BBMP
Loading ...

GST Strike

ಬೆಂಗಳೂರು: ಲಕ್ಷ ಲಕ್ಷ ರೂಪಾಯಿ ತೆರಿಗೆ, ಸಣ್ಣ ಸಣ್ಣ ವರ್ತಕರ ಮೇಲೆ ಬರೆ. ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆ ನೀಡಿರುವ ತೆರಿಗೆ ನೋಟಿಸ್‌ಗಳಿಂದ ಕಂಗಲಾಗಿರುವ ಅಂಗಡಿ ಮಾಲೀಕರು ಇದೀಗ ಕೆರಳಿದ್ದಾರೆ. ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಸರ್ಕಾರಕ್ಕೆ ಒಗ್ಗಟ್ಟು ತೋರಿಸಲು, ಸರ್ಕಾರವನ್ನು ಪ್ರಶ್ನಿಸಲು ನಿರ್ಧರಿಸಿದ್ದಾರೆ. ಜುಲೈ 23ರಿಂದ ಜುಲೈ 25ರವರೆಗೆ ಹಂತ ಹಂತವಾಗಿ ಅಂಗಡಿ ಬಂದ್ ಮಾಡಲಾಗುತ್ತದೆ ಎಂದು ವರ್ತಕರು ತಿಳಿಸಿದ್ದಾರೆ. ಹೀಗಾಗಿ ಕಾರ್ಮಿಕ ಪರಿಷತ್ ಸದ್ಯ ಪ್ರತಿ ಅಂಗಡಿಗೂ ತೆರಳಿ ಕರಪತ್ರ ನೀಡುತ್ತಿದೆ. ಬಂದ್‌ಗೆ ಬಂಬಲಿಸಿ ಎಂದು ಮನವಿ ಮಾಡುತ್ತಿದೆ.

ವರ್ತಕರ ಹೋರಾಟ ಹೇಗಿರುತ್ತೆ? ಮುಷ್ಕರದ ವೇಳೆ ಏನೇನಿರಲ್ಲ?
* ಜುಲೈ 25ರಂದು ಅಂಗಡಿ ಮುಂಗಟ್ಟು ಬಂದ್‌ಗೆ ವ್ಯಾಪಾರಸ್ಥರ ನಿರ್ಧಾರ.
* ಜುಲೈ 23-24 ರಂದು ಹಾಲು ಮಾರಾಟ ಬಂದ್.
* ಜುಲೈ 23-24 ರಂದು ಕಪ್ಪು ಪಟ್ಟಿ ಧರಿಸಿ ಹಾಲು ಇಲ್ಲದ ಕಾಫಿ, ಚಹಾ ಮಾತ್ರ ಮಾರಾಟ.
* ಜುಲೈ 25 ರಂದು ಅಂಗಡಿ ಬಂದ್ ಮಾಡಿ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ.
* ಪ್ರತಿಭಟನೆಯಲ್ಲಿ ಬೇಕರಿ, ಕಾಂಡಿಮೆಂಟ್ಸ್, ಕಾಫಿ-ಟೀ ಶಾಪ್, ಸಣ್ಣಪುಟ್ಟ ವ್ಯಾಪಾರಿಗಳು, ಕುಟುಂಬದವರು ಭಾಗಿಯಾಗಲಿದ್ದಾರೆ.
* ಜುಲೈ 25 ರಂದು ಬೇಕರಿ, ಕಾಂಡಿಮೆಂಟ್ಸ್, ಕಾಫಿ-ಟೀ ಶಾಪ್, ಸಣ್ಣಪುಟ್ಟ ವ್ಯಾಪಾರಿಗಳ ವ್ಯವಹಾರ ಬಂದ್.
ಮುಷ್ಕರದ ವೇಳೆ ಏನೇನಿರುತ್ತೆ?
* ಜುಲೈ 23-24ರಂದು ಹಾಲು ಹೊರತುಪಡಿಸಿ ಉಳಿದ ವಸ್ತುಗಳ ವ್ಯಾಪಾರ ಇರಲಿದೆ.
* ಜುಲೈ 25 ರಂದು ಬೇಕರಿ, ಕಾಂಡಿಮೆಂಟ್ಸ್, ಕಾಫಿ-ಚಹಾ ಅಂಗಡಿಗಳು, ಸಣ್ಣಪುಟ್ಟ ವ್ಯಾಪಾರಿಗಳ ವ್ಯವಹಾರ ಬಂದ್ ಇರಲಿದ್ದು, ಉಳಿದಂತೆ ಇತರೆ ಎಲ್ಲಾ ಸೇವೆಗಳು ಲಭ್ಯವಿರಲಿವೆ.

