ಸಿಂಡಿಕೇಟ್ ಬ್ಯಾಂಕ್ ಕಾಲೋನಿ ಶಿರಡಿ ಸಾಯಿ ಚಾರಿಟಬಲ್ ಟ್ರಸ್ಟ್ ವತಿಯಿಂದ ಕಣ್ಣಿನ ತಪಾಸಣೆ, ಶಸ್ತ್ರಚಿಕಿತ್ಸೆ ಶಿಬಿರ
ಬೆಂಗಳೂರು: ಸಿಂಡಿಕೇಟ್ ಬ್ಯಾಂಕ್ ಕಾಲೋನಿ ಶ್ರೀ ಶಿರಡಿ ಸಾಯಿ ಚಾರಿಟಬಲ್ ಟ್ರಸ್ಟ್ ವತಿಯಿಂದ ಪ್ರತಿ ತಿಂಗಳು ಕೊನೆಯ ಗುರುವಾರದಂದು ಕಣ್ಣಿನ ತಪಾಸಣೆ ಹಾಗೂ ಶಸ್ತ್ರಚಿಕಿತ್ಸೆ ಶಿಬಿರ ನಡೆಸಲಾಗುತ್ತದೆ.

ಲಯನ್ಸ್ ಕ್ಲಬ್ ಆಫ್ ಸೋಮೇಶ್ವರಪುರ, ಗೊರಗುಂಟೆಪಾಳ್ಯದ ಪೀಪಲ್ ಟ್ರೀ ಹಾಸ್ಪಿಟಲ್, ಡಾ. ಜಿ.ಕೆ. ಕುಲಕರ್ಣಿ ಮೊಮೊರಿಯಲ್ ಐ ಕ್ಲಿನಿಕ್ ಹಾಗೂ ಶ್ರದ್ಧಾ ಐ ಕೇರ್ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಸಿಂಡಿಕೇಟ್ ಬ್ಯಾಂಕ್ ಕಾಲೋನಿ ಶ್ರೀ ಶಿರಡಿ ಸಾಯಿ ಚಾರಿಟಬಲ್ ಟ್ರಸ್ಟ್ ವತಿಯಿಂದ ಈ ಶಿಬಿರವನ್ನು ನಡೆಸಲಾಗುತ್ತದೆ.

ಪ್ರತಿ ತಿಂಗಳ ಕೊನೆಯ ಗುರುವಾರ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1ಗಂಟೆಯವರೆಗೆ ಮಾಗಡಿ ಮುಖ್ಯರಸ್ತೆಯ ಸಿಂಡಿಕೇಟ್ ಬ್ಯಾಂಕ್ ಕಾಲೋನಿಯ ಸಾಯಿಮಂದಿರದಲ್ಲಿ ಕಣ್ಣಿನ ತಪಾಸಣೆ ಹಾಗೂ ಶಸ್ತ್ರಚಿಕಿತ್ಸೆ ಶಿಬಿರ ನಡೆಸಲಾಗುತ್ತದೆ.

ಅಗತ್ಯವುಳ್ಳವರಿಗೆ ರಿಯಾಯಿತಿ ದರದಲ್ಲಿ ಕನ್ನಡಕ ಸಹ ನೀಡಲಾಗುತ್ತದೆ. ಕಣ್ಣಿನ ತಪಾಸಣೆ ಮಾತ್ರವಲ್ಲದೆ, ಮಧುಮೇಹ ತಪಾಸಣೆ ಕೂಡ ಇರಲಿದೆ. ಹೆಚ್ಚಿನ ಮಾಹಿತಿಗೆ ಫೋನ್ ನಂಬರ್ 8553052568 ಅನ್ನು ಸಂಪರ್ಕಿಸಿ.
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಕತ್ತರಿ?: ರಾಜ್ಯ ಉಸ್ತುವಾರಿ ಬಳಿ ಅಸಮಾಧಾನ!


