BBMP
Loading ...

Police Bribe

ಲಂಚಕ್ಕೆ ಬೇಡಿಕೆ, ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ, ಅವ್ಯವಹಾರ ಮತ್ತಿತರ ಭ್ರಷ್ಟಾಚಾರ ಪ್ರಕರಣಗಳಲ್ಲಿ ಸಿಕ್ಕಿಬೀಳುವ ಸರ್ಕಾರಿ ಅಧಿಕಾರಿಗಳು, ನೌಕರರ ಕೊರಳಿಗೆ ಇನ್ನು ಮುಂದೆ ಕಾನೂನಿನ ಕುಣಿಕೆ ಬಿಗಿಯಾಗಲಿದೆ. ಸುಪ್ರೀಂಕೋರ್ಟ್ ತೀರ್ಪು ಹಾಗೂ ಭ್ರಷ್ಟಾಚಾರ ತಡೆ ಅಧಿನಿಯಮ ತಿದ್ದುಪಡಿ ಕಾಯ್ದೆಯನ್ವಯ ಪ್ರಸ್ತಾವನೆ ಸಲ್ಲಿಕೆಯಾದ 3 ತಿಂಗಳ ಒಳಗೆ ಆರೋಪಿಗಳ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ಕೊಡುವಂತೆ ಸಕ್ಷಮ ಪ್ರಾಧಿಕಾರಗಳಿಗೆ ರಾಜ್ಯ ಸರ್ಕಾರ ಆದೇಶಿಸಿದೆ. ಇದಲ್ಲದೆ ಪ್ರಾಸಿಕ್ಯೂಷನ್​ಗೆ ಅನುಮತಿ ಕೇಳುವಾಗ ಅಗತ್ಯ ದಾಖಲಾತಿಗಳ ಸಂಗ್ರಹಿಸಲು ತನಿಖಾ ಸಂಸ್ಥೆಗಳಿಗೂ ಸೂಚಿಸಿರುವುದು ಸದ್ಯದ ಮಹತ್ವದ ಬೆಳವಣಿಗೆ.

ಲೋಕಾಯುಕ್ತ, ಆದಾಯ ತೆರಿಗೆ ಇಲಾಖೆ, ಸಿಬಿಐ, ಇಡಿ, ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ಭ್ರಷ್ಟ ಅಧಿಕಾರಿಗಳು, ಜನಪ್ರತಿನಿಧಿಗಳ ವಿರುದ್ಧ ದಾಖಲಾಗಿರುವ ಸಾವಿರಾರು ಪ್ರಕರಣಗಳಿಗೆ ಹಲವಾರು ವರ್ಷಗಳಿಂದ ಪ್ರಾಸಿಕ್ಯೂಷನ್​ಗೆ ಅನುಮತಿ ಸಿಕ್ಕಿಲ್ಲ.

ಹೀಗಾಗಿ ಭ್ರಷ್ಟರ ವಿರುದ್ಧ ತನಿಖೆ ಮುಂದುವರಿಸಲು ಗ್ರೀನ್​ಸಿಗ್ನಲ್ ಸಿಗದೆ ಪ್ರಮುಖ ಕೇಸ್​ಗಳು ಹಳ್ಳ ಹಿಡಿಯುತ್ತಿವೆ. ಲೋಕಾಯುಕ್ತ ಸಂಸ್ಥೆಯೊಂದರಲ್ಲೇ ದಾಖಲಾಗಿರುವ 1000ಕ್ಕೂ ಅಧಿಕ ಪ್ರಕರಣಗಳಿಗೆ ಅಭಿಯೋಜನೆಗೆ ಮಂಜೂರಾತಿ ಸಿಕ್ಕಿಲ್ಲ. ಪ್ರಾಸಿಕ್ಯೂಷನ್ ಅನುಮತಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಭ್ರಷ್ಟಾಚಾರ ತಡೆ ಅಧಿನಿಯಮ ಕಾಯ್ದೆ 1988 (ತಿದ್ದುಪಡಿ ಕಾಯ್ದೆ 2018) ಸೆಕ್ಷನ್ 19ರ ಅನ್ವಯ ಕೇಂದ್ರ ರೂಪಿಸಿರುವ ಕ್ರೂಢೀಕೃತ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಕೇಂದ್ರ ರವಾನಿಸಿರುವ ಲಿಖಿತ ಸೂಚನೆ ಮೇರೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ಪ್ರಾಸಿಕ್ಯೂಷನ್​ಗೆ ಅನುಮತಿ ಕೊಡುವ ಅಧಿಕಾರ ಹೊಂದಿರುವ ಎಲ್ಲ ಸಕ್ಷಮ ಪ್ರಾಧಿಕಾರಗಳು ಹಾಗೂ ಅನುಮತಿ ಕೇಳುವ ತನಿಖಾ ಏಜೆನ್ಸಿಗಳಿಗೆ ಆದೇಶ ಹೊರಡಿಸಿದೆ.

