BBMP
Loading ...

ಬೆಂಗಳೂರು: ದೆಹಲಿ ಬೆನ್ನಲ್ಲೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ ವಾಯುಮಾಲಿನ್ಯ ಹದಗೆಟ್ಟು ಹೋಗಿದೆ.

ನಗರದಲ್ಲಿ ಹಲವು ರಸ್ತೆಗಳು ಹದಗೆಟ್ಟ ಪರಿಣಾಮ ವಾಹನಗಳು ಓಡಾಡುವಾಗ ಧೂಳಿನಿಂದ ಜನರ ಓಡಾಟಕ್ಕೆ ಸಂಕಷ್ಟ ಎದುರಾಗಿದ್ದರೆ, ಅತ್ತ ಆರೋಗ್ಯ ಸಮಸ್ಯೆಗಳಿಗೂ ಕಾರಣವಾಗುತ್ತಿದೆ.

ನಗರದ ಹಲವೆಡೆ ಮಾಲಿನ್ಯದ ಪ್ರಮಾಣ ಹೆಚ್ಚಾಗಿದೆ. ಬಸವನಗುಡಿಯ ಎನ್ ಆರ್ ಕಾಲೊನಿ ಮುಖ್ಯ ರಸ್ತೆಯಲ್ಲಂತೂ ವಿಪರೀತ ಧೂಳಿಗೆ ವಾಹನ ಸವಾರರು ನಿತ್ಯ ನರಕ ಅನುಭವಿಸ್ತಿದ್ದಾರೆ.

ಪೈಪ್‌ಲೈನ್ ಕಾಮಗಾರಿಯೊಂದಕ್ಕೆ ರಸ್ತೆ ಅಗೆಯಲಾಗಿತ್ತು. ಕೆಲಸ ಮುಗಿದ ಬಳಿಕ ರಸ್ತೆ ಮಾಡದೇ ಹಾಗೆ ಬಿಟ್ಟ ಪರಿಣಾಮ‌ ಧೂಳು ಬರ್ತಿದೆ. ರಸ್ತೆಯ ಅಕ್ಕಪಕ್ಕದ ವ್ಯಾಪಾರಸ್ಥರು ವ್ಯಾಪಾರಸ್ಥರು ವ್ಯಾಪಾರ ಮಾಡದಂತಹ ಪರಸ್ಥಿತಿ ಇದ್ರೆ. ಬೈಕ್ ನಲ್ಲಿ ಹೋಗುವವರು, ಫುಟ್ ಪಾತ್ ಮೇಲೆ ಓಡಾಡೋರು ಕೂಡ ಸಮಸ್ಯೆ ಅನುಭವಿಸಬೇಕಾಗಿದೆ.

ಇನ್ನೂ ಬೆಂಗಳೂರು ನಗರದಲ್ಲಿ ಚಳಿಯ ವಾತಾವರಣ ಜೊತೆಗೆ ವಾಯು ಮಾಲಿನ್ಯ ಹೆಚ್ಚಾಗಿದೆ.

ಮಹಿಳೆಯರಿಗೆ ಮತ್ತೊಂದು ಸಿಹಿ ಸುದ್ದಿ: ಸರ್ಕಾರದ ಈ ಯೋಜನೆಯಡಿ ಸಿಗಲಿದೆ ಉಚಿತ ಸೋಲಾರ್ ಸ್ಟವ್!

Leave a Reply

Your email address will not be published. Required fields are marked *