BBMP
Loading ...

Harish Roy

Greater Bengaluru News9 : ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್​ ರಾಯ್ ಇಂದು (ನ.06) ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಕನ್ನಡ ಸಿನಿಮಾಗಳಾದ ‘ಓಂ’, ‘ಕೆಜಿಎಫ್’​, ‘ಮೆಜೆಸ್ಟಿಕ್’,​ ‘ಜೋಡಿಹಕ್ಕಿ’ ಸೇರಿ ಹಲವಾರು ಸೂಪರ್​ಹಿಟ್​ ಸಿನಿಮಾಗಳಲ್ಲಿ ಖಳನಟನಾಗಿ ನಟಿಸಿದ್ದ ಹರೀಶ್​, ಕೆಲವು ತಿಂಗಳುಗಳಿಂದ ಕ್ಯಾನ್ಸರ್ ಕಾಯಿಲೆಯಿಂದ ತೀವ್ರ ಬಳಲುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.

ಥೈರಾಯ್ಡ್​ ಕ್ಯಾನ್ಸರ್​ನಿಂದ ಬಳಲುತ್ತಿದ್ದ ಹರೀಶ್​ ರಾಯ್​, ಕೆಲವು ತಿಂಗಳುಗಳ ಹಿಂದಷ್ಟೆ ಸ್ಯಾಂಡಲ್​ವುಡ್​ ನಟರ ಬಳಿ ಸಹಾಯಹಸ್ತ ಕೇಳಿದ್ದರು. ಅವರ ಮನವಿಗೆ ಸ್ಟಾರ್​ ಕಲಾವಿದರು ಸ್ಪಂದಿಸಿ, ಚಿಕಿತ್ಸೆಗೆ ಹಣ ನೀಡಿದ್ದರು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೆ ಅವರು ವಿಧಿವಶರಾಗಿದ್ದಾರೆ.

ಕನ್ನಡ, ತಮಿಳು ಸೇರಿ ಇತರೆ ಚಿತ್ರರಂಗದಲ್ಲಿಯೂ ಗುರುತಿಸಿಕೊಂಡಿದ್ದ ಹರೀಶ್​ ರಾಯ್​ ಇನ್ನಿಲ್ಲ ಎಂಬ ಸುದ್ದಿ ತಿಳಿದ ಕುಟುಂಬಸ್ಥರು, ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಹರೀಶ್​ ಅಗಲಿದ್ದಾರೆ.

Leave a Reply

Your email address will not be published. Required fields are marked *