ಲಿರುವ 4 ಮನೆಗಳ ಮೇಲೆ ಇಡಿ ದಾಳಿ ನಡೆಸಿತ್ತು.ಕೆಸಿ ವೀರೇಂದ್ರ, ಕೆಸಿ ನಾಗರಾಜ, ಕೆಸಿ ತಿಪ್ಪೇಸ್ವಾಮಿ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದರು.

Leave a Reply

Your email address will not be published. Required fields are marked *