BBMP
Loading ...

ಬೆಂಗಳೂರು: ರಾಜಧಾನಿಯಲ್ಲಿ ಚುಮು ಚುಮು ಚಳಿ ಆರಂಭವಾಗಿದೆ. ರಾತ್ರಿಯಾಗುತ್ತಿದ್ದಂತೆಯೇ ಆರಂಭವಾಗುವ ಚಳಿ ಸೂರ್ಯೋದಯದವರೆಗೂ ಹಾಗೆಯೇ ಇರುತ್ತದೆ. ಮುಂದಿನ ವಾರದಿಂದ ಚಳಿ ಇನ್ನಷ್ಟು ಹೆಚ್ಚಾಗುವ ಸಂಭವವಿದೆ.

ಬೆಂಗಳೂರಿನಲ್ಲಿ ಡಿಸೆಂಬರ್‌ನಿಂದ ಫೆಬ್ರವರಿವರೆಗೆ ಚಳಿಗಾಲ ಇರಲಿದ್ದು, ಈಗಾಗಲೇ ಚಳಿ ಆರಂಭವಾಗಿದೆ. ಸಾಮಾನ್ಯವಾಗಿ ನಗರದಲ್ಲಿ ಡಿಸೆಂಬರ್‌ ಮೂರನೇ ವಾರದ ವೇಳೆಗೆ ತಾಪಮಾನ ಕಡಿಮೆಯಾಗುತ್ತದೆ. ಈ ವರ್ಷವೂ ಇದೇ ಅವಧಿಯಲ್ಲಿ ತಾಪಮಾನ ಕಡಿಮೆಯಾಗಲಿದೆ. ಪ್ರಸಕ್ತ ವರ್ಷ ಲಾ-ನಿನಾ ವಾತಾವರಣ ಇರುವುದರಿಂದ, ಚಳಿಯ ಪ್ರಮಾಣ ಹೆಚ್ಚಿರಲಿದೆ. ಕರ್ನಾಟಕದಲ್ಲಿ ಇನ್ನೂ ಎರಡು ತಿಂಗಳ ಕಾಲ ಕನಿಷ್ಠ ಮತ್ತು ಗರಿಷ್ಠ ತಾಪಮಾನದಲ್ಲಿ ಸರಾಸರಿ 3 ರಿಂದ 4 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ಕಡಿಮೆಯಾಗುವ ಸಾಧ್ಯತೆ ಇದೆ ಎನ್ನುತ್ತಾರೆ ಹಿರಿಯ ಹವಾಮಾನ ತಜ್ಞ ಶ್ರೀನಿವಾಸ ರೆಡ್ಡಿ.

ಕಳೆದ ನಾಲ್ಕು ದಿನಗಳಿಂದ ರಾಜಧಾನಿಯಲ್ಲಿ ಹವಾಮಾನ ಗರಿಷ್ಠ ತಾಪಮಾನ ಸರಾಸರಿ 27 ಡಿ.ಸೆ. ಹಾಗೂ ಕನಿಷ್ಠ ತಾಪಮಾನ 19 ಡಿ.ಸೆ. ದಾಖಲಾಗುತ್ತಿದೆ.

”ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಚಳಿಗಾಲ ತುಸು ಹೆಚ್ಚಿರಲಿದೆ. ಕಾರಣ ಸಾಕಷ್ಟು ಮಳೆಯಾಗಿದ್ದು, ಕೆರೆ, ನದಿ, ಅಣೆಕಟ್ಟೆಗಳಲ್ಲಿ ನೀರಿದೆ. ಮರ – ಗಿಡಗಳು ಹಸಿರಿನಿಂದ ಕೂಡಿವೆ. ಅಷ್ಟೇ ಅಲ್ಲದೆ, ಈ ವರ್ಷ ಲಾ ನಿನಾ ವಾತಾವರಣ ಇರುವುದರಿಂದ ಚಳಿಗಾಲಕ್ಕೆ ಪೂರಕ ವಾತಾವರಣವಿದೆ. ಈ ಎಲ್ಲದರ ಹಿನ್ನೆಲೆಯಲ್ಲಿ ಈ ವರ್ಷ ಚಳಿಯ ಪ್ರಮಾಣ ಹೆಚ್ಚಿರಲಿದೆ,” ಎನ್ನುತ್ತಾರೆ ಶ್ರೀನಿವಾಸ ರೆಡ್ಡಿ.

