BBMP
Loading ...

ಬೆಂಗಳೂರು : ದೀಪಾವಳಿಗೂ ಮುನ್ನ ಜನಸಾಮಾನ್ಯರಿಗೆ ಮತ್ತೊಂದು ಶಾಕ್. ಹಬ್ಬ ಹರಿದಿನಗಳಲ್ಲಿ ದಿನಸಿ, ತರಕಾರಿ ಬೆಲೆಯಲ್ಲಿ ಭಾರಿ ಏರಿಕೆಯಾಗಿದೆ. ಒಂದು ತಿಂಗಳಲ್ಲಿ ಆಹಾರ ಪದಾರ್ಥಗಳ ಬೆಲೆಯಲ್ಲಿ ಅಭೂತಪೂರ್ವ ಏರಿಕೆ ಕಂಡು ಬಂದಿದೆ. ಇದೀಗ ತರಕಾರಿ ಬೆಲೆ ಗಗನಕ್ಕೇರಿದ್ದು, ದಿನಸಿ ವಸ್ತುಗಳ ಬೆಲೆಯೂ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಇದರಿಂದ ಜನಸಾಮಾನ್ಯರು ಪರದಾಡುವಂತಾಗಿದೆ.

ಅಡುಗೆ ಎಣ್ಣೆ ಬೆಲೆಯಲ್ಲಿ ಭಾರೀ ಏರಿಕೆ

ತೈಲ ಮತ್ತು ದಿನಸಿಗಳ ಬೆಲೆಗಳು 30% ರಷ್ಟು ಜಿಗಿದಿವೆ, ಈ ವರ್ಷ ಹಣದುಬ್ಬರ ದರವು ಹಿಂದೆಂದೂ ಕಂಡಿಲ್ಲ. ತಿಂಗಳ ಹಿಂದೆ ಲೀಟರ್‌ಗೆ 130 ರೂ.ಗೆ ಸಿಗುತ್ತಿದ್ದ ಖಾದ್ಯ ತೈಲ ಈಗ 150-160 ರೂ.ಗೆ ತಲುಪಿದೆ. ಈ ಹೆಚ್ಚಳವು ಸುಮಾರು 30% ಆಗಿದೆ, ಇದು ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಅಡಿಗೆ ಬಜೆಟ್ ಅನ್ನು ಕೆಟ್ಟದಾಗಿ ಪರಿಣಾಮ ಬೀರಿದೆ. ಕಚ್ಚಾ ತೈಲ ಮತ್ತು ಸಂಸ್ಕರಿಸಿದ ತೈಲದ ಮೇಲಿನ ಕಸ್ಟಮ್ಸ್ ಸುಂಕವನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಖಾದ್ಯ ತೈಲದ ಬೆಲೆಗಳು ಲೀಟರ್‌ಗೆ 25-35 ರೂ ಮತ್ತು ಸಾಸಿವೆ ಎಣ್ಣೆಯ ಬೆಲೆಗಳು ಲೀಟರ್‌ಗೆ 30-40 ರೂ. ಈ ನಿರ್ಧಾರವು ದೇಶದ ರೈತರಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ಸರ್ಕಾರ ಭಾವಿಸುತ್ತದೆ, ಆದರೆ ಇದು ಸಾಮಾನ್ಯ ಜನರ ಅಡಿಗೆ ಬಜೆಟ್ ಮೇಲೆ ನೇರ ಪರಿಣಾಮ ಬೀರುತ್ತದೆ.

ಈರುಳ್ಳಿ ಬೆಲೆ ಏರಿಕೆ
ರಾಜ್ಯದಲ್ಲಿ ಒಂದು ವಾರದಲ್ಲಿ ಸುರಿದ ಮಳೆಗೆ ಈರುಳ್ಳಿ ಫಸಲು ಹಾನಿಗೀಡಾಗಿದೆ. ಇದರಿಂದ ಗುಣಮಟ್ಟದ ಈರುಳ್ಳಿಯ ಚಿಲ್ಲರೆ ದರವು ಕೆ.ಜಿಗೆ 70 ರೂ.ಗೆ ಮುಟ್ಟಿದೆ. ಸದ್ಯ ಬೆಂಗಳೂರಿನಲ್ಲಿ’ಎ’ ಗ್ರೇಡ್‌ ಈರುಳ್ಳಿಯ ಸಗಟು ದರ ಕ್ವಿಂಟಲ್‌ಗೆ 4500 ರೂ. ಇದೆ. ಮಹಾರಾಷ್ಟ್ರದಿಂದ ಪೂರೈಕೆಯಾಗುವ ಈರುಳ್ಳಿಯ ಸಗಟು ಬೆಲೆ ಕ್ವಿಂಟಲ್‌ಗೆ 5000ದಿಂದ 5200 ರೂ. ಇದೆ. ‘ಮಳೆಯಿಂದಾಗಿ ಪೂರೈಕೆ ಕಡಿಮೆಯಾಗಿದೆ. ಇದೇ ಬೆಲೆ ಏರಿಕೆಗೆ ಕಾರಣ. ಬೆಂ

