BBMP
Loading ...

KSLECA

ಬೆಂಗಳೂರು: ಸ್ವಾಧೀನಾನುಭವ ಪ್ರಮಾಣಪತ್ರ (OC) ವಿನಾಯಿತಿ ಕೋರಿ ಮಾನ್ಯ ಉಪಮುಖ್ಯಮಂತ್ರಿ ಡಿಕೆ ಶಿವಕಮಾರ್ ಅವರ ಬಳಿ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್​ ಗುತ್ತಿಗೆದಾರ ಸಂಘದ ಕೇಂದ್ರ ಸಮಿತಿ ಮತ್ತು ಎಲ್ಲಾ ಸ್ಥಳೀಯ ಸಮಿತಿ ಸದಸ್ಯರ ನಿಯೋಗ ಬೇಟಿ ಮಾಡಿ ಸುದೀರ್ಘವಾಗಿ ಚರ್ಚಿಸಲಾಯಿತು.

ವಿದ್ಯುತ್​ ಗುತ್ತಿಗೆದಾರರು ಎದುರಿಸುತ್ತಿರುವ ಸಮಸ್ಯೆಗಳು, ಸರ್ಕಾರದ ನಿಯಮಗಳಿಂದ ಗುತ್ತಿಗೆದಾರರಿಗೆ ಆಗುತ್ತಿರುವ ಸಮಸ್ಯೆಗಳು ಹಾಗೂ ವಿದ್ಯುತ್​ ಕಾಮಗಾರಿಗಳಲ್ಲಿ ಗುತ್ತಿಗೆದಾರರಿಗೆ ನೀಡಬೇಕಾದ ಆದ್ಯತೆ ಮತ್ತು ಸರ್ಕಾರದಿಂದ ವಿದ್ಯುತ್​ ಗುತ್ತಿಗೆದಾರರಿಗೆ ಸಿಗಬೇಕಿರುವ ಸವಲತ್ತುಗಳ ಬಗ್ಗೆ ಡಿ ಕೆ ಶಿವಕುಮಾರ್​​ ಅವರ ಬಳಿ ವಿವರಿಸಲಾಯಿತು. ವಿದ್ಯುತ್​ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಸಿ. ರಮೇಶ್​ ಅವರು ಎಲ್ಲ ಸಮಸ್ಯೆಗಳನ್ನು ಉಪಮುಖ್ಯಮಂತ್ರಿಗಳಿಗೆ ವಿವರಿಸಿದರು.

ಗುತ್ತಿಗೆದಾರರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಡಿಸಿಎಂ ಡಿಕೆ ಶಿವಕುಮಾರ್​ ಕಾನೂನಾತ್ಮಕವಾಗಿ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ.

ಎಲ್ಲಾ ಇಲಾಖೆಗಳಲ್ಲೂ ಕನ್ನಡ ಬಳಕೆ ಕಡ್ಡಾಯ, ತಪ್ಪಿದರೆ ಶಿಸ್ತು ಕ್ರಮ: ರಾಜ್ಯ ಸರ್ಕಾರ ಆದೇಶ

Leave a Reply

Your email address will not be published. Required fields are marked *