ಬದಲಾದ ಹವಾಮಾನದ ಪರಿಣಾಮ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಈಗಾಗಲೇ ಚಳಿ ಹೆಚ್ಚಾಗಿದೆ. ನ.20ರಂದು ಬೀದರ್‌ ಮತ್ತು ವಿಜಯಪುರದಲ್ಲಿ ಕನಿಷ್ಠ ಉಷ್ಣಾಂಶ 12.05 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ. ಅಂದರೆ ಅಲ್ಲಿ ಚಳಿ ಹೆಚ್ಚಳವಾಗಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಕನಿಷ್ಠ ಉಷ್ಣಾಂಶ 18.8 ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕನಿಷ್ಠ ಉಷ್ಣಾಂಶ 18.6 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿತ್ತು. ರಾತ್ರಿ ವೇಳೆ ಮತ್ತು ಮುಂಜಾನೆ, ಬೆಳಗ್ಗೆ ಹೊತ್ತು ಈ ಜಿಲ್ಲೆಗಳಲ್ಲಿ ಚಳಿ ಹೆಚ್ಚಾಗಿದೆ.

ಬೆಂಗಳೂರಿನಲ್ಲಿ ಚಳಿ ಹೆಚ್ಚಾಗಿರುವ ಕಾರಣದಿಂದ ಹಚ್ಚಿನ ಜನರು ಉಣ್ಣೆ ಬಟ್ಟೆಗೆ ಮೊರೆ ಹೋಗಿದ್ದಾರೆ, ಸ್ವೆಟರ್‌, ಜರ್ಕಿನ್‌, ಕಿವಿ ಮುಚ್ಚುವ ಟೋಪಿಗಳನ್ನು ಜನರು ಹೆಚ್ಚಾಗಿ ಬಳಸಲಾರಂಭಿಸಿದ್ದಾರೆ.

ಬೆಂಗಳೂರಿನಲ್ಲಿಚಳಿಯ ವಾತಾವರಣವಿದೆ ಅಷ್ಟೇ, ಚಳಿಗಾಲ ಇನ್ನೂ ಆರಂಭವಾಗಿಲ್ಲ. ಗರಿಷ್ಠ ತಾಪಮಾನ 23-24 ಡಿಗ್ರಿ ಸೆಲ್ಸಿಯಸ್‌ಗೆ ಹಾಗೂ ಹಾಗೂ ಕನಿಷ್ಠ ತಾಪಮಾನ 16 ಡಿ.ಸೆ.ಗಿಂತ ಕಡಿಮೆ ಬಂದರೆ ಚಳಿಗಾಲವೆಂದು ಹೇಳಬಹುದು. ಇನ್ನೂ ಒಂದು ಚಂಡಮಾರುತ ಬರುವ ಸಾಧ್ಯತೆ ಇದ್ದು, ಈ ತಿಂಗಳ ಅಂತ್ಯಕ್ಕೆ ಅದು ಬರಬಹುದು. ಇಲ್ಲವೇ ಬೇರೆ ದಿಕ್ಕಿನ ಕಡೆ ಚಲಿಸಬಹುದು. ಈ ಚಂಡಮಾರುತದ ಸ್ಥಿತಿಗತಿ ನಂತರವಷ್ಟೇ ಚಳಿಗಾಲ ಆರಂಭದ ಬಗ್ಗೆ ಹೇಳಬಹುದು ಎಂದು ವಿಜ್ಞಾನಿ ಮತ್ತು ಬೆಂಗಳೂರಿನ ಭಾರತೀಯ ಹವಾಮಾನ ಇಲಾಖೆ ನಿರ್ದೇಶಕ.

ರಾಜ್ಯ ಸರ್ಕಾರ ಹಠಕ್ಕೆ ಬಿದ್ದು ಜಾತಿ ಜನಗಣತಿ ಜಾರಿಗೆ ತರಬಾರದು, ಹಳೆಯ ವರದಿಗೆ ನ್ಯಾಯ ಸಿಗಲ್ಲ: ಶ್ರೀ ನಂಜಾವಧೂತ ಸ್ವಾಮೀಜಿ ಹೇಳಿಕೆ

Leave a Reply

Your email address will not be published. Required fields are marked *