BBMP
Loading ...

Home Minister

ಬೆಂಗಳೂರು: ನಗರದ ಸಂಚಾರ ಡಿಸಿಪಿಗಳ ಕಾರ್ಯವೈಖರಿಗೆ ಗೃಹ ಸಚಿವ ಪರಮೇಶ್ವರ್ ಅವರು ಅಸಮಾಧಾನ ವ್ಯಕ್ತಪಡಿಸಿದ್ದು, ಕಚೇರಿಯ ಕುರ್ಚಿ ಬಿಟ್ಟು, ಹೊರಬಂದು ಬೆಳಿಗ್ಗೆ ಮತ್ತು ಸಂಜೆ ಎರಡು ಗಂಟೆಗಳ ಕಾಲ ರಸ್ತೆಗಳಲ್ಲಿ ಕರ್ತವ್ಯ ನಿರ್ವಹಿಸುವಂತೆ ಸೂಚನೆ ನೀಡಿದ್ದಾರೆ.

ಬೆಂಗಳೂರಿನ ರಾಜ್ಯ ಪೊಲೀಸ್ ಪ್ರಧಾನ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನದಲ್ಲಿ ಮಾತನಾಡಿದ ಅವರು, ಸಂಚಾರ ವಿಭಾಗಕ್ಕೆ ನಿರ್ದಿಷ್ಟ ಡಿಸಿಪಿಗಳನ್ನು ನೇಮಿಸಲಾಗಿದೆ, ಆದರೆ ಅವರು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಈ ಬಗ್ಗೆ ಹೆಚ್ಚಿನ ಗಮನ ಬೇಕು ಎಂದು ಹೇಳಿದರು.

ಸಾಮಾಜಿಕ ಮಾಧ್ಯಮದಲ್ಲಿ ದ್ವೇಷ ಭಾಷಣ ಮತ್ತು ಮಾನಹಾನಿಕರ ವಿಷಯವನ್ನು ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿಲ್ಲ. ಇದರಿಂದಾಗುವ ಅಪಾಯಗಳ ಬಗ್ಗೆ ನಿಮಗೆ ತಿಳಿದಿಲ್ಲವೇ? ಅಂತಹ ಘಟನೆಗಳು ಸಂಭವಿಸಿದಾಗ ನಾವು ಸುಮ್ಮನಿರಬೇಕೇ?” ದ್ವೇಷ ಭಾಷಣವನ್ನು ಹರಡುವ ಮತ್ತು ಹಿಂಸಾಚಾರವನ್ನು ಪ್ರಚೋದಿಸುವವರ ವಿರುದ್ಧ ಕ್ರಮ ಕೈಗೊಳ್ಳಲು ಹೊಸ ಕಾನೂನುಗಳನ್ನು ಪರಿಚಯಿಸಲಾಗುತ್ತಿದೆ. ಈ ಕಾನೂನುಗಳು ಅಂತಹ ಘಟನೆಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ನಿಯಂತ್ರಿಸಲು ಪೊಲೀಸರಿಗೆ ಅಧಿಕಾರ ನೀಡುತ್ತವೆ.

ಅಪರಾಧ ದರದಲ್ಲಿ ದೇಶದಲ್ಲಿ ಕರ್ನಾಟಕ ಪ್ರಸ್ತುತ 15 ನೇ ಸ್ಥಾನದಲ್ಲಿದೆ. ನಾವು 20ನೇ ಸ್ಥಾನಕ್ಕೆ ಏರುವ ಗುರಿಯನ್ನು ಹೊಂದಿರಬೇಕು. ಅಪರಾಧ ಪ್ರಮಾಣ ಕಡಿಮೆಯಾಗಬೇಕು. ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸುಲಭವಾಗಿ ಲಭ್ಯವಾಗುತ್ತಿದೆ. ಕೇವಲ ವ್ಯಾಪಾರಿಗಳನ್ನು ಬಂಧಿಸಿದರೆ ಸಾಕಾಗುವುದಿಲ್ಲ. ಅದರ ಮೂಲವನ್ನು ಪತ್ತೆ ಮಾಡಿ ಕ್ರಮ ಕೈಗೊಳ್ಳಬೇಕು. ಮಾದಕ ದ್ರವ್ಯ ಸೇವನೆಯನ್ನು ಸಂಪೂರ್ಣವಾಗಿ ನಿಯಂತ್ರಿಸದಿದ್ದರೆ, ಭವಿಷ್ಯದಲ್ಲಿ ನಾವು ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಬೆಂಗಳೂರಿನಲ್ಲಿ ಬೈಕ್ ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗಿದ್ದು, ಇದು ಪಿಡುಗಾಗಿ ಮಾರ್ಪಟ್ಟಿದೆ. ಇದನ್ನು ನಿಲ್ಲಿಸುವಂತೆ ಪೊಲೀಸರಿಗೆ ಹೈಕೋರ್ಟ್ ಸೂಚಿಸಬೇಕೇ? ಯುವಕರು ಬೆಳಗಿನ ಜಾವ 3 ಗಂಟೆಗೆ ವ್ಹೀಲಿಂಗ್ ಮಾಡುತ್ತಾರೆ. ಇದನ್ನು ನಿಯಂತ್ರಿಸದಿದ್ದರೆ, ಇದೇ ಗಂಭೀರ ಸಮಸ್ಯೆಯಾಗುತ್ತದೆ ಎಂದು ಹೇಳಿದರು.

ಇದೇ ವೇಳೆ ಕರ್ನಾಟಕದಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ಹೆಚ್ಚಳದ ಬಗ್ಗೆಯೂ ಸಚಿವರು ಕಳವಳ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ವಿದ್ಯುತ್ ಸಂಬಂಧಿತ ಅವಘಡ ತಗ್ಗಿಸಲು ವಿಶೇಷ ಮಾರ್ಗಸೂಚಿ

Leave a Reply

Your email address will not be published. Required fields are marked *