BBMP
Loading ...

GESCOM

ಯಾದಗಿರಿ: ಜೆಸ್ಕಾಂ ನಿರ್ಲಕ್ಷ್ಯದಿಂದ ತುಂಡರಿಸಿ ಬಿದ್ದ ವಿದ್ಯುತ್ ಹೈಟೆನ್ಷನ್ ವೈಯರ್ ತಗುಲಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಯಾದಗಿರಿಯ ಮಾತಾಮಣಿಕೇಶ್ವರ ನಗರದಲ್ಲಿ ನಡೆದಿದೆ.

ವಡಗೇರಾ ತಾಲೂಕಿನ ಬಬಲಾದ ಗ್ರಾಮದ ನಿವಾಸಿ ಕಾಜಾ ಪಟೇಲ್(23) ಮೃತ ಬೈಕ್ ಸವಾರ. ಕಾಜಾ ಪಟೇಲ್, ಯಾದಗಿರಿಯ ಸಹೋದರಿ ಮನೆಗೆ ತೆರಳಿ, ವಾಪಸ್ ಆಗುತ್ತಿದ್ದ ವೇಳೆ ತುಂಡರಿಸಿ ಬಿದ್ದಿದ್ದ ಹೈಟೆನ್ಷನ್ ವೈಯರ್ ನೋಡದೇ ಬೈಕ್‌ನಲ್ಲಿ ಹೋಗುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ.

ಕಳೆದ ಮೂರು ದಿನದ ಹಿಂದೆ ಬಿರುಗಾಳಿ ಮಳೆಗೆ ಹೈಟೆನ್ಷನ್ ವೈಯರ್ ತುಂಡರಿಸಿ ಬಿದ್ದಿದ್ದು, ತುಂಡರಿಸಿ ಬಿದ್ದಿದ್ದ ವೈಯರನ್ನು ಸರಿಪಡಿಸದೇ ಜೆಸ್ಕಾಂ ಅಧಿಕಾರಿಗಳು ನಿರ್ಲಕ್ಷ್ಯವಹಿಸಿದ್ದಾರೆ.

ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ಯಾದಗಿರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಬಿಜೆಪಿ ಅವಧಿಯ ಕೋವಿಡ್‌ ಭ್ರಷ್ಟಾಚಾರ; ಬಿಬಿಎಂಪಿ, ಮೂರು ಜಿಲ್ಲೆಗಳ ಡಿಸಿಗಳ ವಿರುದ್ಧ ಕ್ರಮಕ್ಕೆ ಶಿಫಾರಸ್ಸು

Leave a Reply

Your email address will not be published. Required fields are marked *