ಒಂದು ವಾರ ಬಂದ್‌ಗೂ ಸಿದ್ಧ: ಅಂಗಡಿ ಮಾಲೀಕರು
ಜುಲೈ 25ರ ಬಂದ್‌ಗೆ ಅಂಗಡಿ ಮಾಲೀಕರು ಬೆಂಬಲ ಸೂಚಿಸಿದ್ದು, ಅನಿವಾರ್ಯವಾದಲ್ಲಿ ಒಂದು ವಾರದ ಬಂದ್​ಗೂ ಸಿದ್ಧ ಎಂದಿದ್ದಾರೆ.

ಕೇಂದ್ರ ಸರ್ಕಾರದ ಜೊತೆ ಮಾತನಾಡುತ್ತೇನೆಂದ ಸಿಎಂ
ತೆರಿಗೆ ಗೊಂದಲದ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಕೇಂದ್ರ ಸರ್ಕಾರದ ಜೊತೆ ಮಾತನಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲಾಗದೆ ನೋಟಿಸ್ ನೀಡುತ್ತಿದ್ದಾರೆ ಎಂದು ರಾಜ್ಯಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆರೋಪಿಸಿದ್ದರು. ಇದಕ್ಕೆ ತಿರುಗೇಟು ಕೊಟ್ಟಿರುವ ಸಿಎಂ, ಜಿಎಸ್​ಟಿ ಕೇಂದ್ರ ಸರ್ಕಾರದ್ದು, ನಮ್ಮ ವ್ಯಾಪ್ತಿಗೆ ಹೇಗೆ ಬರುತ್ತದೆ ಎಂದು ಮರುಪ್ರಶ್ನೆ ಮಾಡಿದ್ದಾರೆ.

ರಾಜಕೀಯ, ಹೋರಾಟ ಏನೇ ಇದ್ದರೂ ವ್ಯಾಪಾರಸ್ಥರು ಮಾತ್ರ ನೋಟಿಸ್‌ ವಿರುದ್ಧ ಸಿಡಿದೆದ್ದಿದ್ದಾರೆ. ಆದರೆ, ದಾಖಲೆ ಸಮೇತ ಮಾಹಿತಿ ನೀಡಿದರೆ, ಲಕ್ಷಾಂತರ ರೂಪಾಯಿ ತೆರಿಗೆ ಪಾವತಿಸುವ ಅಗತ್ಯವಿಲ್ಲ ಎಂದು ವಾಣಿಜ್ಯ ತೆರಿಗೆ ಇಲಾಖೆ ಹೇಳಿದೆ. ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್ ಪಡೆದವರ ಗೊಂದಲಕ್ಕೆ ಸರ್ಕಾರ ಯಾವಾಗ ತೆರೆ ಎಳೆಯುತ್ತದೆ ಎಂದುದನ್ನು ಕಾದು ನೋಡಬೇಕಿದೆ.

ಬಿಬಿಎಂಟಿಸಿಗೆ ಯುವತಿ ಬಲಿ ಪ್ರಕರಣ : ಮೃತಳ ಕುಟುಂಬಸ್ಥರಿಗೆ ಕೇವಲ 1 ಲಕ್ಷ ಪರಿಹಾರ ಘೋಷಣೆ!

Leave a Reply

Your email address will not be published. Required fields are marked *