ಮೈಸೂರು: ಬಿಜೆಪಿ ನೀಡಿದ್ದ ಜಾಹೀರಾತನ್ನು ಈಗ ಕಾಂಗ್ರೆಸ್ ಅಸ್ತ್ರ ಮಾಡಿಕೊಂಡು ದೊಸ್ತಿ ವಿರುದ್ಧ ಠಕ್ಕರ್ ನೀಡುತ್ತಿದೆ.
ಇಂದು ಮಹಾರಾಜ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ ಜನಾಂದೋಲನ ಸಮಾವೇಶ ನಡೆಯಲಿದೆ. ಈ ಸಮಾವೇಶದಲ್ಲಿ ಬಿಜೆಪಿ ಈ ಹಿಂದೆ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ವಿರುದ್ದ ನೀಡಿದ್ದ ಜಾಹೀರಾತನ್ನು ಅಸ್ತ್ರವಾಗಿ ಬಳಸಿದೆ.
ದೇವೇಗೌಡರ ಕುಟುಂಬ ಮುಡಾ ಸೈಟ್ ಗಳ ಪಡೆದ ಬಗ್ಗೆ ಈ ಹಿಂದೆ ಬಿಜೆಪಿ ನೀಡಿದ್ದ ಜಾಹೀರಾತನ್ನು ಕಾಂಗ್ರೆಸ್ ಬಳಸಿಕೊಂಡಿದೆ. ನಗರದ ಹಲವು ಸರ್ಕಲ್ನಲ್ಲಿ ಫ್ಲೆಕ್ಸ್ ಅಳವಡಿಕೆ ಮಾಡಲಾಗಿದೆ. ಫೆಬ್ರವರಿ ತಿಂಗಳಿನಲ್ಲಿ ಬಿಜೆಪಿ ನೀಡಿರುವ ಜಾಹೀರಾತೇ ಈಗ ಕಾಂಗ್ರೆಸ್ ಬ್ರಹ್ಮಾಸ್ತ್ರವಾಗಿದೆ.
ಮಹಾರಾಜ ಮೈದಾನದಲ್ಲಿ 11 ಗಂಟೆಗೆ ಜನಾಂದೋಲನ ಸಮಾವೇಶ ನಡೆಯಲಿದೆ. ಸುಮಾರು 1 ಲಕ್ಷಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಾಧ್ಯತೆಯಿದೆ.
ಬೆಕ್ಕು ಸಾಕುವವರೇ ಹುಷಾರಾಗಿರಿ! ಶಿವಮೊಗ್ಗದಲ್ಲಿ ಸಾಕು ಬೆಕ್ಕು ಕಚ್ಚಿ ಮಹಿಳೆ ದುರಂತ ಸಾವು


