BBMP
Loading ...

Lakshmi Hebbalkar new

ಬೆಂಗಳೂರಿನಿಂದ ಬೆಳಗಾವಿಗೆ ಬರುತ್ತಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಕಾರು ಅಪಘಾತಕ್ಕೀಡಾಗಿ ಸಚಿವೆ ಗಾಯಗೊಂಡಿದ್ದಾರೆ. ಚಾಲಕನ‌ ನಿಯಂತ್ರಣ ತಪ್ಪಿ ಕಾರು ಅಪಘಾತಕ್ಕೀಡಾಗಿದ್ದು, ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದಲ್ಲಿ ಅಪಘಾತ ಸಂಭವಿಸಿದೆ.

ಬೆಳಗಾವಿ ನಗರದ ವಿಜಯ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆ ಗೆ ಬೆಳಗಾವಿ ಎಸ್ಪಿ ಡಾ. ಭೀಮಾಶಂಕರ ಗುಳೇದ್ ಭೇಟಿ ಕೊಟ್ಟು ಆರೋಗ್ಯ ವಿಚಾರಿಸಿದರು.

ಬೆನ್ನಿಗೆ ಗಾಯವಾಗಿದ್ದರಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್‌ ಅವರಿಗೆ ಸಿಟಿ ಸ್ಕ್ಯಾನಿಂಗ್ ಹಾಗೂ ಎಂಆರ್ ಐ ಸ್ಕ್ಯಾನಿಂಗ್ ಮಾಡಿದಾಗ ಎಲ್ 1 ಮತ್ತು ಎಲ್ 4 ಫ್ಯಾಕ್ಚರ್‌ ಆಗಿರುವುದು ಕಂಡುಬಂದಿದೆ. ಒಂದು ತಿಂಗಳು ವಿಶ್ರಾಂತಿ ಪಡೆದರೆ, ಗುಣಮುಖವಾಗಲಿದೆ. ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ವಿಜಯ ಆಸ್ಪತ್ರೆಯ ವೈದ್ಯ ರವಿ ಪಾಟೀಲ ಅವರು ತಿಳಿಸಿದ್ದಾರೆ.

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಆರೋಗ್ಯ ಸ್ಥಿತಿ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ಅವರಿಗೆ ಮಧುಮೇಹ ಕಾಯಿಲೆ‌ ಇರುವುದರಿಂದ ಚಿಕಿತ್ಸೆ ನೀಡಲಾಗುತ್ತಿದ್ದು, ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಅವರ ಸಹೋದರ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರ ಮೆದುಳಿಗೆ ಸ್ಬಲ್ಪ ಬಾವು ಬಂದಿದ್ದು, ಎಂಟು ದಿನ ವಿಶ್ರಾಂತಿ‌ ಪಡೆಯಬೇಕಿದೆ ಎಂದರು.

ಇನ್ನು, ಸಚಿವೆ ಆಸ್ಪತ್ರೆಯಲ್ಲಿ ದಾಖಲಾಗಿರುವ ಮಾಹಿತಿ ತಿಳಿಯುತ್ತಿದ್ದಂತೆಯೇ, ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಸ್ಪತ್ರೆಗೆ ಭೇಟಿ ನೀಡುತ್ತಿದ್ದಾರೆ.

ಗವಿ ಗಂಗಾಧರೇಶ್ವರ ದೇವಾಲಯದಲ್ಲಿ ಇಂದು ಸಂಜೆ ಸೂರ್ಯ ರಶ್ಮಿ ಸ್ಪರ್ಶಿಸುವ ಸಮಯ ವಿವರ ಇಲ್ಲಿದೆ

Leave a Reply

Your email address will not be published. Required fields are marked *