ಟೊಮೆಟೊ ಬೆಲೆಯಲ್ಲಿ ಏರಿಕೆ
ಚಿಲ್ಲರೆ ಮಾರುಕಟ್ಟೆಯಲ್ಲಿ ಗುಣಮಟ್ಟದ ಕೆ.ಜಿ ಟೊಮೆಟೊ ಧಾರಣೆಯು 80ರೂ.ಗೆ ಏರಿಕೆಯಾಗಿದೆ. ರಾಜ್ಯದಲ್ಲಿಯೇ ಅತಿಹೆಚ್ಚು ಪ್ರಮಾಣದಲ್ಲಿ ಟೊಮೆಟೊ ಬೆಳೆಯುವ ಕೋಲಾರ ಜಿಲ್ಲೆಯಲ್ಲಿ ಮಳೆಯಿಂದಾಗಿ ಈ ಬಾರಿ ನಾಟಿ ಮಾಡಿದ್ದ ಫಸಲಿನ ಪೈಕಿ ಶೇ 50ರಷ್ಟು ಹಾನಿಗೀಡಾಗಿದೆ. ಹೀಗಾಗಿ ಟೊಮೆಟೊ ಬೆಲೆಗೆ ಏರಿಕೆಗೆ ಕಾರಣ ಎನ್ನಲಾಗಿದೆ.

ಬೆಳ್ಳುಳ್ಳಿ ಬೆಲೆ ಏರಿಕೆ

ದೇಶದ ಒಟ್ಟು ಬೆಳ್ಳುಳ್ಳಿ ಉತ್ಪಾದನೆಯಲ್ಲಿ ಮಧ್ಯಪ್ರದೇಶ ಶೇಕಡ 70ರಷ್ಟು ಪಾಲು ಹೊಂದಿದೆ. ಮಧ್ಯಪ್ರದೇಶದಿಂದ ಆವಕ ಇಳಿಕೆಯಾಗಿರುವುದರಿಂದ ಬೆಳ್ಳುಳ್ಳಿ ಬೆಲೆ 400 ರ ಗಡಿ ದಾಟಿದೆ. ರಾಜ್ಯದಲ್ಲಿ ಮಳೆಯಿಂದ ಬೆಳ್ಳುಳ್ಳಿ ಬೆಳೆ ಹಾಳಾಗಿದ್ದು, ಬೆಲೆ ಏರಿಕೆಗೆ ಕಾರಣ ಎನ್ನಲಾಗಿದೆ. ನವೆಂಬರ್ ವೇಳೆಗೆ ಬೆಳ್ಳುಳ್ಳಿ ದರ ಮತ್ತಷ್ಟು ಏರಿಕೆಯಾಗಲಿದ್ದು, ಗ್ರಾಹಕರಿಗೆ ಹೊರೆಯಾಗಿ ಪರಿಣಮಿಸಲಿದೆ. ಕಳೆದ ಫೆಬ್ರವರಿಯಲ್ಲಿ ಬೆಳ್ಳುಳ್ಳಿ ದರ 500 ರೂ. ಸಮೀಪಿಸಿತ್ತು. ಈಗ ಚಿಲ್ಲರೆ ಮಾರುಕಟ್ಟೆಯಲ್ಲಿ ಉತ್ತಮ ದರ್ಜೆಯ ಬೆಳ್ಳುಳ್ಳಿ ದರ 360 ರಿಂದ 370 ರೂ.ಗೆ ಮಾರಾಟವಾಗುತ್ತಿದೆ. ಕೆಲವು ಕಡೆ ಕೆಜಿಗೆ 400 ರೂ. ತಲುಪಿದೆ. ಕೇಂದ್ರ ಸರ್ಕಾರ ದೇಶದ ರೈತರ ಹಿತ ದೃಷ್ಟಿಯಿಂದ ಬೆಳ್ಳುಳ್ಳಿ ಮೇಲಿನ ಆಮದು ಸುಂಕವನ್ನು 100ರಷ್ಟು ಹೆಚ್ಚಿಸಿದೆ.

Leave a Reply

Your email address will not be published. Required fields are marked *