ಸರ್ಕಾರಿ ನೌಕರರ ವಿರುದ್ಧ ಮೊಕದ್ದಮೆ ಹೂಡುವುದಕ್ಕೆ ಅನುಮತಿ ನೀಡುವ ಮುನ್ನ ಸಕ್ಷಮ ಪ್ರಾಧಿಕಾರಗಳು ತಮ್ಮ ಮುಂದೆ ಮಂಡಿಸಲಾದ ದಾಖಲೆ ಪರಿಶೀಲಿಸಬೇಕು. ನೌಕರನ ವಿರುದ್ಧ ಪ್ರಕರಣ ದಾಖಲಿಸಲು ಮೇಲ್ನೋಟಕ್ಕೆ ಸಾಕಷ್ಟು ಆಧಾರಗಳಿರುವುದು ಕಂಡುಬಂದರೆ ಅನುಮತಿ ನೀಡುವ ಬಗ್ಗೆ ತೀರ್ವನಿಸಬೇಕು. ವಿನೀತ್ ನಾರಾಯಣ್ ಮತ್ತು ಇತರರ ವಿರುದ್ಧ ಯೂನಿಯನ್ ಆಫ್ ಇಂಡಿಯಾ ಮತ್ತು ಇತರ ಪ್ರಕರಣಗಳಲ್ಲಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಪಾಲಿಸುವಂತೆ ಹೇಳಿದೆ. ಸುಪ್ರೀಂ ತೀರ್ಪಿನ ಪ್ರಕಾರ ಕಾಲಮಿತಿಯೊಳಗೆ ಅಂದರೆ 3 ತಿಂಗಳಲ್ಲಿ ಹಾಗೂ ಯಾವುದೇ ಕಾನೂನು ಅಧಿಕಾರಿಗಳನ್ನು ಸಂರ್ಪಸಬೇಕಿದ್ದಲ್ಲಿ ಮಾತ್ರ ಮತ್ತೊಂದು ತಿಂಗಳ ಅವಧಿಯಲ್ಲಿ ಅಭಿಯೋಜನಾ ಮಂಜೂರಾತಿ ನೀಡುವ ಬಗ್ಗೆ ಅಂತಿಮ ನಿರ್ಣಯ ತೆಗೆದುಕೊಳ್ಳಬೇಕು ಎಂದು ಸೂಚಿಸಲಾಗಿದೆ.

ಸರ್ಕಾರದ ಸೂಚನೆಯಂತೆ ಪ್ರಾಸಿಕ್ಯೂಷನ್​ಗೆ ಅನುಮತಿ ಕೋರಿ ಪ್ರಸ್ತಾವನೆ ಸಲ್ಲಿಸುವಾಗ ಹಾಗೂ ಪ್ರಾಸಿಕ್ಯೂಷನ್​ಗೆ ಅನುಮತಿ ಕೊಡುವ ಅಧಿಕಾರ ಹೊಂದಿರುವ ಸಕ್ಷಮ ಪ್ರಾಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ನು ಪಾಲನೆ ಮಾಡುವಂತೆ ಪೊಲೀಸ್ ಇಲಾಖೆಯ ಎಲ್ಲ ಘಟಕಾಧಿಕಾರಿಗಳಿಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಅಲೋಕ್ ಮೋಹನ್ ಫೆ.10 (ಸೋಮವಾರ) ಲಿಖಿತ ಸೂಚನೆ ನೀಡಿದ್ದಾರೆ.

