BBMP
Loading ...

DK Shivakumar

ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಕಾರ್ಯಕರ್ತರು ಸಜ್ಜಾಗಿ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಈ ಸಂಬಂಧ ಮಾತನಾಡಿದ ಅವರು , ಯಾವುದೇ ಕ್ಷಣದಲ್ಲಾದರೂ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಬಹುದು. ಹೀಗಾಗಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಸಜ್ಜಾಗಬೇಕು.

ಈ ವೇಳೆ, ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ವಿಚಾರವಾಗಿ ನ್ಯಾಯಾಲಯದಿಂದ ಸಧ್ಯದಲ್ಲೇ ಸೂಚನೆ ಬರುವ ಸಾಧ್ಯತೆ ಇದೆ. ಇನ್ನೂ ಬೆಂಗಳೂರು ನಗರ ಪಾಲಿಕೆ ಚುನಾವಣೆಯನ್ನು ನಡೆಸಬೇಕಾಗಿದ್ದು ಗ್ರೇಟರ್ ಬೆಂಗಳೂರು ವಿಚಾರವಾಗಿ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದೇವೆ. ಯಾವುದೇ ಕ್ಷಣದಲ್ಲಿ ಈ ಚುನಾವಣೆಗಳು ಘೋಷಣೆಯಾಗಬಹುದು. ಇದಕ್ಕೆ ನಾವೆಲ್ಲರೂ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ

ಚುನಾವಣೆಗಳ ಸಿದ್ಧತೆಗಾಗಿ ಕಾರ್ಯಾಧ್ಯಕ್ಷರ ನೇತೃತ್ವದಲ್ಲಿ ಉಪಾಧ್ಯಕ್ಷರುಗಳನ್ನು ಸೇರಿಸಿಕೊಂಡು ವಿಭಾಗವಾರು ಸಮಿತಿ ರಚಿಸಲಿದ್ದೇವೆ. ಈ ಸಮಿತಿ ಮಾರ್ಚ್ ಒಳಗಾಗಿ ರಾಜ್ಯ ಪ್ರವಾಸ ಮಾಡಿ ಎಲ್ಲಾ ಕಡೆ ಸಮನ್ವಯತೆ ಸಾಧಿಸಿ ತಯಾರಿ ಮಾಡಿಕೊಳ್ಳಬೇಕು. ನಾಯಕರ ಮಧ್ಯೆ ಹೊಂದಾಣಿಕೆ ಸಾಧಿಸಿ, 50% ಮಹಿಳಾ ಅಭ್ಯರ್ಥಿಗಳನ್ನು ತಯಾರು ಮಾಡುವ ಬಗ್ಗೆ ವರದಿ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.

ಬಿಗ್ ಶಾಕ್: ಬೆಂಗಳೂರಿನಲ್ಲಿ ಎ – ಖಾತಾ ಆಸ್ತಿಗಳಿಗೂ ಸಂಕಷ್ಟ ತಂದಿಟ್ಟ ಬಿಬಿಎಂಪಿ!

Leave a Reply

Your email address will not be published. Required fields are marked *