Greater Bengaluru News9 : ವಿದ್ಯುತ್ ಟ್ರಾನ್ಸ್ಫಾರ್ಮರ್ ಬದಲಾವಣೆ ಮಾಡಿಕೊಡುವುದಾಗಿ ಹೇಳಿ, ಬೆಟ್ಟಸೋಗೆ ಗ್ರಾಮದ ಬಿ.ಪಿ. ಗಿರೀಶ್ ಅವರಿಂದ ಒಟ್ಟು 6 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಜ.9 ರಂದು ಮೊದಲ ಕಂತಾಗಿ 3,500 ರೂಪಾಯಿ ಅನ್ನು ಫೋನ್ಪೇ ಮೂಲಕ ಪಡೆದಿದ್ದರು.
ಉಳಿದ 2,500 ರೂ. ಅನ್ನು ಮಂಗಳವಾರ ಫೋನ್ಪೇ ಮೂಲಕ ಪಡೆಯುವ ಸಂದರ್ಭದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಶ್ರೀಧರ್ ಅವರನ್ನು ವಶಕ್ಕೆ ಪಡೆದಿದ್ದಾರೆ. ಮೊಬೈಲ್ ಫೋನ್ ವಶಪಡಿಸಿಕೊಂಡು ವಿಚಾರಣೆ ನಡೆಸಲಾಗುತ್ತಿದೆ.
ಲೋಕಾಯುಕ್ತ ಇನ್ಸ್ಪೆಕ್ಟರ್ಗಳಾದ ಶಿಲ್ಪಾ ಹಾಗೂ ಚಂದ್ರಶೇಖರ್ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.