ಆಯಾ ಇಲಾಖೆ ಮುಖ್ಯಸ್ಥರು ಸಕ್ಷಮ ಪ್ರಾಧಿಕಾರಿಗಳಾಗಿರುತ್ತಾರೆ. ಪ್ರಾಸಿಕ್ಯೂಷನ್​ಗೆ ಅನುಮತಿ ಕೋರಿ ತನಿಖಾ ಸಂಸ್ಥೆಗಳು ಪ್ರಸ್ತಾವನೆ ಸಲ್ಲಿಸಿದಾಗ ಇಲಾಖಾ ಮುಖ್ಯಸ್ಥರು ಪರಿಶೀಲಿಸಿ ನಂತರ ಸರ್ಕಾರದ ಗಮನಕ್ಕೆ ತಂದು ಅನುಮತಿ ನೀಡಬೇಕಾಗುತ್ತದೆ. ಗ್ರೂಪ್ ಎ ಮತ್ತು ಬಿ ವರ್ಗದ ಅಧಿಕಾರಿ ಮತ್ತು ಸಿಬ್ಬಂದಿ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ಕೊಡುವ ಅಧಿಕಾರ ಮುಖ್ಯಮಂತ್ರಿಗಳಿಗೆ ಇರುತ್ತದೆ. ಗ್ರೂಪ್ ಸಿ ಮತ್ತು ಡಿ ನೌಕರರ ವಿರುದ್ಧದ ಪ್ರಾಸಿಕ್ಯೂಷನ್ ಅನುಮತಿ ಸಚಿವರಿಗೆ ಇರುತ್ತದೆ. ಮುಖ್ಯಮಂತ್ರಿಗಳ ವಿರುದ್ಧವೇ ಆರೋಪ ಕೇಳಿಬಂದಾಗ ರಾಜ್ಯಪಾಲರಿಗೆ ಪ್ರಾಸಿಕ್ಯೂಷನ್ ಕೊಡುವ ಅಧಿಕಾರ ಇರುತ್ತದೆ ಎಂದು ಹಿರಿಯ ಪೊಲೀಸ್

ಯಾವ್ಯಾವ ಕೇಸಲ್ಲಿ ಪ್ರಾಸಿಕ್ಯೂಷನ್?
* ಭ್ರಷ್ಟಾಚಾರ, ಅಧಿಕಾರ ದುರ್ಬಳಕೆ, ಸಾರ್ವಜನಿಕ ಹಣ ದುರ್ಬಳಕೆ
* ಕ್ರಿಮಿನಲ್ ಕೇಸ್, ವಂಚನೆ, ಫೋರ್ಜರಿ, ಹಿಂಸಾಚಾರ ಕೃತ್ಯವೆಸಗಿದಲ್ಲ
* ಅಕ್ರಮ ಹಣಕಾಸು ವರ್ಗಾವಣೆ, ಬೇನಾಮಿ ಹೆಸರಲ್ಲಿ ಆಸ್ತಿ ಮಾಡುವುದು

ಜನಾಕ್ರೋಶ ಹಿನ್ನೆಲೆ ಪ್ರಯಾಣ ದರ ಸರಿಪಡಿಸಿದ ಮೆಟ್ರೋ: ಎಲ್ಲಿಂದ ಎಲ್ಲಿಗೆ ಎಷ್ಟು ಕಡಿಮೆಯಾಯ್ತು? ಇಲ್ಲಿದೆ ವಿವರ

Leave a Reply

Your email address will not be published. Required fields are marked *