BBMP
Loading ...

KSDL

ಮೈಸೂರು ಸ್ಯಾಂಡಲ್​ ಸೋಪ್​ ಫ್ಯಾಕ್ಟರಿಯ ಟೆಂಡರ್​ ಅಕ್ರಮಕ್ಕಾಗಿ ಬಹುಕೋಟಿ ಲಂಚ ವಸೂಲಿ ಪ್ರಕರಣ ದೇಶವ್ಯಾಪಿ ಸುದ್ದಿಯಾಗಿದ್ದ ಬೆನ್ನಲ್ಲೇ ಮತ್ತೊಂದು ಸ್ಫೋಟಕ ಆರೋಪ ಹೊರಬಿದ್ದಿದೆ. ಟೆಂಡರ್ ಅಕ್ರಮಕ್ಕಾಗಿ 40 ಲಕ್ಷ ರೂಪಾಯಿ ಲಂಚ ಕೊಡುವ ವೇಳೆ ರೆಡ್​ ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದ ಕಂಪನಿಯೊಂದಕ್ಕೆ ಮತ್ತೆ ಬಹುಕೋಟಿ ಟೆಂಡರ್​ ನೀಡಲಾಗಿದೆ. ಟೆಂಡರ್​ ನಿಯಮಗಳನ್ನು ಗಾಳಿಗೆ ತೂರಿ ಈ ಕಂಪನಿಗೆ ಸ್ಯಾಂಡಲ್​ವುಡ್​ ಆಯಿಲ್​ ಮತ್ತು ನೂಡಲ್ಸ್​ ಪೂರೈಕೆಯ ಗುತ್ತಿಗೆ ನೀಡಲಾಗಿದ್ದು, ಭಾರೀ ಕಿಕ್​ಬ್ಯಾಕ್​ನ ಆರೋಪ ಕೇಳಿ ಬಂದಿದೆ.

ಮಾರುಕಟ್ಟೆ ದರಕ್ಕಿಂತ 2ರಷ್ಟು ಹೆಚ್ಚಿನ ದರ ನೀಡಿ ಕಾರ್ಯಾದೇಶ ನೀಡಲಾಗಿದೆ. ಈ ಪ್ರಕರಣದಲ್ಲಿ ಪಿ.ಎನ್. ಕಮಿಟಿಯು ಸೂಕ್ತ ನಿಗಾವಣೆ ಮಾಡಿಲ್ಲ. ಕೆಟಿಪಿಪಿ ಆ್ಯಕ್ಟ್ ಉಲ್ಲಂಘಿಸಿ ಪಕ್ಷಪಾತ ಎಸಗಲಾಗಿದೆ. ಕಳಂಕಿತ ಕರ್ನಾಟಕ ಕೆಮಿಕಲ್ಸ್​ ಮತ್ತು ಕರ್ನಾಟಕ ಅರೋಮ ಕಂಪನಿಗಳಿಗೆ ಅಕ್ರಮವಾಗಿ ಲಾಭ ಮಾಡಿಕೊಡಲಾಗಿದೆ ಎಂದು ಕೆಎಸ್​ಡಿಎಲ್​ ವ್ಯವಸ್ಥಾಪಕ ನಿರ್ದೇಶಕರಿಗೆ ದೂರು ನೀಡಲಾಗಿದೆ.

ಕೆಎಸ್​ಡಿಎಲ್​ ಅಧಿಕಾರಿಗಳಾದ ಬಿ.ಎನ್​.ಅರವಿಂದ್ ಹಾಗೂ ಸುಂದರಮೂರ್ತಿ ಇವರ ಮೇಲೆ ಲೋಕಾಯುಕ್ತ ತನಿಖೆ ನಡೆಯುತ್ತಿದ್ದು, ಇವರನ್ನೇ ಮಹತ್ವದ ಹುದ್ದೆಗೆ ಕೂರಿಸಲಾಗಿದೆ. ಇವರಿಬ್ಬರ ಮೇಲೆ ಕರ್ನಾಟಕ ಕೆಮಿಕಲ್ಸ್​ ಕಂಪನಿಯಿಂದ ಭಾರೀ ಪ್ರಮಾಣದಲ್ಲಿ ಲಂಚ ಪಡೆದಿರುವ ಆರೋಪ ಹೊರಿಸಲಾಗಿದೆ. ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಕೆಎಸ್​ಡಿಎಲ್​ ಅಧ್ಯಕ್ಷರು ಹಾಗೂ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರಿಗೂ ದೂರಿನ ಪ್ರತಿಯನ್ನು ಸಲ್ಲಿಸಲಾಗಿದೆ.

​ಇನ್ನು ಮೈಸೂರು ಸ್ಯಾಂಡಲ್​ ಸೋಪ್​ ಫ್ಯಾಕ್ಟರಿಯಲ್ಲಿ ಭ್ರಷ್ಟಾಚಾರ ಮನೆ ಮಾಡಿದ್ದು ಖರೀದಿ, ಉತ್ಪಾದನೆಯಲ್ಲಿ ಗುಣಮಟ್ಟ ಕುಸಿಯುತ್ತಿದೆ. ಕಿಕ್​ಬ್ಯಾಕ್​ ದಂಧೆ ಮನೆ ಮಾಡಿದ್ದು, ಕರ್ನಾಟಕದ ಹೆಮ್ಮೆಯ ಮೈಸೂರು ಸ್ಯಾಂಡಲ್​ ಸೋಪ್ ಕ್ವಾಲಿಟಿ ಮೇಲೆ ಹೊಡೆತ ಬೀಳುತ್ತಿದೆ ಎಂಬ ದೂರುಗಳು ಹೆಚ್ಚುತ್ತಿವೆ. ಫ್ಯಾಕ್ಟರಿಯನ್ನು ವಿಶ್ವದರ್ಜೆಗೆ ಏರಿಸುತ್ತೇನೆ ಸಚಿವ ಎಂ.ಬಿ.ಪಾಟೀಲರು ಕೂಡಲೇ ನಿಗಾ ವಹಿಸಿ ಸರಿ ದಾರಿಗೆ ತರಲೆಂದು ಕಾರ್ಖಾನೆಯ ನೌಕರರು ಒತ್ತಾಯಿಸಿದ್ದಾರೆ.

ಇನ್ನೂ 12 ದಿನ ಮೈಸೂರಿನ ವಿದ್ಯುತ್ ದೀಪಾಲಂಕಾರ ಅವಧಿ ವಿಸ್ತರಣೆ

Leave a Reply

Your email address will not be published. Required fields are marked *