BBMP
Loading ...

BESCOM

Greater Bengaluru News9 : ಕೆಪಿಟಿಸಿಎಲ್ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಭಾನುವಾರ (ಸೆಪ್ಟೆಂಬರ್ 28) ವಿದ್ಯುತ್ ವ್ಯತ್ಯಯವಾಗಲಿದೆ. ಆ ದಿನ ಬೆಳಿಗ್ಗೆಯಿಂದ ಸಂಜೆ ತನಕ ನಿಗದಿ ಬಡಾವಣೆಗಳಲ್ಲಿ ಕರೆಂಟ್‌ ಇರುವುದಿಲ್ಲ.

66/11 ಕೆವಿ ವಿಜಯನಗರ ವಿದ್ಯುತ್ ಕೇಂದ್ರ, 220/66/11 ಕೆವಿ ಎಸ್ಆರ್‌ಎಸ್‌ ಪೀಣ್ಯ ಉಪಕೇಂದ್ರ ವ್ಯಾಪ್ತಿಯಲ್ಲಿ ಕಾಮಗಾರಿ ನಡೆಯುತ್ತಿದೆ. ಭಾನುವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ಸಮಸ್ಯೆಯಾಗಲಿದೆ.

ವಿದ್ಯುತ್‌ ಕಡಿತ ಎಲ್ಲೆಲ್ಲಿ?
ಬಸವೇಶ್ವರನಗರ, ವಿಜಯನಗರ, ಗೋವಿಂದರಾಜನಗರ, ಕಾಮಾಕ್ಷಿಪಾಳ್ಯ, ಆರ್.ಪಿ.ಸಿ.ಲೇಔಟ್, ಪ್ರಶಾಂತನಗರ, ಎಂ.ಸಿ.ಲೇಔಟ್, ಮಾರೇನಹಳ್ಳಿ, ಹೊಸಹಳ್ಳಿ, ತಿಮ್ಮೇನಹಳ್ಳಿ, ವಿನಾಯಕ ಲೇಔಟ್, ಕಾವೇರಿಪುರ, ರಂಗನಾಥಪುರ, ಸಿಂಡಿಕೇಟ್ ಬ್ಯಾಂಕ್ ಕಾಲೋನಿ, ನಾಗರಬಾವಿ, ಸಿದ್ದಯ್ಯ ಪುರಾಣಿಕ್ ರೋಡ್, ಕೆ.ಎಚ್.ಬಿ.ಕಾಲೋನಿ, ಮಾಗಡಿ ಮೈನೆ ರೋಡ್, ಎಚ್.ಜಿ.ಆರ್. ಲೇಔಟ್, ಅಗ್ರಹಾರ ದಾಸರಹಳ್ಳಿ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು.

ಪೀಣ್ಯ ಸುತ್ತಮುತ್ತ ವಿದ್ಯುತ್‌ ಕಡಿತ
ಪೀಣ್ಯ 10ನೇ ಮುಖ್ಯರಸ್ತೆ, 11ನೇ ಮುಖ್ಯರಸ್ತೆ, ಉಡುಪಿ ಹೋಟೆಲ್ ಸುತ್ತಮುತ್ತ, ಐಆರ್ ಪಾಲಿಟೆಕ್ನಿಕ್ ರಸ್ತೆ, ಲಕ್ಷ್ಮೀದೇವಿ ನಗರ. ಲಗ್ಗೆರೆ ಹಳೆ ಗ್ರಾಮ, ಲವ ಕುಶಾ ನಗರ, ರಾಗೀವ್ ಗಾಂಧಿ ನಗರ, ಚೌಡೇಶ್ವರಿ ನಗರ 6ನೇ, 7ನೇ, 8ನೇ, 9ನೇ ಕ್ರಾಸ್, 1ನೇ ಹಂತ ಪಿಐಎ 7ನೇ ಕ್ರಾಸ್, 1ನೇ ಹಂತ ಪಿಯುಎ, ಟಿವಿಎಸ್ ಕ್ರಾಸ್ ರಸ್ತೆ ಬಳಿ, ಇಸ್ರೋ 1ನೇ, 2ನೇ ಕ್ರಾಸ್, 1ನೇ ಹಂತದ ಪಿಐಎ ಏರಿಯಾ ಮತ್ತು ಯಶ್ವತ್ಥಪುರ ಸುತ್ತಮುತ್ತಲಿನ ಪ್ರದೇಶ.

ಸಮೀಕ್ಷೆಯಿಂದ ವಿದ್ಯುತ್‌ ಬಿಲ್‌ ವ್ಯತ್ಯಯವಾಗಲ್ಲ: ಬೆಸ್ಕಾಂ ಸ್ಪಷ್ಟನೆ
ಸಮೀಕ್ಷೆಗೆ ಬೆಸ್ಕಾಂನ ಮೀಟರ್‌ ರೀಡರ್‌ಗಳನ್ನು ನಿಯೋಜಿಸಿರುವುದರಿಂದ ಗೃಹ ಜ್ಯೋತಿ ಯೋಜನೆಯ ಕೆಲ ಗ್ರಾಹಕರ ಬಿಲ್‌ನಲ್ಲಿಆಗಿರುವ ವ್ಯತ್ಯಯವನ್ನು ಸರಿಪಡಿಸಿ ಪರಿಷ್ಕೃತ ಬಿಲ್‌ ವಿತರಿಸಲಾಗುವುದು ಎಂದು ಬೆಸ್ಕಾಂ ಸ್ಪಷ್ಟಪಡಿಸಿದೆ. ಮೀಟರ್‌ ರೀಡರ್‌ಗಳು ಸೆಪ್ಟೆಂಬರ್‌ ತಿಂಗಳಲ್ಲಿ ಸಮೀಕ್ಷೆಯ ಭಾಗವಾಗಿ ಮನೆಗಳನ್ನು ಪಟ್ಟಿ ಮಾಡುವ ಕಾರ್ಯ ಹಾಗೂ ಮೀಟರ್‌ ರೀಡಿಂಗ್‌ ಕಾರ್ಯವನ್ನು ಪ್ರೋಬ್‌ಗಳ ಮೂಲಕ ಮೊದಲ ಬಾರಿಗೆ ನಡೆಸುತ್ತಿರುವುದರಿಂದ ವಿದ್ಯುತ್‌ ಬಿಲ್‌ ವಿತರಣೆಯ ದಿನಾಂಕವನ್ನು ಸೆ.15 ರಿಂದ ಸೆ.25ರವರೆಗೆ ವಿಸ್ತರಿಸಲಾಗಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *