BBMP
Loading ...

Siddaramaiah

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕೋಲಾಹಲ ಸೃಷ್ಟಿಸಿರುವ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​ ಅವರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್​​​ ಸೋಮವಾರ(ಆಗಸ್ಟ್​​ 19) ನಡೆಸಿತು.

ರಿಟ್​ ಅರ್ಜಿಯಲ್ಲಿ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವ ರಾಜ್ಯಪಾಲರ ನಿರ್ಧಾರ ರದ್ದುಪಡಿಸುವಂತೆ ಸಿಎಂ ಸಿದ್ದರಾಮಯ್ಯ ಕೋರಿದ್ದರು. ರಾಜ್ಯಪಾಲರ ಆದೇಶಕ್ಕೆ ತಡೆ ಕೋರಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ವಿಚಾರಣೆ ನಡೆಸಿತು. ಪೀಠವು ಮುಂದಿನ ವಿಚಾರಣೆಯನ್ನು ಆಗಸ್ಟ್​​ 29ಕ್ಕೆ ಮುಂದೂಡಿದೆ.

ಮುಂದಿನ ವಿಚಾರಣೆಯ ದಿನಾಂಕದವರೆಗೆ ರಾಜ್ಯಪಾಲರ ಅನುಮತಿಯ ಆಧಾರದ ಮೇಲೆ ಸಿದ್ದರಾಮಯ್ಯ ವಿರುದ್ಧ ಯಾವುದೇ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳದಂತೆ ಹೈಕೋರ್ಟ್​​​ ವಿಚಾರಣಾ ನ್ಯಾಯಾಲಯಕ್ಕೆ ಸೂಚಿಸಿದೆ. ಇಂತಹ ಪ್ರಕರಣಗಳಲ್ಲಿ ರಾಜ್ಯಪಾಲರು ಸಂಪುಟದ ನಿರ್ಧಾರಕ್ಕೆ ಬದ್ಧರಾಗಿರುತ್ತಾರೆ. ಆದರೆ ಯಾವುದೇ ನಿರ್ದಿಷ್ಟ ಕಾರಣಗಳಿಲ್ಲದೆ ರಾಜ್ಯಪಾಲರು ಬಾಕಿ ಇರುವ ಹಲವು ದೂರುಗಳನ್ನು ಹೊರತಪಡಿಸಿ ಪ್ರಸ್ತುತ ಈ ದೂರನ್ನು ಆಯ್ಕೆ ಮಾಡಿದ್ದಾರೆ. ಅಲ್ಲದೆ ಪ್ರಕರಣದ ಮಹತ್ವ ಪರಿಗಣಿಸಿದೆ ಎರಡು ಪುಟಗಳ ಆದೇಶದಲ್ಲಿ ಅನುಮತಿ ನೀಡಿದ್ದಾರೆ ಎಂದು ಸಿಎಂ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಪೀಠಕ್ಕೆ ತಿಳಿಸಿದರು.

ರಾಜ್ಯಪಾಲರು ಸಂಪುಟದ ಸಲಹೆಯ ಮೇರೆಗೆ ಕಾರ್ಯನಿರ್ವಹಿಸಲು ಬದ್ಧರಾಗಿದ್ದರೂ, ಮುಖ್ಯಮಂತ್ರಿಯ ಅಥವಾ ರಾಜ್ಯಪಾಲರು ಸ್ವತಃ ಅನುಮತಿ ನೀಡಬೇಕಾದ ಸಮಯದಲ್ಲಿ ವಿನಾಯಿತಿ ನೀಡಬಹುದು. ಸಾಂವಿಧಾನಿಕವಾಗಿ ಕಾರ್ಯನಿರ್ವಹಿಸುತ್ತಿರುವುದರಿಂದ ದಾಖಲೆ ಮೂಲಕ ಆದೇಶವನ್ನು ರವಾನಿಸಲಾಗಿದೆ ಎಂದು ರಾಜ್ಯಪಾಲರ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ನ್ಯಾಯಾಲಯಕ್ಕೆ ತಿಳಿಸಿದರು.

ವಾದ ಆಲಿಸಿದ ನ್ಯಾಯಾಲಯವು, ವಿಚಾರಣೆಯೂ ಹೈಕೋರ್ಟ್​ನಲ್ಲಿ ನಡೆಯುತ್ತಿರುವುದರಿಂದ ವಿಶೇಷ ನ್ಯಾಯಾಲಯವು ಯಾವುದೇ ಆದೇಶವನ್ನು ನೀಡುವಂತಿಲ್ಲ ಎಂದು ಸೂಚಿಸಿದೆ.

ಏನಿದು ಮುಡಾ ಅಕ್ರಮ ಪ್ರಕರಣ: ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ 50-50 ಅನುಪಾತದಲ್ಲಿ 14 ಮುಡಾ ಸೈಟ್‌ಗಳನ್ನ ಹಂಚಿಕೆ ಮಾಡಲಾಗಿದೆ ಅನ್ನೋ ವಿಚಾರ ವಿವಾದಕ್ಕೆ ಕಾರಣವಾಗಿತ್ತು. ಆರ್.ಟಿ.ಐ ಕಾರ್ಯಕರ್ತ ಗಂಗರಾಜು ಎಂಬುವವರು ಇದರಲ್ಲಿ ಅಕ್ರಮ ಮಂಜೂರಾತಿ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಸಿಎಂ ಪತ್ನಿಗೆ 14 ನಿವೇಶನ ಮಂಜೂರಾದ ದಾಖಲೆಗಳನ್ನು ಬಿಡುಗಡೆ ಮಾಡಿದ್ದರು. ದಾಖಲೆಗಳ ಜತೆ ಆರೋಪಿಸಿರುವ ಆರ್.ಟಿ.ಐ ಕಾರ್ಯಕರ್ತ ಗಂಗರಾಜು ಅವರು, ಸಿಎಂ ಸಿದ್ದರಾಮಯ್ಯ ಅವರ ಪತ್ನಿಗೆ ಬದಲಿ ನಿವೇಶನ ನೀಡಿ ಲಾಭ ಮಾಡಿಕೊಟ್ಟಿರುವುದು ನಿಜ. ಮೈಸೂರಿನ ಕೆಸರೆ ಸರ್ವೇ ನಂಬರ್ 464 ವ್ಯಾಪ್ತಿಯಲ್ಲಿ 3.16 ಗಂಟೆ ಜಾಮೀನು ಸ್ವಾಧೀನ ಮಾಡಿಕೊಂಡಿದ್ದಾರೆ. ಇದಕ್ಕೆ ಪರ್ಯಾಯವಾಗಿ ವಿಜಯನಗರದ ಬಡಾವಣೆಯಲ್ಲಿ 14 ನಿವೇಶನವನ್ನು ಸಿಎಂ ಪತ್ನಿಯ ಹೆಸರಿಗೆ ನೀಡಿದ್ದಾರೆ ಎಂದು ಆರೋಪಿಸಿದ್ದರು.

ನಿವೇಶನ ಖರೀದಿಸಿದವರಿಗೆ ಶಾಕ್: 3 ವರ್ಷದೊಳಗೆ ಬಿಡಿಎ ಸೈಟ್ ನಲ್ಲಿ ಮನೆ ನಿರ್ಮಿಸದಿದ್ದರೆ ಶೇ. 25ರಷ್ಟು ದಂಡ

Leave a Reply

Your email address will not be published. Required fields are marked *